Wednesday, July 1, 2026
Google search engine
Homeಜಿಲ್ಲಾ ಸುದ್ದಿನನ್ನ ಮೇಲೆ ದೇವಿ ಬರ್ತಾಳೆ ದೆವ್ವ ಬಿಡಿಸ್ತೀನಿ ಅಂತ ಮಹಿಳೆಗೆ ಥಳಿಸಿ ಕೊಲೆ!

ನನ್ನ ಮೇಲೆ ದೇವಿ ಬರ್ತಾಳೆ ದೆವ್ವ ಬಿಡಿಸ್ತೀನಿ ಅಂತ ಮಹಿಳೆಗೆ ಥಳಿಸಿ ಕೊಲೆ!

ದೆವ್ವ ಬಿಡಿಸುತ್ತೇನೆಂದು ಹೇಳಿ ಥಳಿಸಿದ್ದರಿಂದ ಅಸ್ವಸ್ಥಗೊಂಡ ಮಹಿಳೆ ಮೃತಪಟ್ಟ ಘಟನೆ ಶಿವಮೊಗ್ಗ ಜಿಲ್ಲೆಯಲ್ಲಿ ನಡೆದಿದೆ.

ಭದ್ರಾವತಿ ತಾಲೂಕಿನ ಹೊಳೆಹೊನ್ನೂರಿನ ಜಂಬರಗಟ್ಟೆ ನಿವಾಸಿ ಗೀತಮ್ಮ (50) ಮೃತಪಟ್ಟಿದ್ದಾರೆ.

ತಾಯಿಗೆ ಹುಷಾರಿಲ್ಲದ ಕಾರಣ ಮಗ ದೆವ್ವ ಬಿಡಿಸಲು ಹೊಸ ಜಂಬರಘಟ್ಟಕ್ಕೆ ಕರೆದುಕೊಂಡು ಹೋಗಿದ್ದ. ದೆವ್ವ ಬಿಡಿಸುತ್ತೇನೆ ಎಂದು ಆಶಾ ಎಂಬಾಕೆ ಗೀತಮ್ಮನಿಗೆ ಚೆನ್ನಾಗಿ ಥಳಿಸಿದ್ದಾರೆ. ಹೊಡೆತ ತಾಳಲಾರದೇ ಅಸ್ವಸ್ಥಗೊಂಡ ಗೀತಮ್ಮ ಮೃತಪಟ್ಟಿದ್ದಾರೆ.

ಆಶಾ ಎಂಬ ಮಹಿಳೆ ತನ್ನ ಮೇಲೆ ಚೌಡಮ್ಮ ದೇವಿ ಬರುತ್ತಾಳೆ ಎಂದು ಊರಲ್ಲಿ ಪ್ರಚಾರ ಮಾಡಿಕೊಂಡಿದ್ದಳು. ಗೀತಮ್ಮ ಕುಟುಂಬ ಇದನ್ನು ನಂಬಿ ಆಶಾ ಬಳಿ ಕರೆದುಕೊಂಡು ಹೋಗಿದ್ದಾರೆ. ಆಶಾ ರಾತ್ರಿ 9 ಗಂಟೆಯಿಂದ ತಡರಾತ್ರಿ 3 ಗಂಟೆಯವರೆಗೂ ಗೀತಮ್ಮರನ್ನು ಥಳಿಸಿದ್ದಾರೆ. ತೀವ್ರ ಅಸ್ವಸ್ಥಗೊಂಡ ಅವರನ್ನು ಹೊಳೆಹೊನ್ನುರು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.

ಸ್ಥಳಕ್ಕೆ ಹೊಳೆಹೊನ್ನುರು ಪೋಲಿಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಆಶಾ ವಿರುದ್ಧ ಪೊಲೀಸರು ಕೊಲೆ ಪ್ರಕರಣ ದಾಖಲಿಸಿ ಬಂಧಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments