Monday, May 25, 2026
Google search engine
Homeಕಾನೂನುಪ್ರೀತಿಸಿ ಮದುವೆ ಆದ ಗಂಡನನ್ನೇ ಕೊಂದು ನದಿಗೆ ಎಸೆದ ಪತ್ನಿ, ಪ್ರಿಯಕರನಿಗೆ ಗಲ್ಲು ಶಿಕ್ಷೆ!

ಪ್ರೀತಿಸಿ ಮದುವೆ ಆದ ಗಂಡನನ್ನೇ ಕೊಂದು ನದಿಗೆ ಎಸೆದ ಪತ್ನಿ, ಪ್ರಿಯಕರನಿಗೆ ಗಲ್ಲು ಶಿಕ್ಷೆ!

ಪ್ರೀತಿಸಿ ಮದುವೆಯಾದ ಗಂಡನನ್ನೇ ಕೊಂದು ಸಹಚರರ ನೆರವಿನಿಂದ ನದಿಗೆ ಎಸೆದಿದ್ದ ಪ್ರಕರಣದಲ್ಲಿ ಪತ್ನಿ ಹಾಗೂ ಆಕೆಯ ಪ್ರಿಯಕರನಿಗೆ ಭದ್ರಾವತಿಯ 4ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಗಲ್ಲು ಶಿಕ್ಷೆ ವಿಧಿಸಿದೆ.

ಪ್ರೀತಿಸಿ‌ ಮದುವೆಯಾದ ಪತಿಯನ್ನು ಕಬ್ಬಿಣದ ರಾಡ್​ನಿಂದ ಹೊಡೆದು‌ ಕೊಂದು ಇನ್ನಿಬ್ಬರ ಸಹಾಯದಿಂದ ಮೃತದೇಹವನ್ನು ನದಿಗೆ ಎಸೆದ ಪ್ರಕರಣದಲ್ಲಿ ಭದ್ರಾವತಿ ಜನ್ನಾಪುರ ನಿವಾಸಿಗಳಾದ ಲಕ್ಷ್ಮಿ (29), ಪ್ರಿಯಕರ ಕೃಷ್ಣಮೂರ್ತಿ (30) ಅವರಿಗೆ ಮರಣದಂಡನೆ ಹಾಗೂ ಶಿವರಾಜ್ (32)ಗೆ 7 ವರ್ಷ ಕಾರಾಗೃಹ ಶಿಕ್ಷೆ ವಿಧಿಸಿ ಭದ್ರಾವತಿ ಸತ್ರ ನ್ಯಾಯಾಲಯ ಶನಿವಾರ ಮಹತ್ವದ ತೀರ್ಪು ನೀಡಿದೆ.

ಭದ್ರಾವತಿ ಪಟ್ಟಣದಲ್ಲಿ‌ 2016ರಲ್ಲಿ ನಡೆದ ಘಟನೆಯಲ್ಲಿ ಶಿಕ್ಷೆಗೆ ಒಳಗಾಗಿರುವ ಲಕ್ಷ್ಮಿ ಮತ್ತು ಇಮ್ತಿಯಾಜ್ ಅಹಮದ್ ಗುಲ್ಬರ್ಗಾದಲ್ಲಿ ಪ್ರೀತಿಸಿ ಮದುವೆಯಾಗಿದ್ದರು. ಆದರೆ ಲಕ್ಷ್ಮಿಗೆ ಕೃಷ್ಣಮೂರ್ತಿ ಎಂಬವರ ಜೊತೆ‌ ಸಂಬಂಧವಿತ್ತು. ಇದರಿಂದಾಗಿ ಪ್ರಿಯಕರ ಕೃಷ್ಣಮೂರ್ತಿ ಜೊತೆ ಇಮ್ತಿಯಾಜ್ ಅಹಮದ್ ಅವ​​ರನ್ನು ಕಬ್ಬಿಣದ ರಾಡ್​​ನಿಂದ ಹೊಡೆದು ಕೊಲೆ ಮಾಡಿದ್ದರು.

ನಂತರ ಕೃಷ್ಣಮೂರ್ತಿ ತನ್ನ ಸ್ನೇಹಿತ ಶಿವರಾಜ್ ಜೊತೆ ಸೇರಿ ಇಮ್ತಿಯಾಜ್ ಅಹಮದ್ ಶವವನ್ನು ನದಿಗೆ ಎಸೆದಿದ್ದರು. ಈ ಕುರಿತು ಮೃತನ ಸಹೋದರ ಎಜಾಜ್ ಅಹಮದ್ ಭದ್ರಾವತಿಯ ನ್ಯೂ ಟೌನ್ ಪೊಲೀಸ್ ಠಾಣೆಯಲ್ಲಿ 2016ರಲ್ಲಿ ದೂರು ದಾಖಲಿಸಿದ್ದರು.

ಪ್ರಕರಣ ದಾಖಲಿಸಿಕೊಂಡ ನ್ಯೂ ಟೌನ್​​ನ ಅಂದಿನ ಸಿಪಿಐ ಪ್ರಭು ಬಿ.ಸೂರಿನ್ ಅವರು ಆರೋಪಿಗಳ ತನಿಖೆ ನಡೆಸಿ, ನ್ಯಾಯಾಲಯಕ್ಕೆ ದೋಷಾರೋಪಣ‌ ಪಟ್ಟಿ ಸಲ್ಲಿಸಿದ್ದರು.

ನ್ಯಾಯಾಲಯದಲ್ಲಿ ವಿಚಾರಣೆ ನಡೆದು ಆರೋಪಿಗಳ ವಿರುದ್ಧದ ಆರೋಪ‌ ದೃಢಪಟ್ಟ ಹಿನ್ನೆಲೆಯಲ್ಲಿ ನ್ಯಾಯಧೀಶರಾದ ಇಂದಿರಾ ಮೈಲಾಸ್ವಾಮಿ ಚೆಟ್ಟಿಯಾರ್ ಅವರು ಭದ್ರಾವತಿ ಜನ್ನಾಪುರ ನಿವಾಸಿಗಳಾದ ಲಕ್ಷ್ಮಿ (29), ಕೃಷ್ಣಮೂರ್ತಿ (30) ಅವರಿಗೆ ಮರಣದಂಡನೆ ಹಾಗೂ ಶಿವರಾಜ್ (32)ಗೆ 7 ವರ್ಷ ಕಾರಾಗೃಹ ಶಿಕ್ಷೆ ವಿಧಿಸಿ ಆದೇಶಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments