Sunday, October 6, 2024
Google search engine
Homeಕ್ರೀಡೆಗಂಭೀರ್ ಬೇಡಿಕೆಗೆ ಬಿಸಿಸಿಐ ಸಮ್ಮತಿ: ಟಿ-20 ವಿಶ್ವಕಪ್ ನಂತರ ಅಧಿಕಾರ ಸ್ವೀಕಾರ!

ಗಂಭೀರ್ ಬೇಡಿಕೆಗೆ ಬಿಸಿಸಿಐ ಸಮ್ಮತಿ: ಟಿ-20 ವಿಶ್ವಕಪ್ ನಂತರ ಅಧಿಕಾರ ಸ್ವೀಕಾರ!

ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ ಷರತ್ತಿಗೆ ಬಿಸಿಸಿಐ ಒಪ್ಪಿಗೆ ಸೂಚಿಸಿದ್ದು, ವಿಶ್ವಕಪ್ ನಂತರ ಭಾರತ ತಂಡದ ಕೋಚ್ ಸ್ಥಾನ ಅಲಂಕರಿಸಲಿದ್ದಾರೆ.

ಭಾರತ ತಂಡದ ಕೋಚ್ ಆಗಿರುವ ರಾಹುಲ್ ದ್ರಾವಿಡ್ ಅವರ ಗುತ್ತಿಗೆ ಅವಧಿ ಪ್ರಸ್ತುತ ನಡೆಯುತ್ತಿರುವ ಟಿ-20 ವಿಶ್ವಕಪ್ ನಂತರ ಅಂತ್ಯಗೊಳ್ಳಲಿದೆ. ದ್ರಾವಿಡ್ ಕೋಚ್ ಸ್ಥಾನದಿಂದ ನಿರ್ಗಮನದ ಬೆನ್ನಲ್ಲೇ ಗಂಭೀರ್ ಆ ಸ್ಥಾನವನ್ನು ತುಂಬಲಿದ್ದಾರೆ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ.

ಐಪಿಎಲ್ ನಲ್ಲಿ ಕೋಲ್ಕತಾ ನೈಟ್ ರೈಡರ್ಸ್ ತಂಡದ ಕೋಚ್ ಆಗಿರುವ ಗಂಭೀರ್, ಭಾರತ ತಂಡದ ಕೋಚ್ ಸ್ಥಾನ ಅಲಂಕರಿಸಬೇಕಾದರೆ ಕೆಲವು ಷರತ್ತುಗಳನ್ನು ವಿಧಿಸಿದ್ದರು. ಈ ಬಗ್ಗೆ ಸಾಕಷ್ಟು ಗೊಂದಲಗಳಿದ್ದವು. ಆದರೆ ಇದೀಗ ಬಿಸಿಸಿಐ ಎಲ್ಲಾ ಬೇಡಿಕೆಗಳಿಗೆ ಒಪ್ಪಿಗೆ ಸೂಚಿಸಿದೆ ಎಂದು ತಿಳಿದು ಬಂದಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments