Monday, May 25, 2026
Google search engine
Homeರಾಜ್ಯಕೊನೆಗೂ ಸೆರೆಸಿಕ್ಕ ಆತಂಕ ಸೃಷ್ಟಿಸಿದ್ದ ಕುಳ್ಳ ಕಾಡಾನೆ!

ಕೊನೆಗೂ ಸೆರೆಸಿಕ್ಕ ಆತಂಕ ಸೃಷ್ಟಿಸಿದ್ದ ಕುಳ್ಳ ಕಾಡಾನೆ!

ಚಿಕ್ಕಮಗಳೂರು: ಮಲೆನಾಡಿನಲ್ಲಿ ದಾಂಧಲೆ ಮಾಡುತ್ತಾ ಆತಂಕ ಸೃಷ್ಟಿಸಿದ್ದ ಕುಳ್ಳ ಎಂದೇ ಕುಖ್ಯಾತಿ ಪಡೆದಿದ್ದ ಕಾಡಾನೆಯನ್ನು 4 ದಿನಗಳ ಕಾರ್ಯಾಚರಣೆ ನಂತರ ಕೊನೆಗೂ ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಕೊನೆಗೂ ಯಶಸ್ವಿಯಾಗಿದೆ.

ಮೂಡಿಗೆರೆ ತಾಲೂಕಿನ ಹಾಂದಿ ಬಳಿ‌ ಕುಳ್ಳ ಕುಮ್ಕಿ ಆನೆ ಭೀಮನ ಜೊತೆ ಏಕಲವ್ಯ ತಂಡ ‌ನಡೆಸಿದ ರಣರೋಚಕ ಕಾರ್ಯಚರಣೆಯಲ್ಲಿ ಕುಳ್ಳ ಕೊನೆಗೂ ಸಿಕ್ಕಿಬಿದ್ದಿದ್ದಾನೆ. ಇದರಿಂದ ಕುಳ್ಳ ಕಾಡಾನೆ ಸೆರೆಸಿಕ್ಕಿದ್ದರಿಂದ ಹಾಸನ, ಚಿಕ್ಕಮಗಳೂರು ಜಿಲ್ಲೆಯ ಅರಣ್ಯದಂಚಿನ ಗ್ರಾಮಸ್ಥರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.

ಹಾಸನ ಜಿಲ್ಲೆಯ ಸಕಲೇಶಪುರ, ಬೇಲೂರು ಮತ್ತು ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನಲ್ಲಿ ಸಂಚರಿಸಿ ದಾಂಧಲೆ ಮಾಡುತ್ತಾ ಉಪಟಳ ನೀಡುತ್ತಿದ್ದ ಕಾಡಾನೆ ಕುಳ್ಳನ ಸೆರೆಗಾಗಿ ಕಳೆದ ನಾಲ್ಕು ದಿನದಿಂದ ಮೂಡಿಗೆರೆ ತಾಲೂಕಿನಲ್ಲಿ ಕಾರ್ಯಚರಣೆ ನಡೆದಿತ್ತು.

ಕುಳ್ಳ ಮಾನವರ ಮೇಲೆ ದಾಳಿಗೆ ಯತ್ನಿಸಿ ಆತಂಕ ಸೃಷ್ಟಿಸಿದ್ದ ಕಾಡಾನೆ ಕುಳ್ಳನ ಸೆರೆಗಾಗಿ ರಾಜ್ಯ ಸರ್ಕಾರಕ್ಕೆ ಚಿಕ್ಕಮಗಳೂರು ಅರಣ್ಯ ಇಲಾಖೆಯ ಅಧಿಕಾರಿಗಳು ಮನವಿ ಮಾಡಿ ಸರ್ಕಾರದಿಂದ ಸೆರೆ ಕಾರ್ಯಚರಣೆಗೆ ಅನುಮತಿ ಪಡೆದ ಅರಣ್ಯ ಇಲಾಖೆಯ ಅಧಿಕಾರಿಗಳು ಕಾರ್ಯಚರಣೆ ನಡೆಸಿ ಕೊನೆಗೂ ಕುಳ್ಳ ನನ್ನು ಸೆರೆ ಹಿಡಿದಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments