Thursday, December 25, 2025
Google search engine
Homeಬೆಂಗಳೂರುಹೋಳಿ ಸಂಭ್ರಮದಲ್ಲೆ ಎಣ್ಣೆ ಪಾರ್ಟಿ ವೇಳೆ ಹೊಡೆದಾಟ: ಮೂವರು ಬಿಹಾರಿಗಳ ಸಾವು

ಹೋಳಿ ಸಂಭ್ರಮದಲ್ಲೆ ಎಣ್ಣೆ ಪಾರ್ಟಿ ವೇಳೆ ಹೊಡೆದಾಟ: ಮೂವರು ಬಿಹಾರಿಗಳ ಸಾವು

ಹೋಳಿ ಆಚರಣೆ ವೇಳೆ ಕುಡಿದ ನಶೆಯಲ್ಲಿ ಎರಡು ಗುಂಪುಗಳ ನಡುವೆ ನಡೆದ ಹೊಡೆದಾಟದಲ್ಲಿ ಮೂವರು ಬಿಹಾರಿಗಳು ಮೃತಪಟ್ಟ ದಾರುಣ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಸರ್ಜಾಪುರದ ನಿರ್ಮಾಣ ಹಂತದ ಪೋರ್ ವಾಲ್ ಅವೆನ್ಯೂ ಅಪಾರ್ಟ್ಮೆಂಟ್ನ 3ನೇ ಮಹಡಿಯಲ್ಲಿ ಈ ಘಟನೆ ನಡೆದಿದೆ.
ಅನ್ಸು (19), ರಾಧೆ ಶ್ಯಾಮ್ (20) ಮತ್ತು ಗುರುತು ಪತ್ತೆಯಾದ ಮತ್ತೊಬ್ಬ ಮೃತಪಟ್ಟಿದ್ದಾನೆ. ಕೆಲಸಕ್ಕಾಗಿ ಬೆಂಗಳೂರಿಗೆ ಬಂದಿದ್ದ ಒಂದೇ ಗ್ರಾಮದ 6 ಜನರ ಬಿಹಾರಿಗಳ ಗುಂಪು ಹೊಡೆದಾಡಿಕೊಂಡು ಸಾವಿನಲ್ಲಿ ಅಂತ್ಯಗೊಂಡಿದೆ. ಘಟನಾ ಸ್ಥಳಕ್ಕೆ ಸರ್ಜಾಪುರ ಪೊಲೀಸರ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.
ಹೋಳಿ ಹಬ್ಬದ ರಜೆ ಹಿನ್ನೆಲೆ ಬಿಹಾರದ ಒಂದೇ ಗ್ರಾಮದ ವಾಸಿಗಳು ಶನಿವಾರ ಬೆಳಗ್ಗೆ ಎಣ್ಣೆ ಪಾರ್ಟಿ ಮಾಡಿದ್ದಾರೆ. ಕಂಠಪೂರ್ತಿ ಕುಡಿದು ಕೈಗೆ ಸಿಕ್ಕ ದೊಣ್ಣೆ ಮತ್ತು ರಾಡ್ನಿಂದ ಪರಸ್ಪರ ಹೊಡೆದಾಡಿಕೊಂಡಿದ್ದಾರೆ. ಹಲ್ಲೆ ವೇಳೆ ಮೂವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಗಾಯಗೊಂಡಿದ್ದ ಓರ್ವನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಘಟನಾ ಸ್ಥಳಕ್ಕೆ ಬೆಂಗಳೂರು ಗ್ರಾಮಾಂತರ ಎಸ್ಪಿ ಸಿ.ಕೆ ಬಾಬಾ ಭೇಟಿ ಮಾಡಿ ಪರಿಶೀಲನೆ ಮಾಡಿದ್ದಾರೆ. ಮೃತರ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಸಂಗ್ರಹ ಮಾಡಲಾಗಿದೆ. ಬೆಂಗಳೂರು ಗ್ರಾಮಾಂತರ ಅಡಿಷನಲ್ ಎಸ್ಪಿ ನಾಗೇಶ್ ಕುಮಾರ್ ಸಾಥ್ ನೀಡಿದ್ದಾರೆ. ಘಟನಾ ಸ್ಥಳ ಅಪಾರ್ಟ್ಮೆಂಟ್ ಸುತ್ತಮುತ್ತ ಡಾಗ್ ಸ್ಕ್ವಾಡ್ನಿಂದಪರಿಶೀಲನೆ ಮಾಡಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments