Thursday, September 19, 2024
Google search engine
Homeತಾಜಾ ಸುದ್ದಿಏ.14ರಂದು ಬೆಂಗಳೂರಿಗೆ ಮೋದಿ: ಚಿಕ್ಕಬಳ್ಳಾಪುರ, ಬೆಂಗಳೂರು ಉತ್ತರದಲ್ಲಿ ಬೃಹತ್ ಪ್ರಚಾರ!

ಏ.14ರಂದು ಬೆಂಗಳೂರಿಗೆ ಮೋದಿ: ಚಿಕ್ಕಬಳ್ಳಾಪುರ, ಬೆಂಗಳೂರು ಉತ್ತರದಲ್ಲಿ ಬೃಹತ್ ಪ್ರಚಾರ!

ಪ್ರಧಾನಿ ನರೇಂದ್ರ ಮೋದಿ ಏಪ್ರಿಲ್ 14ರಂದು ಬೆಂಗಳೂರಿಗೆ ಆಗಮಿಸಲಿದ್ದು, ಬೆಂಗಳೂರು ಗ್ರಾಮಾಂತರ ಮತ್ತು ಚಿಕ್ಕಬಳ್ಳಾಪುರದಲ್ಲಿ ಪ್ರಚಾರ ರ್ಯಾಲಿಯಲ್ಲಿ ಪಾಲ್ಗೊಳ್ಳಲಿದ್ದಾರೆ.

ಚುನಾವಣೆ ಘೋಷಣೆಯಾದ ನಂತರ ಇದೇ ಮೊದಲ ಬಾರಿ ಕರ್ನಾಟಕದಲ್ಲಿ ಪ್ರಚಾರ ಕಾರ್ಯಕ್ರಮದಲ್ಲಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದು, ಬೆಂಗಳೂರಿನಲ್ಲಿ ಬೃಹತ್ ರ್ಯಾಲಿ ನಡೆಸಲಿದ್ದಾರೆ. ಅಲ್ಲದೇ ದೇವನಹಳ್ಳಿಯಲ್ಲಿ ಬೃಹತ್ ಸಮಾವೇಶದಲ್ಲಿ ಭಾಷಣ ಮಾಡಲಿದ್ದಾರೆ.

ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ.ಸುಧಾಕರ್ ಭಾನುವಾರ ಈ ವಿಷಯ ತಿಳಿಸಿದ್ದು, ಏಪ್ರಿಲ್ 14ರಂದು ಬೆಂಗಳೂರಿಗೆ ಆಗಮಿಸಲಿರುವ ಪ್ರಧಾನಿ ಮೋದಿ ದೇವನಹಳ್ಳಿಯಲ್ಲಿ ಹಮ್ಮಿಕೊಳ್ಳಲಿರುವ ಬೃಹತ್ ಸಮಾವೇಶದಲ್ಲಿ ಸುಮಾರು 2 ಲಕ್ಷ ಜನರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದರು.

ಏಪ್ರಿಲ್ 14ರಂದು ಮಧ್ಯಾಹ್ನ 3 ಗಂಟೆಗೆ ದೇವನಹಳ್ಳಿಯಲ್ಲಿ ಬೃಹತ್ ಸಮಾವೇಶ ಮಾಡಲಿದ್ದರೆ, ಸಂಜೆ ಬೆಂಗಳೂರು ಉತ್ತರ ಭಾಗದಲ್ಲಿ ರೋಡ್ ಶೋ ನಡೆಸಲಿದ್ದಾರೆ.

ಬೆಂಗಳೂರು ಉತ್ತರದಲ್ಲಿ ಶೋಭಾ ಕರಂದ್ಲಾಜೆ ಮತ್ತು ಚಿಕ್ಕಬಳ್ಳಾಪುರದಲ್ಲಿ ಕೆ.ಸುಧಾಕರ್ ಗೆ ಪ್ರಧಾನಿ ಮೋದಿ ಆಗಮನ ನೆರವಾಗುವುದೇ ಎಂಬುದನ್ನು ಕಾದು ನೋಡಬೇಕಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments