Thursday, September 19, 2024
Google search engine
Homeಜಿಲ್ಲಾ ಸುದ್ದಿಮಂಗಳೂರಿನಲ್ಲಿ ಮಸೀದಿ ಮೇಲೆ ಕಲ್ಲು ತೂರಾಟ: 6 ಹಿಂದೂ ಕಾರ್ಯಕರ್ತರು ಅರೆಸ್ಟ್

ಮಂಗಳೂರಿನಲ್ಲಿ ಮಸೀದಿ ಮೇಲೆ ಕಲ್ಲು ತೂರಾಟ: 6 ಹಿಂದೂ ಕಾರ್ಯಕರ್ತರು ಅರೆಸ್ಟ್

ಕಾಟಿಪಳ್ಳದ ಮಸೀದಿ ಮೇಲೆ ಕಲ್ಲು ತೂರಾಟ ನಡೆಸಿದ 6 ಮಂದಿ ಹಿಂದೂ ಕಾರ್ಯಕರ್ತರನ್ನು ಮಂಗಳೂರಿನ ಪೊಲೀಸರು ಬಂಧಿಸಿದ್ದಾರೆ.

ಮಂಗಳೂರಿನ ಸ್ಥಳೀಯ ನಿವಾಸಿಗಳಾದ ಭರತ್ ಶೆಟ್ಟಿ (26), ಚೆನ್ನಪ್ಪ ಶಿವಾನಂದ್ ಛಲವಾದಿ ಅಲಿಯಾಸ್ ಮುತ್ತು (19), ನಿತಿನ್ ಹಡಪ್ (22), ಸುಜಿತ್ ಶೆಟ್ಟಿ (22), ಅಣ್ಣಪ್ಪ ಅಲಿಯಾಸ್ ಮನು (24) ಮತ್ತು ಪ್ರದೀಪ್ ಶೆಟ್ಟಿ (34) ಬಂಧಿತ ಆರೋಪಿಗಳು.

ಈದ್ ಮಿಲಾದ್ ಹಬ್ಬದ ದಿನದಂದು ಕೋಮು ಗಲಭೆ ಸೃಷ್ಟಿಸಿ ಕಾನೂನು ಸುವ್ಯವಸ್ಥೆ ಹದಗೆಡುವ ಉದ್ದೇಶದಿಂದ ಹಿಂದೂ ಸಂಘಟನೆಗಳ ಕಾರ್ಯಕರ್ತರು ಕಾಟಿಪಳ್ಳದ 3ನೇ ಬ್ಲಾಕ್ ನಲ್ಲಿರುವ ಬದ್ರಿಯಾ ಮಸೀದಿ ಮೇಲೆ ಕಲ್ಲು ತೂರಾಟ ನಡೆಸಿದ್ದರು.

ಬೈಕ್ ನಲ್ಲಿ ಆಗಮಿಸಿದ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದರಿಂದ ಮಸೀದಿಯ ಗಾಜುಗಳು ಪುಡಿಪುಡಿ ಆಗಿದ್ದವು. ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು, ಸುರತ್ಕಲ್ ಪೊಲೀಸರು ಬಿಗಿ ಪೊಲೀಸ್ ಬಂದೋಬಸ್ತ್ ಮಾಡಿದ್ದು ಯಾವುದೇ ಹಾನಿ ಆಗದಂತೆ ತಡೆದಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments