Friday, October 18, 2024
Google search engine
Homeತಾಜಾ ಸುದ್ದಿಉದ್ಯೋಗ ವಾರ್ತೆ: ಎಸ್ಸೆಸ್ಸೆಲ್ಸಿ ಪಾಸಾದವರಿಗೆ ಕೆಪಿಟಿಎಸ್ ಎಲ್ ನಲ್ಲಿ 2975 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ!

ಉದ್ಯೋಗ ವಾರ್ತೆ: ಎಸ್ಸೆಸ್ಸೆಲ್ಸಿ ಪಾಸಾದವರಿಗೆ ಕೆಪಿಟಿಎಸ್ ಎಲ್ ನಲ್ಲಿ 2975 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ!

ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (ಕೆಪಿಟಿಸಿಎಲ್) ಹಾಗೂ ವಿವಿಧ ವಿದ್ಯುತ್ ಸರಬರಾಜು ಕಂಪನಿಗಳಲ್ಲಿ ಖಾಲಿ‌ ಇರುವ ಒಟ್ಟು 2975 ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್ ಮ್ಯಾನ್ ಹುದ್ದೆಗಳ ಭರ್ತಿಗೆ (KPTCL Recruitment) ಅರ್ಜಿ ಆಹ್ವಾನಿಸಿದೆ.

ಅರ್ಹ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ನೇಮಕಾತಿ ವಿವರ: 1. ಕಿರಿಯ ಸ್ಟೇಷನ್‌ ಪರಿಚಾರಕ: 433 ಹುದ್ದೆ 2. ಕಿರಿಯ ಪವರ್‌ ಮ್ಯಾನ್‌: 2542 ಹುದ್ದೆ ಕವಿಪ್ರನಿನಿ ಮತ್ತು ವಿವಿಧ ವಿದ್ಯುತ್ ಸರಬರಾಜು ಕಂಪನಿಗಳ ಈ ಕೆಳಗಿನ ಯಾವುದಾದರೂ ಒಂದು ಅಧಿಕೃತ ವೆಬ್‌ಸೈಟ್ ಮೂಲಕ ನಿಗದಿತ ನಮೂನೆಯಲ್ಲಿ ‘ಆನ್ ಲೈನ್’ ಮೂಲಕ ಮಾತ್ರ ಅಭ್ಯರ್ಥಿಗಳು ಅ.21 ರಿಂದ ನ.20ರವರೆಗೆ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ:

https://kptcl.karnataka.gov.in

https://bescom.karnataka.gov.in

https://cescmysore.karnataka.gov.in

https://mescom.karnataka.gov.in

https://hescom.karnataka.gov.in

https://gescom.karnataka.gov.in

ಹುದ್ದೆಗಳ ವರ್ಗೀಕರಣ, ಮೀಸಲಾತಿ ವಿವರ, ಕಲ್ಯಾಣ ಕರ್ನಾಟಕ ಪ್ರದೇಶ ಮೀಸಲಾತಿ, ವಯೋಮಿತಿ, ಅರ್ಹತೆ, ನೇಮಕಾತಿ ವಿಧಾನ, ಪರೀಕ್ಷಾ ವಿಧಾನ, ಅರ್ಜಿಯ ನಮೂನೆ ಮತ್ತು ಇತರೆ ವಿವರಗಳನ್ನು ಒಳಗೊಂಡ ವಿಸ್ತ್ರತ ಉದ್ಯೋಗ ಪ್ರಕಟಣೆಯನ್ನು ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ ಎಂದು ಕೆಪಿಟಿಸಿಎಲ್‌ ನಿಗಮ ಕಾರ್ಯಾಲಯದ ನಿರ್ದೇಶಕರು ತಿಳಿಸಿದ್ದಾರೆ.

ಅರ್ಜಿ ಸಲ್ಲಿಸಲು ಅರ್ಹತೆ ಮತ್ತು ಅಗತ್ಯ ವಿದ್ಯಾರ್ಹತೆ

ಎಸ್ಸೆಸ್ಸೆಲ್ಸಿ ಅಥವಾ 10ನೇ ತರಗತಿ (ಸಿಬಿಎಸ್ ಇ/ಐಸಿಎಸ್ ಇ) ಪರೀಕ್ಷೆಯನ್ನು ಕರ್ನಾಟಕ ರಾಜ್ಯದ ವಿದ್ಯಾಸಂಸ್ಥೆಗಳಿಂದ ತೇರ್ಗಡೆ ಹೊಂದಿರುವಂತಹ ಅಭ್ಯರ್ಥಿಗಳು ಮಾತ್ರ ಹುದ್ದೆಗೆ ಅರ್ಜಿಯನ್ನು ಸಲ್ಲಿಸಲು ಅರ್ಹರಾಗಿರುತ್ತಾರೆ.

ಸೂಚನೆ:

ಮೇಲೆ ತಿಳಿಸಲಾದ ವಿದ್ಯಾರ್ಹತೆಯನ್ನು ಹೊರತುಪಡಿಸಿ ಇತರೆ ಯಾವುದೇ ಸಮನಾಂತರ ವಿದ್ಯಾರ್ಹತೆಯನ್ನು (Equivalent Qualification) ನೇಮಕಾತಿಗೆ ಪರಿಗಣಿಸಲಾಗುವುದಿಲ್ಲ.

ಬಾಹ್ಯ ಅಥವಾ ಮುಕ್ತ ವಿಶ್ವವಿದ್ಯಾಲಯ ಅಥವಾ ಮುಕ್ತ ಶಾಲೆಯಿಂದ ಪಡೆದ ಎಸ್.ಎಸ್.ಎಲ್.ಸಿ./10ನೇ ತರಗತಿ (ಬ್ರಿಡ್ಜ್ ಕೋರ್ಸ್) ಉತ್ತೀರ್ಣತೆಯನ್ನು ನೇಮಕಾತಿಗೆ ಪರಿಗಣಿಸಲಾಗುವುದಿಲ್ಲ.

ಅರ್ಜಿಗಳನ್ನು ಸ್ವೀಕರಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು, ಅಭ್ಯರ್ಥಿಗಳು ಈ ಮೇಲೆ ನಿಗದಿಪಡಿಸಿರುವ ಶೈಕ್ಷಣಿಕ ವಿದ್ಯಾರ್ಹತೆಯಲ್ಲಿ ಉತ್ತೀರ್ಣಗೊಂಡಿರತಕ್ಕದ್ದು ಹಾಗೂ ಅಂಕಪಟ್ಟಿಯನ್ನು ಹೊಂದಿರತಕ್ಕದ್ದು.

ಅರ್ಜಿಗಳನ್ನು ಸ್ವೀಕರಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಈ ಮೇಲಿನ ನಿಗದಿತ ಶೈಕ್ಷಣಿಕ ವಿದ್ಯಾರ್ಹತೆ ಪರೀಕ್ಷೆ ಬರೆದು, ಫಲಿತಾಂಶಕ್ಕಾಗಿ ಕಾಯುತ್ತಿರುವ ಅಭ್ಯರ್ಥಿಗಳು, ಅರ್ಜಿ ಸಲ್ಲಿಸಲು ಅರ್ಹರಾಗಿರುವುದಿಲ್ಲ.

ಈ ಅಧಿಸೂಚನೆಯನ್ವಯ ನೇಮಕಾತಿಗೆ ಪರಿಗಣಿಸಬೇಕಾಗುವ ವಿದ್ಯಾರ್ಹತೆ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳುವ ಹಕ್ಕನ್ನು ಕವಿಪ್ರನಿನಿ/ಎಸ್ಕಾಂಗಳು ಮಾತ್ರ ಹೊಂದಿರುತ್ತದೆ ಹಾಗೂ ಅಭ್ಯರ್ಥಿಗಳು ಅದಕ್ಕೆ ಬದ್ಧರಾಗಿರತಕ್ಕದ್ದು.

ಇತರೆ ಅರ್ಹತೆಗಳು:

ಕನ್ನಡದಲ್ಲಿ ಓದುವ ಮತ್ತು ಬರೆಯುವ ಜ್ಞಾನ ಹೊಂದಿರತಕ್ಕದ್ದು,

ತೃಪ್ತಿಕರವಾದ ನೇತ್ರದೃಷ್ಟಿಯನ್ನು ಹೊಂದಿರತಕ್ಕದ್ದು.

ತೃಪ್ತಿಕರ ದೇಹದಾರ್ಡ್ಯವನ್ನು ಹೊಂದಿರತಕ್ಕದ್ದು.

