Monday, September 30, 2024
Google search engine
Homeತಾಜಾ ಸುದ್ದಿಊರು ಮೇಯೋಕೆ, ಸುಲಿಗೆ ಮಾಡೋಕೆ ಬಿಟ್ಟಿರಲಿಲ್ಲ: ಎಡಿಜಿಪಿ ಚಂದ್ರಶೇಖರ್ ವಿರುದ್ಧ ಕುಮಾರಸ್ವಾಮಿ ಕಿಡಿ

ಊರು ಮೇಯೋಕೆ, ಸುಲಿಗೆ ಮಾಡೋಕೆ ಬಿಟ್ಟಿರಲಿಲ್ಲ: ಎಡಿಜಿಪಿ ಚಂದ್ರಶೇಖರ್ ವಿರುದ್ಧ ಕುಮಾರಸ್ವಾಮಿ ಕಿಡಿ

ಬೆಂಗಳೂರು: ಊರು ಮೇಯೋಕೆ, ಸಿಕ್ಕಸಿಕ್ಕ ಕೊಚ್ಚೆಯಲ್ಲಿ ಉರುಳಾಡೋಕೆ, ಹೆದರಿಸಿ ಬೆದರಿಸಿ ಸುಲಿಗೆ ಮಾಡೋಕೆ ನಾನು ಬಿಟ್ಟಿರಲಿಲ್ಲ. ಹದ್ದುಬಸ್ತಿನಲ್ಲಿ ಇಟ್ಟು ಕೆಲಸ ಮಾಡಿಸಿದ್ದೆ. ನಿಮಗೆ ಅಂತಹ ಎದೆಗಾರಿಕೆ ಇದೆಯಾ ಕಾಂಗ್ರೆಸ್ ಸಚಿವರೇ? ಎಂದು ಕೇಂದ್ರ ಕೈಗಾರಿಕಾ ಸಚಿವ ಎಚ್.ಡಿ. ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ನಿಮ್ಮ ಅವಧಿಯಲ್ಲೂ ಕೆಲಸ ಮಾಡಿದ್ದರಲ್ಲಾ ಆಗ ಗೊತ್ತಾಗಲಿಲ್ಲವೇ ಎಂದು ಕಾಂಗ್ರೆಸ್ ಮುಖಂಡರು ಎಡಿಜಿಪಿ ಚಂದ್ರಶೇಖರ್ ಕಳಂಕಿತ ಅಧಿಕಾರಿ ಎಂದು ಮಾಡಿದ ಆರೋಪಕ್ಕೆ ಕೇಳಿದ ಪ್ರಶ್ನೆಗೆ ಕುಮಾರಸ್ವಾಮಿ ಎಕ್ಸ್ ನಲ್ಲಿ ಪೋಸ್ಟ್ ಮಾಡುವ ಮೂಲಕ ತಿರುಗೇಟು ನೀಡಿದ್ದಾರೆ.

ರಾಜ್ಯಪಾಲರ ಕಚೇರಿ ಸಿಬ್ಬಂದಿ ಮೇಲೆ ತನಿಖೆ ನಡೆಸುವ ದರ್ಪ ತೋರಿಸಿದ್ದ ಲೋಕಾಯುಕ್ತ ಎಡಿಜಿಪಿ ವಿರುದ್ಧ ಹರಿಹಾಯ್ದಿರುವ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ಕಾಂಗ್ರೆಸ್ ಕಳಂಕಿತ ಅಧಿಕಾರಿಗಳಿಂದ ರಕ್ಷಣೆ ಪಡೆದುಕೊಳ್ಳುತ್ತಿದೆ ಎಂದು ದೂರಿದ್ದಾರೆ.

ಅಪ್ರಬುದ್ಧ ಅವಿವೇಕಿಗಳಿಗೆ ಏನು ಹೇಳುವುದು? ಲೋಕಾಯುಕ್ತ ಎಸ್ಐಟಿ ಎಡಿಜಿಪಿ ಹುದ್ದೆಯಲ್ಲಿರುವ ಕಳಂಕಿತ, ಕ್ರಿಮಿನಲ್ ಪ್ರವೃತ್ತಿಯ ಅಧಿಕಾರಿ ಕುಮಾರಸ್ವಾಮಿ ಅವರ ಅಧಿಕಾರಾವಧಿಯಲ್ಲಿಯೂ ಕೆಲಸ ಮಾಡಿರಲಿಲ್ಲವೇ? ಎನ್ನುವುದು ಈ ಸರಕಾರದಲ್ಲಿರುವ ಕೆಲವರ ಪ್ರಶ್ನೆ. ನನ್ನ ಸರಕಾರದಲ್ಲಿಯೂ ಈ ಅಧಿಕಾರಿ ಕೆಲಸ ಮಾಡಿದ್ದರು, ನಿಜ. ನಾನು ಇಲ್ಲವೆನ್ನುವುದಿಲ್ಲ. ಆದರೆ, ಊರು ಮೇಯೋಕೆ, ಸಿಕ್ಕಸಿಕ್ಕ ಕೊಚ್ಚೆಯಲ್ಲಿ ಉರುಳಾಡೋಕೆ, ಹೆದರಿಸಿ ಬೆದರಿಸಿ ಸುಲಿಗೆ ಮಾಡೋಕೆ ನಾನು ಬಿಟ್ಟಿರಲಿಲ್ಲ. ಹದ್ದುಬಸ್ತಿನಲ್ಲಿ ಇಟ್ಟು ಕೆಲಸ ಮಾಡಿಸಿದ್ದೆ ಎಂದು ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

ಕಳಂಕಿತ ಅಧಿಕಾರಿಗಳಿಂದ ರಕ್ಷಣೆ ಪಡೆದುಕೊಳ್ಳುವ ನಿಮ್ಮ ನಿಕೃಷ್ಟ ಸ್ಥಿತಿ ನನಗೆ ಬಂದಿಲ್ಲ, ಬರುವುದೂ ಇಲ್ಲ ಎಂದು ಕಾಂಗ್ರೆಸ್ ನಾಯಕರಿಗೆ ಅವರು ತಿರುಗೇಟು ನೀಡಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments