Thursday, September 19, 2024
Google search engine
Homeತಾಜಾ ಸುದ್ದಿಮೋದಿಗೆ ನೈತಿಕ ಸೋಲು: ಮಲ್ಲಿಕಾರ್ಜುನ ಖರ್ಗೆ ಟೀಕೆ

ಮೋದಿಗೆ ನೈತಿಕ ಸೋಲು: ಮಲ್ಲಿಕಾರ್ಜುನ ಖರ್ಗೆ ಟೀಕೆ

ವ್ಯಕ್ತಿಯ ಹೆಸರಿನ ಬಲದಿಂದ ಚುನಾವಣೆ ಎದುರಿಸಿದ್ದ ಪ್ರಧಾನಿ ನರೇಂದ್ರ ಮೋದಿಗೆ ಇದು ನೈತಿಕ ಸೋಲು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

2024ರ ಲೋಕಸಭಾ ಚುನಾವಣೆಯ ಫಲಿತಾಂಶದ ಹಿನ್ನೆಲೆಯಲ್ಲಿ ಮಂಗಳವಾರ ದೆಹಲಿಯಲ್ಲಿ ಸುದ್ದಿಗೋಷ್ಠಿಯನ್ನು ಮಾತನಾಡಿದ ಅವರು, ಒಬ್ಬ ವ್ಯಕ್ತಿ, ಒಂದೇ ಮುಖ ತೋರಿಸಿ ಮತ ಯಾಚಿಸಿದ್ದ ಪ್ರಧಾನಿ ಮೋದಿಗೆ ಸೋಲು ಹಾಗೂ ಬಿಜೆಪಿಗೆ ನಷ್ಟವಾಗಿದೆ ಎಂದರು.

ಲೋಕಸಭಾ ಚುನಾವಣಾ ಫಲಿತಾಂಶವನ್ನು ನಾವು ಗೌರವಿಸುತ್ತೇವೆ. ಈ ಬಾರಿ ಯಾವುದೇ ಪಕ್ಷಕ್ಕೆ ಬಹುಮತ ನೀಡಿಲ್ಲ. ಪ್ರಧಾನಿ ಮೋದಿ ಪ್ರತಿಪಕ್ಷಗಳನ್ನು ಸೋಲಿಸಲು ಬ್ಯಾಂಕ್ ಖಾತೆ ಮುಟ್ಟುಗೋಲು ಹಾಕಿದರು. ಪ್ರತಿಪಕ್ಷಗಳ ನಾಯಕರನ್ನು ತನಿಖಾ ಸಂಸ್ಥೆಗಳ ಮೂಲಕ ಕಟ್ಟಿಹಾಕಲು ಯತ್ನಿಸಿದರು. ಇದಕ್ಕೆಲ್ಲಾ ಮತದಾರರು ತಕ್ಕ ಉತ್ತರ ನೀಡಿದ್ದಾರೆ ಎಂದು ಅವರು ಹೇಳಿದರು.

ಚುನಾವಣೆಯನ್ನು ಒಗ್ಗೂಡಿ ಎದುರಿಸಿದ ಇಂಡಿಯಾ ಮೈತ್ರಿಕೂಟಕ್ಕೆ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ಮುಂದಿನ ದಿನಗಳಲ್ಲಿಯೂ ಸಂವಿಧಾನ ರಕ್ಷಣೆ ಹಾಗೂ ಪ್ರಜಾತಂತ್ರ ವ್ಯವಸ್ಥೆ ಉಳಿಸಲು ಹೋರಾಟ ನಡೆಸಲಿದ್ದೇವೆ. ಮೋದಿ ಮತ್ತೆ ಪ್ರಧಾನಿ ಆದರೆ ಸಂವಿಧಾನದ ಮೇಲೆ ದಾಳಿ ಆಗಲಿದೆ. ಇದನ್ನು ತಡೆಯಲು ಮತದಾರರು ಸೂಕ್ತ ಉತ್ತರ ನೀಡಿದ್ದಾರೆ ಎಂದು ಖರ್ಗೆ ಅಭಿಪ್ರಾಯಪಟ್ಟರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments