ಜಮ್ಮು: ವಾರ್ಷಿಕ ಅಮರನಾಥ ಯಾತ್ರೆಗಾಗಿ ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳ ಸುಮಾರು 42,000 ನೆಲದ ಸಿಬ್ಬಂದಿಯನ್ನು ಒಳಗೊಂಡ 580 ಕಂಪನಿಗಳನ್ನು ನಿಯೋಜಿಸಲು ಕೇಂದ್ರ ಸರ್ಕಾರ ಆದೇಶಿಸಿದೆ ಎಂದು ಅಧಿಕೃತ ಮೂಲಗಳು ಗುರುವಾರ ತಿಳಿಸಿವೆ.
424 ಕಂಪನಿಗಳನ್ನು ಕೇಂದ್ರಾಡಳಿತ ಪ್ರದೇಶಕ್ಕೆ (ಯುಟಿ) ಕಳುಹಿಸಲಾಗುತ್ತಿದ್ದರೆ, ಉಳಿದವುಗಳನ್ನು, ಆಪರೇಷನ್ ಸಿಂಧೂರ್ ಸಮಯದಲ್ಲಿ ಯುಟಿಗೆ ಸ್ಥಳಾಂತರಗೊಂಡ ಸುಮಾರು 80 ಕಂಪನಿಗಳು ಸೇರಿದಂತೆ, ಯಾತ್ರಿಕರ ಮಾರ್ಗ, ಶ್ರೀನಗರ ಸೇರಿದಂತೆ ಇತರ ಪ್ರದೇಶಗಳನ್ನು ಸುರಕ್ಷಿತಗೊಳಿಸಲು “ಸ್ಥಳಾಂತರಿಸಲಾಗುವುದು”ಎಂದು ಅವರು ಹೇಳಿದರು.
ಈ ಪಡೆಗಳು “ತಕ್ಷಣ” ಸ್ಥಳಾಂತರಗೊಂಡು ಜೂನ್ ಎರಡನೇ ವಾರದೊಳಗೆ ಜಮ್ಮು ಮತ್ತು ಕಾಶ್ಮೀರದಲ್ಲಿ ಸ್ಥಾನ ಪಡೆದುಕೊಳ್ಳಬೇಕೆಂದು ಕೇಂದ್ರ ಗೃಹ ಸಚಿವಾಲಯ ನಿರ್ದೇಶಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಅಮರನಾಥ ಯಾತ್ರೆ ಜುಲೈ 3 ರಂದು ಪ್ರಾರಂಭವಾಗಿ ಆಗಸ್ಟ್ 9 ರಂದು ಕೊನೆಗೊಳ್ಳಲಿದೆ.
ಏಪ್ರಿಲ್ 22 ರಂದು ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ 26 ಜನರು ಸಾವನ್ನಪ್ಪಿದ ಪರಿಣಾಮ ಎದುರಾಗುವ ಸವಾಲುಗಳನ್ನು ಗಮನದಲ್ಲಿಟ್ಟುಕೊಂಡು ಯಾತ್ರೆಗೆ ಭದ್ರತಾ ನಿಯೋಜನೆ ಯೋಜನೆಯನ್ನು ಸಿದ್ಧಪಡಿಸಲಾಗುತ್ತಿದೆ ಎಂದು ಅವರು ಹೇಳಿದರು.
ಈ ಬಾರಿ ಅಮರನಾಥ ಯಾತ್ರೆಗೆ ಸುಮಾರು ೫೮೦ ಅಂPಈ ಕಂಪನಿಗಳನ್ನು ನಿಯೋಜಿಸಲು ಕೇಂದ್ರ ಗೃಹ ಸಚಿವಾಲಯ ನಿರ್ಧರಿಸಿದೆ. ಇದರಲ್ಲಿ ಯುಟಿಯಲ್ಲಿ ಈಗಾಗಲೇ ಇರುವ ಸುಮಾರು ೧೫೦-೧೬೦ ಘಟಕಗಳು ಸೇರಿವೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಈ ಕಂಪನಿಗಳನ್ನು ಸಿಆರ್ಪಿಎಫ್, ಬಿಎಸ್ಎಫ್, ಸಿಐಎಸ್ಎಫ್, ಐಟಿಬಿಪಿ ಮತ್ತು ಎಸ್ಎಸ್ಬಿಯ ಐದು ಸಿಎಪಿಎಫ್ಗಳಿಂದ ಆಯ್ಕೆ ಮಾಡಲಾಗಿದೆ. ಈ ಪ್ರತಿಯೊಂದು ಕಂಪನಿಗಳು ಸುಮಾರು ೭೦-೭೫ ಸಿಬ್ಬಂದಿಗಳ ಕಾರ್ಯಾಚರಣೆಯ ಬಲವನ್ನು ಹೊಂದಿವೆ ಎಂದು ಅವರು ಹೇಳಿದರು.
ಕೇಂದ್ರ ಗೃಹ ಸಚಿವ ಅಮಿತ್ ಶಾ ಗುರುವಾರ ಜಮ್ಮುವಿಗೆ ಭೇಟಿ ನೀಡುವ ಸಂದರ್ಭದಲ್ಲಿ ಭದ್ರತಾ ವ್ಯವಸ್ಥೆಗಳನ್ನು ಪರಿಶೀಲಿಸಲಿದ್ದಾರೆ.



