Kannadavahini

ಬಾರಿಸು ಕನ್ನಡ ಡಿಂಡಿಮವ

Month: April 2024

ಲಕ್ನೋಗೆ 4 ವಿಕೆಟ್ ಜಯ, ಮುಂಬೈಗೆ ಪ್ಲೇಆಫ್ ಕನಸು ಭಗ್ನ

ಸಂಘಟಿತ ಪ್ರದರ್ಶನ ನೀಡಿದ ಲಕ್ನೋ ಸೂಪರ್ ಜೈಂಟ್ಸ್ ತಂಡ 4 ವಿಕೆಟ್ ಗಳಿಂದ 5 ಬಾರಿಯ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡವನ್ನು ಸೋಲಿಸಿ ಐಪಿಎಲ್ ಟಿ-20 ಟೂರ್ನಿಯಲ್ಲಿ ಪ್ಲೇಆಫ್ ಮತ್ತಷ್ಟು ಹತ್ತಿರವಾಗಿದೆ. ಮಂಗಳವಾರ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಮುಂಬೈ ಇಂಡಿಯನ್ಸ್ ತಂಡವನ್ನು 20 ಓವರ್ ಗಳಲ್ಲಿ 7 ವಿಕೆಟ್ ಕಳೆದುಕೊಂಡು 144 ರನ್…

45 ಡಿಗ್ರಿಗೆ ಏರಲಿದೆ `ಬಿಸಿ’ಗಾಳಿ: 4 ರಾಜ್ಯಗಳಲ್ಲಿ ರೆಡ್ ಅಲರ್ಟ್ ಘೋಷಣೆ

ಮುಂದಿನ 2-3 ದಿನಗಳಲ್ಲಿ ಬಿಸಿಗಾಳಿ ಆರ್ಭಟ ಹೆಚ್ಚಾಗಲಿದ್ದು, 45 ಡಿಗ್ರಿ ಉಷ್ಣಾಂಶಕ್ಕೆ ಏರುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಹವಮಾನ ಇಲಾಖೆ 4 ರಾಜ್ಯಗಳಲ್ಲಿ ರೆಡ್ ಅಲರ್ಟ್ ಘೋಷಿಸಿದೆ. ಆಂಧ್ರಪ್ರದೇಶ, ಬಿಹಾರ, ಪಶ್ಚಿಮ ಬಂಗಾಳ ಮತ್ತು ಒಡಿಶಾ ರಾಜ್ಯಗಳಲ್ಲಿ ಬಿಸಿಗಾಳಿ ಪ್ರಭಾವ ಹೆಚ್ಚಾಗಲಿದ್ದು, ಜನರು ಮನೆಯಿಂದ ಹೊರಗೆ ಬರುವ ಮುನ್ನ ಮುನ್ನೆಚ್ಚರಿಕೆ ವಹಿಸುವಂತೆ ಹವಾಮಾನ…

ಟಿ-20 ವಿಶ್ವಕಪ್ ತಂಡ ಪ್ರಕಟ: ಕೆಎಲ್ ರಾಹುಲ್ ಗೆ ಕೊಕ್, ಕೊಹ್ಲಿಗೆ ಚಾನ್ಸ್!

ಕರ್ನಾಟಕದ ಯುವ ವಿಕೆಟ್ ಕೀಪರ್ ಮತ್ತು ಬ್ಯಾಟ್ಸ್ ಮನ್ ಕೆಎಲ್ ರಾಹುಲ್ ಅವರನ್ನು ಭಾರತದ ಟಿ-20 ವಿಶ್ವಕಪ್ ತಂಡದಿಂದ ಕೈಬಿಡಲಾಗಿದ್ದರೆ, ಫಾರ್ಮ್ ಕೊರತೆ ಎದುರಿಸುತ್ತಿರುವ ಹಾರ್ದಿಕ್ ಪಾಂಡ್ಯಗೆ ಉಪನಾಯಕನ ಪಟ್ಟ ನೀಡಲಾಗಿದೆ. ನಾಯಕ ರೋಹಿತ್ ಶರ್ಮ ಮತ್ತು ಅಧ್ಯಕ್ಷ ಅಜಿತ್ ಅರ್ಗಕರ್ ನೇತೃತ್ವದ ಬಿಸಿಸಿಐ ಆಯ್ಕೆ ಸಮಿತಿ ಸದಸ್ಯರು ಮುಂಬೈನಲ್ಲಿ ಭಾನುವಾರ ಸುದೀರ್ಘ ಚರ್ಚೆ ಬಳಿಕ…

ಭಾರತ ಸೂಪರ್ ಪವರ್ ಆಗುತ್ತಿದ್ದರೆ ನಾವು ಭಿಕ್ಷುಕರಾಗಿದ್ದೇವೆ: ಪಾಕಿಸ್ತಾನ ಸಚಿವ

ನಾವು ಭಾರತದ ಜೊತೆ ಹೋಲಿಕೆ ಮಾಡಿಕೊಂಡು ನೋಡೋಣ. ಎರಡೂ ದೇಶಗಳು ಒಂದೇ ದಿನ ಸ್ವಾತಂತ್ರ್ಯಗೊಂಡವು. ಆದರೆ ಭಾರತ ಸೂಪರ್ ಪವರ್ ರಾಷ್ಟ್ರವಾಗಿದ್ದರೆ, ನಾವು ಭಿಕ್ಷುಕರಾಗಿದ್ದೇವೆ ಎಂದು ಪಾಕಿಸ್ತಾನ ಸಚಿವ ಮೌಲಾನಾ ಫಜ್ಲುರ್ ರೆಹಮಾನ್ ಸಂಸತ್ ಅಧಿವೇಶನದಲ್ಲಿ ಹೇಳಿದ್ದಾರೆ. ಸಂಸತ್ ಅಧಿವೇಶನದಲ್ಲಿ ಮಾತನಾಡಿದ ಅವರು, ಭಾರತ ಇಂದು ಸೂಪರ್ ಪವರ್ ರಾಷ್ಟ್ರವಾಗುವ ಕನಸು ಕಾಣುತ್ತಿದೆ. ಆದರೆ ಪಾಕಿಸ್ತಾನ…

ನಟಿ ಅಮೃತಾ ಪಾಂಡೆ ಆತ್ಮಹತ್ಯೆ, ವಾಟ್ಸಪ್ ಸ್ಟೇಟಸ್ ವೈರಲ್!

ನಟಿಯಾಗಿ ಅಮೃತಾ ಪಾಂಡೆಯಾಗಿ ಗುರುತಿಸಿಕೊಂಡಿದ್ದ ಭೋಜಪುರಿ ನಟಿ ಅನುಪಮಾ ಬಿಹಾರದ ಭಾಗಲ್ಪುರದ ತಮ್ಮ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಟಿ ಆತ್ಮಹತ್ಯೆಗೂ ಮುನ್ನ ವಾಟ್ಸಪ್ ಸ್ಟೇಟಸ್ ಮತ್ತು ಇನ್ ಸ್ಟಾಗ್ರಾಂನಲ್ಲಿ ಮುಳುಗುವ ಹಡುಗಿನ ಪೋಸ್ಟ್ ಮಾಡಿರುವುದು ವೈರಲ್ ಆಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ. ಅಮೃತಾ ಪಾಂಡೆ ಶವ ಕುತ್ತಿಗೆ ಸುತ್ತ ಸೀರೆ ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಸ್ಥಳದಲ್ಲಿದ್ದ…

ಐಪಿಎಲ್: ಕೆಕೆಆರ್ ಗೆ ಸುಲಭ ತುತ್ತಾದ ಡೆಲ್ಲಿ ಕ್ಯಾಪಿಟಲ್ಸ್!

ಸ್ಪಿನ್ನರ್ ಗಳ ಸಹಾಯದಿಂದ ಕೋಲ್ಕತಾ ನೈಟ್ ರೈಡರ್ಸ್ ತಂಡ 7 ವಿಕೆಟ್ ಗಳಿಂದ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಸೋಲಿಸಿ ಐಪಿಎಲ್ ಟಿ-20 ಟೂರ್ನಿಯ ಅಂಕಪಟ್ಟಿಯಲ್ಲಿ 2ನೇ ಸ್ಥಾನ ಮತ್ತಷ್ಟು ಭದ್ರಪಡಿಸಿಕೊಂಡಿದೆ. ಕೋಲ್ಕತಾದ ಈಡನ್ ಗಾರ್ಡನ್ ಮೈದಾನದಲ್ಲಿ ಸೋಮವಾರ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ 20 ಓವರ್ ಗಳಲ್ಲಿ 9 ವಿಕೆಟ್ ಕಳೆದುಕೊಂಡು…

ಸರ್ಕಾರಿ ಗೌರವಗಳೊಂದಿಗೆ ಶ್ರೀನಿವಾಸ್ ಪ್ರಸಾದ್ ಅಂತ್ಯಕ್ರಿಯೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಿಜೆಪಿ ಸಂಸದ ಶ್ರೀನಿವಾಸ್ ಪ್ರಸಾದ್ ಅವರ ನಿಧನಕ್ಕೆ ಗೌರವ ಸೂಚಕವಾಗಿ ಚಾಮರಾಜನಗರ ಜಿಲ್ಲೆಗಳಲ್ಲಿ ರಜೆ ಘೋಷಣೆ ಮಾಡಿದ್ದು, ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಯಲಿದೆ ಎಂದು ಮುಖ್ಯಮಂತ್ರಿ  ಸಿದ್ದರಾಮಯ್ಯ ತಿಳಿಸಿದ್ದಾರೆ. ಅವರು ಇಂದು ಚಾಮರಾಜನಗರದ ಹಾಲಿ ಸಂಸದರಾಗಿದ್ದ ದಿವಂಗತ ಶ್ರೀನಿವಾಸ್ ಪ್ರಸಾದ್ ರವರ ಪ್ರಾರ್ಥಿವ ಶರೀರಕ್ಕೆ ಮಾಲಾರ್ಪಣೆ ಮಾಡಿ ಅವರ ಕುಟುಂಬಕ್ಕೆ ಸಾಂತ್ವನ ಹೇಳಿದ ನಂತರ ಮಾಧ್ಯಮ…

‘ಪತಂಜಲಿ ಆಯುರ್ವೇದ’ದ ’15 ಉತ್ಪನ್ನ’ಗಳ ಲೈಸೆನ್ಸ್ ರದ್ದು!

ಯೋಗ ಗುರು ಬಾಬಾ ರಾಮ್ ದೇವ್ ಒಡೆತನದ ಪತಂಜಲಿ ಆಯುರ್ವೇದ ಸಂಸ್ಥೆ ತಯಾರಿಸಿದ ಸುಮಾರು 15 ಉತ್ಪನ್ನಗಳ ಮೇಲಿನ ಪರವಾನಯನ್ನು ಉತ್ತರಾಖಂಡ ಸರ್ಕಾರದ ನಿಯಂತ್ರಕ ಅಮಾನತುಗೊಳಿಸಿದೆ. ಉತ್ತರಾಖಂಡ ಸರ್ಕಾರ ಏಪ್ರಿಲ್ 24ರಂದು ಹೊರಡಿಸಿದ ಅಧಿಸೂಚನೆಯಲ್ಲಿ ಜನರನ್ನು ತಪ್ಪು ದಾರಿಗೆಳೆಯುವ ಜಾಹಿರಾತು ನೀಡಿದ್ದಕ್ಕಾಗಿ ಪತಂಜಲಿ ಸಂಸ್ಥೆಯ 15 ಉತ್ಪನ್ನಗಳ ಪರವಾನಗಿಯನ್ನು ತತ್ ಕ್ಷಣದಿಂದಲೇ ಜಾರಿಗೆ ಬರುವಂತೆ ರದ್ದುಪಡಿಸಲಾಗಿದೆ…

ಕಾವೇರಿಯಲ್ಲಿ ಮುಳುಗಿ ಮೂವರು ಯುವತಿಯರು ಸೇರಿದಂತೆ 5 ಇಂಜಿನಿಯರ್ ವಿದ್ಯಾರ್ಥಿಗಳ ಸಾವು

ಕಾವೇರಿ ಸಂಗಮದಲ್ಲಿ ಈಜಲು ತೆರಳಿದ್ದ ಬೆಂಗಳೂರಿನ ಮೂವರು ಯುವತಿಯರು ಸೇರಿದಂತೆ 5 ಮಂದಿ ಇಂಜಿನಿಯರ್ ಗಳು ಮೃತಪಟ್ಟ ದಾರುಣ ಘಟನೆ ಬೆಂಗಳೂರು ಹೊರವಲಯದ ಕನಕಪುರದಲ್ಲಿ ಸಂಭವಿಸಿದೆ. ಕನಕಪುರದ ಸಂಗಮದಲ್ಲಿ ಈಜಲು ತೆರಳಿದ್ದ ಬೆಂಗಳೂರು ಮೂಲದ ಇಂಜಿನಿಯರ್ ಗಳು ಮೃತಪಟ್ಟಿದ್ದು, ಇವರ ವಿವರಗಳ ಸಂಗ್ರಹ ಕಾರ್ಯ ನಡೆದಿದೆ. ನದಿಯಲ್ಲಿ ಮುಳುಗಿದ 5 ವಿದ್ಯಾರ್ಥಿಗಳ ಶವಗಳನ್ನು ಹೊರತೆಗೆಯಲಾಗಿದ್ದು, ಪೊಲೀಸರು…

ಆಸ್ತಿಗಾಗಿ ಅಪ್ಪ ಸಾಯುವಂತೆ ಮುಖದ ಮೇಲೆ ಪದೇಪದೆ ಗುದ್ದಿದ ಕಿರಾತಕ ಮಗ!

ಆಸ್ತಿ ಹಂಚಿಕೆ ಕುರಿತು ಅಸಮಾಧಾನಗೊಂಡ ಮಗ ಮುಖದ ಮೇಲೆ ಪದೇಪದೆ ಪಂಚ್ ಮಾಡಿದ್ದೂ ಅಲ್ಲದೇ ಕಾಲಿನಿಂದ ಜಾಡಿಸಿ ಒದಿದ್ದರಿಂದ ತಂದೆ ಮೃತಪಟ್ಟ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ಪೆರಂಬೂರಿನಲ್ಲಿ 65 ವರ್ಷದ ವೃದ್ಧ ತಂದೆ ಕುಲಂದೈವೆಲು ಪುತ್ರ ಸಂತೋಷ್ ಹಲ್ಲೆ ನಂತರ ಕೆಲವೇ ದಿನಗಳಲ್ಲಿ ಮೃತಪಟ್ಟಿದ್ದಾರೆ. ಪೊಲೀಸರು ತಂದೆ ಸಾವಿನ ಕುರಿತು ತನಿಖೆ ನಡೆಸುವಾಗ ಸಿಸಿಟಿವಿ ದೃಶ್ಯ…