ಕಠಿಣ ಕೆಲಸಗಳಾದ ಗುಂಡಿ ತೆಗೆಯುವುದು, ಗೋಪುರ ಅಥವಾ ಕಂಬ ಹತ್ತುವುದು, ಭಾರವಾದ ವಸ್ತುಗಳನ್ನು ಸಾಗಿಸುವುದು, ತಂತಿಗಳನ್ನು ಅಳವಡಿಸುವುದು, ಕಂಬಗಳನ್ನು ಬದಲಾಯಿಸುವುದು, ಇತ್ಯಾದಿ ಕೆಲಸಕಾರ್ಯಗಳನ್ನು ನಿರ್ವಹಿಸಲು ಶಕ್ತರಿರಬೇಕು ಮತ್ತು ಸಹನ ಶಕ್ತಿ ಪರೀಕ್ಷೆಯಲ್ಲಿ ಅರ್ಹತೆ ಗಳಿಸಬೇಕು. ಈ ಮೇಲೆ ತಿಳಿಸಿರುವ ಕೆಲಸ ಕಾರ್ಯಗಳನ್ನು ನಿರ್ವಹಿಸಲು ಎಲ್ಲಾ ರೀತಿಯಲ್ಲಿಯೂ ದೈಹಿಕವಾಗಿ ಸಾಮರ್ಥ್ಯ ಹೊಂದಿರತಕ್ಕದ್ದು.

ಹುದ್ದೆಗಳ ಭರ್ತಿ:

ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕವಿಪ್ರನಿನಿ ಅಥವಾ ವಿದ್ಯುತ್ ಸರಬರಾಜು ಕಂಪನಿಗಳು, ಇವುಗಳಲ್ಲಿ ಯಾವುದಾದರೂ ಒಂದು ಕಂಪನಿಗೆ ಮಾತ್ರ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.

ಅಭ್ಯರ್ಥಿಗಳು ಒಂದು ಹುದ್ದೆಗೆ ಒಂದಕ್ಕಿಂತ ಹೆಚ್ಚಿನ ಅರ್ಜಿ ಸಲ್ಲಿಸಿದ್ದಲ್ಲಿ, ಕೊನೆಯದಾಗಿ ಸಲ್ಲಿಸಿರುವ ಅರ್ಹ ಅರ್ಜಿಯನ್ನು ಮಾತ್ರ ಪರಿಗಣಿಸಲಾಗುವುದು. ಇನ್ನುಳಿದ ಅರ್ಜಿಗಳೊಂದಿಗೆ ಸಲ್ಲಿಸಿರುವ ಅರ್ಜಿ ಶುಲ್ಕವನ್ನು ಯಾವುದೇ ಕಾರಣಕ್ಕೂ ಹಿಂಪಾವತಿಸಲಾಗುವುದಿಲ್ಲ.

ಕಿರಿಯ ಸ್ಟೇಷನ್ ಪರಿಚಾರಕ ಅಥವಾ ಕಿರಿಯ ಪವರ್‌ಮ್ಯಾನ್ ಹುದ್ದೆಗೆ ಅರ್ಜಿ ಸಲ್ಲಿಸುವಾಗ, ‘ಬ್ಯಾಕ್‌ಲಾಗ್ ಹುದ್ದೆಗಳಿಗೆ’ ಪ್ರತ್ಯೇಕವಾಗಿ ಅರ್ಜಿಯನ್ನು ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ.

ಆಯ್ಕೆಯ ವಿಧಾನ

ಸಹನ ಶಕ್ತಿ ಪರೀಕ್ಷೆ’ಯ ಕನಿಷ್ಠ ಮೂರು ಸ್ಪರ್ಧೆಗಳಲ್ಲಿ ಅರ್ಹತೆ ಹೊಂದಿರುವಂತಹ ಅಭ್ಯರ್ಥಿಗಳನ್ನು, ಎಸ್.ಎಸ್.ಎಲ್.ಸಿ ಅಥವಾ 10ನೇ ತರಗತಿಯ ಪರೀಕ್ಷೆಯ ವಿದ್ಯಾರ್ಹತೆಯಲ್ಲಿ ಗಳಿಸಿರುವ ಶೇಕಡಾವಾರು ಅಂಕಗಳ ಜೈಷ್ಠತೆ ಆಧಾರದ ಮೇಲೆ ಕರ್ನಾಟಕ ಸರ್ಕಾರದಲ್ಲಿ ಚಾಲ್ತಿಯಲ್ಲಿರುವ ಮೀಸಲಾತಿ ನಿಯಮಗಳನ್ನು ಪಾಲಿಸಿ, ಆಯ್ಕೆ ಮಾಡಲಾಗುವುದು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments