Thursday, September 19, 2024
Google search engine
Homeತಾಜಾ ಸುದ್ದಿಶಿವನ ದರ್ಶನಕ್ಕೆ ಹೊರಟ್ಟಿದ್ದ ಭಕ್ತರ ಮೇಲೆ ಉಗ್ರರ ದಾಳಿ: ಬಸ್ ಪ್ರಪಾತಕ್ಕೆ ಉರುಳಿ 10 ಮಂದಿ...

ಶಿವನ ದರ್ಶನಕ್ಕೆ ಹೊರಟ್ಟಿದ್ದ ಭಕ್ತರ ಮೇಲೆ ಉಗ್ರರ ದಾಳಿ: ಬಸ್ ಪ್ರಪಾತಕ್ಕೆ ಉರುಳಿ 10 ಮಂದಿ ದುರ್ಮರಣ

ಉಗ್ರರ ದಾಳಿಯಿಂದ ಬಸ್ ಪ್ರಪಾತಕ್ಕೆ ಉರುಳಿಬಿದ್ದ ಪರಿಣಾಮ ಕನಿಷ್ಠ 10 ಮಂದಿ ಮೃತಪಟ್ಟ ಆಘಾತಕಾರಿ ಘಟನೆ ಜಮ್ಮು ಕಾಶ್ಮೀರದಲ್ಲಿ ನಡೆದಿದೆ.

ರೆಸಾಯಿ ಜಿಲ್ಲೆಯಲ್ಲಿ ಕಣಿವೆ ಪ್ರದೇಶದಲ್ಲಿನ ಜನಪ್ರಿಯ ಶಿವಕೋಡಿ ದೇವಸ್ಥಾನಕ್ಕೆ ಭೇಟಿ ನೀಡಿ ದರ್ಶನಕ್ಕೆ ಹೊರಟ್ಟಿದ್ದ ಭಕ್ತರ ಮೇಲೆ ಉಗ್ರರು ದಾಳಿ ನಡೆಸಿದ್ದಾರೆ ಎಂದು ಹೇಳಲಾಗಿದೆ.

ಘಟನಾ ಸ್ಥಳಕ್ಕೆ ಸ್ಥಳೀಯರು ಹಾಗೂ ಭದ್ರತಾ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿದ್ದು, ಗಾಯಗೊಂಡವರನ್ನು ರಕ್ಷಿಸಿ ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಉಗ್ರರು ಭಾರೀ ಪ್ರಮಾಣದಲ್ಲಿ ಬಸ್ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ದಾಳಿಯಿಂದ ತಪ್ಪಿಸಿಕೊಳ್ಳಲು ಚಾಲಕ ನಿಯಂತ್ರಣ ತಪ್ಪಿದ್ದರಿಂದ ಬಸ್ ಕಂದಕಕ್ಕೆ ಉರುಳಿದೆ. ಘಟನಾ ಸ್ಥಳದಲ್ಲಿ ಹಲವಾರು ಜೀವಂತ ಬುಲೆಟ್ ಗಳು ಪತ್ತೆಯಾಗಿವೆ.

ಪ್ರಧಾನಿ ಮೋದಿ ನೇತೃತ್ವದಲ್ಲಿ ನೂತನ ಸರ್ಕಾರದ ಪ್ರಮಾಣ ವಚನ ಸ್ವೀಕಾರ ಸಮಾರಂಭದ ದಿನವೇ ಉಗ್ರರು ಈ ದಾಳಿ ನಡೆಸಿದ್ದು, ಭದ್ರತಾ ಸಿಬ್ಬಂದಿ ಉಗ್ರರ ಪತ್ತೆಗೆ ಕಾರ್ಯಾಚರಣೆ ಆರಂಭಿಸಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments