Thursday, September 19, 2024
Google search engine
Homeಜಿಲ್ಲಾ ಸುದ್ದಿಗಣೇಶ ವಿಸರ್ಜನೆ ವೇಳೆ ನೀರಲ್ಲಿ ಮುಳುಗಿ ತಂದೆ-ಮಗ ಸೇರಿ ಮೂವರ ದುರ್ಮರಣ

ಗಣೇಶ ವಿಸರ್ಜನೆ ವೇಳೆ ನೀರಲ್ಲಿ ಮುಳುಗಿ ತಂದೆ-ಮಗ ಸೇರಿ ಮೂವರ ದುರ್ಮರಣ

ಗಣೇಶ ವಿಸರ್ಜನೆ ವೇಳೆ ತಂದೆ- ಮಗ ಸೇರಿದಂತೆ ಮೂವರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ತುಮಕೂರು ಜಿಲ್ಲೆಯ ತುರುವೆಕೆರೆಯಲ್ಲಿ ಸಂಭವಿಸಿದೆ.

ಮಾರಸಂದ್ರ ಗ್ರಾಮದ ನಿವಾಸಿಗಳಾದ ತಂದೆ ರೇವಣ್ಣ (50), ಪುತ್ರ ಶರತ್ (20) ಹಾಗೂ ದಯಾನಂದ್ (28) ಮೃತ ದುರ್ದೈವಿಗಳು.

ಮಾರಸಂದ್ರ ಸಮೀಪದ ರಂಗನಹಟ್ಟಿ ಕೆರೆಯಲ್ಲಿ ಗಣೇಶ ವಿಸರ್ಜನೆ ವೇಳೆ ಈ ದುರ್ಘಟನೆ ಸಂಭವಿಸಿದ್ದು, ಮೃತಪಟ್ಟ ದಯಾನಂದ್‌ ಗೆ ಇತ್ತೀಚೆಗಷ್ಟೇ ಮದುವೆ ಆಗಿತ್ತು ಎಂದು ಹೇಳಲಾಗಿದೆ.

ದಂಡಿನಶಿವರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿದ್ದು, ಮೃತದೇಹಗಳಿಗಾಗಿ ಶೋಧಕಾರ್ಯ ಮುಂದುವರಿದಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments