Saturday, October 5, 2024
Google search engine
Homeಕ್ರೀಡೆಆರ್ ಸಿಬಿ ಪ್ಲೇಆಫ್ ಆಸೆಗೆ ಮಳೆರಾಯ ತಣ್ಣೀರು?

ಆರ್ ಸಿಬಿ ಪ್ಲೇಆಫ್ ಆಸೆಗೆ ಮಳೆರಾಯ ತಣ್ಣೀರು?

ಸತತ ಗೆಲುವಿನ ಅಲೆಯಲ್ಲಿ ತೇಲುತ್ತಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಐಪಿಎಲ್ ಟಿ-20 ಟೂರ್ನಿಯಲ್ಲಿ ಪ್ಲೇಆಫ್ ಆಸೆಗೆ ಮಳೆರಾಯ ತಣ್ಣೀರು ಹಾಕುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಮೇ 18ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ನ ಕೊನೆಯ ಲೀಗ್ ಪಂದ್ಯದಲ್ಲಿ ಮುಖಾಮುಖಿ ಆಗಲಿವೆ.

ಉದ್ಘಾಟನಾ ಪಂದ್ಯದಲ್ಲಿ ಎದುರಾಗಿದ್ದ ಎರಡೂ ತಂಡಗಳು ಲೀಗ್ ನ ಕೊನೆಯ ಪಂದ್ಯದಲ್ಲಿ ಎದುರಾಗುತ್ತಿವೆ. ವಿಶೇಷ ಅಂದರೆ ಎರಡೂ ತಂಡಗಳು ಪ್ಲೇಆಫ್ ಗೆ ಇನ್ನೂ ಅಧಿಕೃತ ಪ್ರವೇಶ ಪಡೆದಿಲ್ಲ. ಈ ಪಂದ್ಯದಲ್ಲಿ ಗೆದ್ದ ತಂಡ ಪ್ಲೇಆಫ್ ಪ್ರವೇಶಿಸಲಿದ್ದು, ಆರ್ ಸಿಬಿ ಗೆಲುವಿನ ಜೊತೆಗೆ ಉತ್ತಮ ರನ್ ಸರಾಸರಿ ಪಡೆದರೆ ಮಾತ್ರ ಪ್ಲೇಆಫ್ ಪ್ರವೇಶಿಸುವ ಕಠಿಣ ಪರಿಸ್ಥಿತಿಯಲ್ಲಿದೆ.

ಹವಾಮಾನ ಇಲಾಖೆ ಮೂಲಗಳ ಪ್ರಕಾರ ಬೆಂಗಳೂರಿನಲ್ಲಿ 5 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಅದರಲ್ಲೂ ಮೇ 18ರಂದು ಮಳೆಯಾಗಲಿದ್ದು, ಆರ್ ಸಿಬಿ ಮತ್ತು ಸಿಎಸ್ ಕೆ ಪಂದ್ಯ ನಡೆಯುವುದು ಅನುಮಾನವಾಗಿದೆ. ಒಂದು ವೇಳೆ ಪಂದ್ಯ ಮಳೆಯಿಂದ ರದ್ದಾದರೆ ಆರ್ ಸಿಬಿ ಪ್ಲೇಆಫ್ ರೇಸ್ ನಿಂದ ಹೊರಬೀಳಲಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments