Friday, September 20, 2024
Google search engine
Homeತಾಜಾ ಸುದ್ದಿಎನ್ ಡಿಎ ಗೆದ್ದಿದ್ದಕ್ಕೆ ಬೆರಳು ಕತ್ತರಿಸಿ ದೇವರಿಗೆ ಅರ್ಪಿಸಿದ ಭಕ್ತ!

ಎನ್ ಡಿಎ ಗೆದ್ದಿದ್ದಕ್ಕೆ ಬೆರಳು ಕತ್ತರಿಸಿ ದೇವರಿಗೆ ಅರ್ಪಿಸಿದ ಭಕ್ತ!

ಲೋಕಸಭಾ ಚುನಾವಣೆಯಲ್ಲಿ ಎನ್ ಡಿಎ ಮೈತ್ರಿಕೂಟ ಗೆದ್ದು ಅಧಿಕಾರ ಹಿಡಿದ ಹಿನ್ನೆಲೆಯಲ್ಲಿ 30 ವರ್ಷದ ಬಿಜೆಪಿ ಕಾರ್ಯಕರ್ತ ಬೆರಳು ಕತ್ತರಿಸಿ ದೇವರಿಗೆ ಅರ್ಪಿಸಿದ ಘಟನೆ ಛತ್ತೀಸಗಢದಲ್ಲಿ ನಡೆದಿದೆ.

ಛತ್ತೀಸ್ ಗಢದ ಬಲರಾಮ್ ಪುರದ ನಿವಾಸಿ ದುರ್ಗೇಶ್ ಪಾಂಡೆ ಜೂನ್ 4ರಂದು ಮತ ಎಣಿಕೆ ನಡೆಯುತ್ತಿದ್ದಾಗ ಬಿಜೆಪಿ ನೇತೃತ್ವದ ಎನ್ ಡಿಎ ಮೈತ್ರಿಕೂಟ 272 ಗಡಿ ದಾಟುತ್ತಿದ್ದಂತೆ ದೇವಸ್ಥಾನಕ್ಕೆ ಹೋಗಿ ಬೆರಳು ಕತ್ತರಿಸಿಕೊಂಡು ದೇವರಿಗೆ ಅರ್ಪಿಸಿದ್ದಾನೆ.

ಕಾಳಿ ದೇವರಿಗೆ ಬೆರಳು ಕತ್ತರಿಸಿ ಅರ್ಪಿಸಿದಾಗ ರಕ್ತ ಹರಿದಿದ್ದು, ಕುಟುಂಬಸ್ಥರ ಗಮನಕ್ಕೆ ಬಂದು ಕೂಡಲೇ ಆಸ್ಪತ್ರೆಗೆ ಕರೆದೊಯ್ದು ದಾಖಲಿಸಿದ್ದಾರೆ. ರಕ್ತ ಹೆಚ್ಚು ಹರಿದಿದ್ದರಿಂದ ಆಸ್ಪತ್ರೆ ಸಿಬ್ಬಂದಿ ಮತ್ತೊಂದು ಆಸ್ಪತ್ರೆಗೆ ಕಳುಹಿಸಿ ಚಿಕಿತ್ಸೆ ಕೊಡಿಸಿದ್ದಾರೆ. ದುರ್ಗೇಶ್ ಪಾಂಡೆ ಇದೀಗ ಚೇತರಿಸಿಕೊಳ್ಳುತ್ತಿದ್ದಾನೆ ಎಂದು ತಿಳಿದು ಬಂದಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments