Thursday, September 19, 2024
Google search engine
Homeಜಿಲ್ಲಾ ಸುದ್ದಿಕಾಳಿ ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 6 ಮಂದಿ ದುರ್ಮರಣ

ಕಾಳಿ ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 6 ಮಂದಿ ದುರ್ಮರಣ

ಕಾಳಿ ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 6 ಮಂದಿ ನೀರುಪಾಲಾದ ದುರ್ಘಟನೆ ದಾಂಡೇಲಿ ತಾಲೂಕಿನ ಅಕ್ವಾಡ ಗ್ರಾಮದಲ್ಲಿ ಸಂಭವಿಸಿದೆ.

ಹುಬ್ಬಳ್ಳಿಯ ಈಶ್ವರ ನಗರದ ನಿವಾಸಿಗಳಾದ ನಜೀರ್ ಅಹ್ಮದ್ (40), ಅಲ್ಛೀಯಾ ಅಹ್ಮದ್ (10), ಮೋಹಿನ್ ಅಹ್ಮದ್ (6), ರೇಷಾ ಉನ್ನಿಸಾ (38), ಇಫ್ರಾ‌ ಅಹ್ಮದ್ (15), ಅಬೀದ್ ಅಹ್ಮದ್ (12) ಮೃತಪಟ್ಟಿದ್ದು ದಡದಲ್ಲಿದ್ದ ಇಬ್ಬರು ಸುರಕ್ಷಿತರಾಗಿದ್ದಾರೆ.

ಮೃತರು ಒಂದೇ ಕುಟುಂಬದವರಾಗಿದ್ದು 8 ಜನರು ವಾಹನ ಮಾಡಿಕೊಂಡು ದಾಂಡೇಲಿಗೆ ಪ್ರವಾಸ ಬಂದಿದ್ದರು. ಈಜುವ ವೇಳೆ ಮುಳುಗಿ ಸಾವನ್ನಪ್ಪಿದ್ದಾರೆ.

ದಾಂಡೇಲಿ ಪೊಲೀಸರು ಆರು ಜನರ ದೇಹಗಳನ್ನು ಹೊರತೆಗೆದಿದ್ದಾರೆ. ಮೃತ ದೇಹಗಳನ್ನು ದಾಂಡೇಲಿ ಆಸ್ಪತ್ರೆಗೆ ರವಾನಿಸಿದ್ದು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ‌. ಘಟನೆ ಸಂಬಂಧ ದಾಂಡೇಲಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments