Monday, August 10, 2026
Google search engine
Homeರಾಜಕೀಯಅಧಿವೇಶನದೊಳಗೆ ಖಾತೆ ಹಂಚಿಕೆ; ಸಚಿವ ಸ್ಥಾನ ನಂತರ: ಡಿಕೆಶಿ

ಅಧಿವೇಶನದೊಳಗೆ ಖಾತೆ ಹಂಚಿಕೆ; ಸಚಿವ ಸ್ಥಾನ ನಂತರ: ಡಿಕೆಶಿ

ಕೋಲಾರ : ನವದೆಹಲಿಯಲ್ಲಿ ವರಿಷ್ಢರೊಂದಿಗೆ ಹಲವು ವಿಚಾರಗಳನ್ನು ಚರ್ಚಿಸಿ ಬಂದಿದ್ದೇನೆ. ಅಧಿವೇಶನದೊಳಗೆ ಸಚಿವರಿಗೆ ಖಾತೆ ಹಂಚಿಕೆ ಪ್ರಕ್ರಿಯೆ ಪೂರ್ಣಗೊಳ್ಳಲಿದೆ. ಈ ಬಗ್ಗೆ ಯಾರೂ ತಲೆಕೆಡಿಸಿಕೊಳ್ಳಬೇಡಿ. ಅಧಿವೇಶನ ಬಳಿಕ ಉಳಿದ ಸಚಿವ ಸ್ಥಾನದ ಬಗ್ಗೆ ‌ನಿರ್ಧರಿಸಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ‌ಹೇಳಿದರು.

ಸೋಮವಾರ ಜಿಲ್ಲೆಯ ಮಾಲೂರಿನಲ್ಲಿ ಹಮ್ಮಿಕೊಂಡಿದ್ದ ಸಾಧನಾ ಸಂಭ್ರಮ ಕಾರ್ಯಕ್ರಮದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು

ಜೆಡಿಎಸ್ ಪಕ್ಷದ ಬಿಡದಿ ಟೌನ್ ಶಿಪ್ ಹೋರಾಟದ ಕುರಿತು ಮಾತನಾಡಿ ರಾಜಕೀಯದ ಉಳಿವಿಗಾಗಿ ಅವರು ಹೋರಾಟ ಮಾಡುತ್ತಿದ್ದಾರೆ. ನೈಸ್ ಮತ್ತು ಬಿಡದಿ ಎರಡೂ ಯೋಜನೆಗೆ ಸಹಿ ಹಾಕಿದ್ದು ಯಾರು’ ಎಂದು ಪ್ರಶ್ನಿಸಿದರು .

ಅವರು ಮಾಡಿದ ಯೋಜನೆಯನ್ನು ನಾವು ಮುಂದುವರಿಸಿದ್ದೇವೆ. ರೈತರು ಯಾರೂ ಇಲ್ಲ, ಹೊರಗಡೆ ಕ್ಷೇತ್ರದ ಕಾರ್ಯಕರ್ತರನ್ನು ತಂದು ಹೋರಾಟ ನಡೆಸುತ್ತಿದ್ದಾರೆ. ಅದು ಪ್ರಜಾಪ್ರಭುತ್ವದ ಹಕ್ಕು, ಬೇಡ ಎನ್ನಲು ಆಗಲ್ಲ ಎಂದರು.

ನಾವು ಅವರು ಮಾಡಿದ ಯೋಜನೆ ಮುಂದುವರಿಸಿದ್ದೇವೆ ಅವರು ರೈತರಿಗೆ ₹ 25 ಲಕ್ಷ ಪರಿಹಾರ ಕೊಡುವುದಾಗಿ ಹೇಳಿದರು. ನಾವು ₹ 2 ಕೋಟಿಯಿಂದ 3 ಕೋಟಿ ಕೊಡುತ್ತಿದ್ದೇವೆ ಎಂದು ತಿಳಿಸಿದರು.

ನೈಸ್ ಯೋಜನೆ ಮಾಡಿರುವುದು ಒಳ್ಳೆಯದೇ ಆಗಿದೆ‌.‌‌ ಬೆಂಗಳೂರು ಉಸಿರಾಡುತ್ತಿದೆ. ಜೊತೆಗೆ ಕೆಲವರ ಸ್ವಾರ್ಥವೂ ಇದೆ. ಈ ಬಗ್ಗೆ ಅಮೇಲೆ ಮಾತನಾಡುವೆ ಎಂದು ಹೇಳಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments