Friday, October 25, 2024
Google search engine
Homeಅಪರಾಧಪ್ರಿಯಕರನ ಜೊತೆ ಸೇರಿ ಗಂಡನ ಕೊಂದ ಪತ್ನಿ: ಸೋದರನಿಂದಲೇ ಬಯಲಾಯ್ತು ಕೊಲೆ ರಹಸ್ಯ!

ಪ್ರಿಯಕರನ ಜೊತೆ ಸೇರಿ ಗಂಡನ ಕೊಂದ ಪತ್ನಿ: ಸೋದರನಿಂದಲೇ ಬಯಲಾಯ್ತು ಕೊಲೆ ರಹಸ್ಯ!

ಪ್ರಿಯಕರನ ಜೊತೆ ಸೇರಿಕೊಂಡ ಪತ್ನಿ ಊಟದಲ್ಲಿ ವಿಷಹಾಕಿ ಪತಿಯನ್ನು ಹತ್ಯೆ ಮಾಡಿದ ಘಟನೆ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಅಜೆಕಾರಿನಲ್ಲಿ ನಡೆದಿದೆ.

ಬಾಲಕೃಷ್ಣ ಪೂಜಾರಿ (44) ಕೊಲೆಯಾಗಿದ್ದು, ಪತ್ನಿ ಪ್ರತಿಮಾ ಹಾಗೂ ಆಕೆಯ ಪ್ರಿಯಕರ ದಿಲೀಪ್‌ ಹೆಗ್ಡೆಯನ್ನು ವಶಕ್ಕೆ ಪಡೆದಿರುವ ಪೊಲೀಸರು ವಿಚಾರಣೆ ನಡೆಸಿದ್ದಾರೆ.

ಬಾಲಕೃಷ್ಣ ಪೂಜಾರಿ ಕಳೆದ 25 ದಿನಗಳಿಂದ ಜ್ವರ, ವಾಂತಿ ಆಗಿ ಅನಾರೋಗ್ಯದಿಂದ ಬಳಲುತ್ತಿದ್ದು, ಕಾಮಾಲೆ ರೋಗ ಇರಬೇಕು ಎಂದು ಶಂಕಿಸಿ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಬಾಲಕೃಷ್ಣ ಪೂಜಾರಿ ಅಕ್ಟೋಬರ್ 20ರಂದು ಮೃತಪಟ್ಟಿದ್ದರು.

ಸಾವಿನ ಬಗ್ಗೆ ಸಂಶಯ ಹೊಂದಿದ್ದ ಪ್ರತಿಮಾಳ ಸಹೋದರ ಅಜೆಕಾರು ಪೊಲೀಸ್‌ ಠಾಣೆಗೆ ದೂರು ನೀಡಿದ್ದರು. ಅಲ್ಲದೇ ಬಾಲಕೃಷ್ಣ ಸಾವಿನ ಬಳಿಕ ಪತ್ನಿ ಪ್ರತಿಮಾಳ ಚಲನವಲನ ಬಗ್ಗೆ ಸಂಶಯ ವ್ಯಕ್ತಪಡಿಸಿದ್ದ.

ಈ ಬಗ್ಗೆ ಪ್ರತಿಮಾಳ ಬಳಿ ಬಾಲಕೃಷ್ಣ ಸಾವಿನ ಬಗ್ಗೆ ಪ್ರಶ್ನಿಸಿದಾಗ ಪ್ರತಿಮಾ ಕೊಲೆ ಮಾಡಿದ್ದನ್ನು ಒಪ್ಪಿಕೊಂಡಿದ್ದು, ಅಕ್ಟೋಬರ್ 20ರಂದು ಬೆಳಿಗ್ಗೆ ಮನೆಗೆ ಬಂದಿದ್ದ ದಿಲೀಪ್ ಸಹಾಯದಿಂದ ಊಟದಲ್ಲಿ ವಿಷ ಬೆರೆಸಿ ಬಳಿಕ ಬೆಡ್‌ಶೀಟ್‌ನಿಂದ ಉಸಿರುಗಟ್ಟಿಸಿ ಕೊಲೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾಳೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments