ಶಿವಮೊಗ್ಗ: ಅಕ್ಟೋಬರ್ನಲ್ಲಿ 800 ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ತೆರೆಯಲಾಗುವುದು ಎಂದು ಸಾಕ್ಷರತಾ ಹಾಗೂ ಶಾಲಾ ಶಿಕ್ಷಣ ಸಚಿವ ಎಸ್.ಮಧು ಬಂಗಾರಪ್ಪ ಹೇಳಿದ್ದಾರೆ.
ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ 800 ಕೆಪಿಎಸ್ ಶಾಲೆಗಳನ್ನು ತೆರೆಯಲಾಗುವುದು. . ಈ ಯೋಜನೆಗೆ ಸಿಎಂ ಸಿದ್ದರಾಮಯ್ಯನವರು ಶಿವಮೊಗ್ಗದಲ್ಲಿಯೇ ಚಾಲನೆ ನೀಡಲಿದ್ದಾರೆ ಎಂದರು.
800 ಕರ್ನಾಟಕ ಪಬ್ಲಿಕ್ ಶಾಲೆಗಳ ಪೈಕಿ 500 ಶಾಲೆಗಳನ್ನು ವಿಶ್ವ ಬ್ಯಾಂಕ್ ನೆರವಿನಿಂದ ಪ್ರಾರಂಭಿಸಲಾಗುತ್ತಿದೆ. ಕೆಕೆಆರ್ಎಲ್ನಿಂದ 200 ಶಾಲೆಗಳು, ಉಳಿದ 100 ಶಾಲೆಗಳನ್ನು ಗಣಿ ಮತ್ತು ಭೂ ವಿಜ್ಞಾನ ಇಲಾಖೆಯಿಂದ ಪ್ರಾರಂಭಿಸಲಾಗುವುದು ಎಂದು ಅವರು ತಿಳಿಸಿದರು.
800 ಕೆಪಿಎಸ್ ಶಾಲೆಯಲ್ಲಿ ಉತ್ತರ ಕರ್ನಾಟಕಕ್ಕೆ ವಿಶೇಷ ಆದ್ಯತೆ ನೀಡಲಾಗುತ್ತಿದೆ. ಸರ್ಕಾರದ ಜೊತೆಗೆ ಎಸ್ಜಿಓಗಳು ಕೈ ಜೋಡಿಸಲಿವೆ. ಈ ಶಾಲೆಗಳನ್ನು ಮುಂಬರುವ ಅಕ್ಟೋಬರ್ನಲ್ಲಿ ಶಿವಮೊಗ್ಗದಿಂದಲೇ ಪ್ರಾರಂಭಿಸಲು ಸಿಎಂ ಅವರನ್ನು ಕರೆಸಲಾಗುತ್ತದೆ. ಇದರ ಜೊತೆಗೆ ಜಿಲ್ಲೆಯ ಅಭಿವೃದ್ದಿ ಕಾಮಗಾರಿಗೂ ಚಾಲನೆ ನೀಡಲಾಗುತ್ತದೆ. ಶರಾವತಿ ಪಂಪ್ಡ್ ಸ್ಟೋರೇಜ್ ವಿಚಾರವನ್ನೂ ಸಿಎಂ ಮಾತನಾಡಲಿದ್ದಾರೆ ಎಂದರು.



