Friday, October 18, 2024
Google search engine
Homeಜಿಲ್ಲಾ ಸುದ್ದಿಧಾರವಾಡದಲ್ಲಿ ಹೆರಿಗೆ ವೇಳೆ ವೈದ್ಯನ ಎಡವಟ್ಟು: ಮರ್ಮಾಂಗ ಕತ್ತರಿಸಿದ್ದರಿಂದ ಮಗು ಸಾವು!

ಧಾರವಾಡದಲ್ಲಿ ಹೆರಿಗೆ ವೇಳೆ ವೈದ್ಯನ ಎಡವಟ್ಟು: ಮರ್ಮಾಂಗ ಕತ್ತರಿಸಿದ್ದರಿಂದ ಮಗು ಸಾವು!

ಸಿಸರಿನ್ ವೇಳೆ ವೈದ್ಯನೊಬ್ಬ ಹೊಟ್ಟೆಯಲ್ಲಿದ್ದ ಮಗುವಿನ ಮರ್ಮಾಂಗ ಕತ್ತರಿಸಿದ ಪರಿಣಾಮ ಆ ಮಗು ಹುಟ್ಟುವ ಮೊದಲೇ ಮೃತಪಟ್ಟ ದಾರುಣ ಘಟನೆ ಧಾರವಾಡದ ಜಿಲ್ಲಾಸ್ಪತ್ರೆಯಲ್ಲಿ ನಡೆದಿದೆ.

ಕೊಂಡಜ್ಜಿ ರಸ್ತೆಯಲ್ಲಿರುವ ಅರ್ಜುನ್ ಅವರ ಪತ್ನಿ ಅಮೃತಾ ಹೆರಿಗೆಗಾಗಿ ಜೂನ್ 27ರಂದು ಜಿಲ್ಲಾಸ್ಪತ್ರೆಗೆ ದಾಖಲಲಾಗಿದ್ದರು. ಅಮೃತಾಳಿಗೆ ಸಿಸರಿನ್ ಮೂಲಕ ಮಗುವನ್ನು ಹೊರ ತೆಗೆಯಬೇಕು ಎಂದು ವೈದ್ಯರು ಸೂಚಿಸಿದ್ದರು.

ಸಿಸರಿನ್ ಮಾಡಿ ಮಗು ತೆಗೆಯುವ ವೇಳೆ ವೈದ್ಯ ನಿಜಾಮುದ್ದೀನ್ ಮಗುವಿನ ಮರ್ಮಾಂಗವನ್ನು ಆಕಸ್ಮಿಕವಾಗಿ ಕೊಯ್ದಿದ್ದಾರೆ. ಮಗುವಿನ ಸ್ಥಿತಿ ಚಿಂತಾಜನಕವಾಗಿದ್ದರಿಂದ ಕೂಡಲೇ ಬಾಪುಜಿ ಆಸ್ಪತ್ರೆಗೆ ದಾಖಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮಗು ಮೃತಪಟ್ಟಿದೆ.

ವೈದ್ಯನ ಎಡವಟ್ಟಿನಿಂದ ಮಗು ಮೃತಪಟ್ಟಿದ್ದರಿಂದ ಆಕ್ರೋಶಗೊಂಡ ಪೋಷಕರು, ಮಗುವಿನ ಸಾವಿಗೆ ಜಿಲ್ಲಾಸ್ಪತ್ರೆ ವೈದ್ಯರೇ ಕಾರಣ ಎಂದು ಆಕ್ರೋಶ ಹೊರಹಾಕಿದ್ದು,ಮಗುವಿನ ಸಾವಿಗೆ ಕಾರಣನಾದ ವೈದ್ಯನನ್ನು ಅಮಾನತು ಮಾಡುವಂತೆ ಪೋಷಕರ ಒತ್ತಾಯಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments