Thursday, September 19, 2024
Google search engine
Homeಕ್ರೀಡೆಕೆಕೆಆರ್ ಕೋಚ್ ಸ್ಥಾನಕ್ಕೆ ವಿದಾಯ ಘೋಷಿಸಿದ ಗೌತಮ್ ಗಂಭೀರ್!

ಕೆಕೆಆರ್ ಕೋಚ್ ಸ್ಥಾನಕ್ಕೆ ವಿದಾಯ ಘೋಷಿಸಿದ ಗೌತಮ್ ಗಂಭೀರ್!

ಭಾರತ ತಂಡದ ಮುಖ್ಯ ಕೋಚ್ ಸ್ಥಾನ ಅಲಂಕರಿಸಲಿರುವ ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ ಕೋಲ್ಕತಾ ನೈಟ್ ರೈಡರ್ಸ್ ತಂಡಕ್ಕೆ ವಿದಾಯ ಘೋಷಿಸಿದ್ದಾರೆ.

ವೀಡಿಯೋ ಬಿಡುಗಡೆ ಮಾಡುವ ಮೂಲಕ ಗೌತಮ್ ಗಂಭೀರ್ ವಿಶೇಷ ರೀತಿಯಲ್ಲಿ ಕೆಕೆಆರ್ ತಂಡವನ್ನು ತೊರೆಯುವುದಾಗಿ ಘೋಷಿಸಿದ್ದಾರೆ. ಈ ಮೂಲಕ ಭಾರತ ತಂಡದ ಕೋಚ್ ಸ್ಥಾನ ಅಲಂಕರಿಸುವ ಬಗ್ಗೆ ಸೂಚನೆ ನೀಡಿದ್ದಾರೆ.

ಕೆಕೆಆರ್ ತಂಡದ ನಾಯಕನಾಗಿ ಎರಡು ಬಾರಿ ಐಪಿಎಲ್ ಚಾಂಪಿಯನ್ ಪ್ರಶಸ್ತಿ ಗೆದ್ದಿದ್ದರೆ, ಒಂದು ಬಾರಿ ಕೋಚ್ ಆಗಿ ತಂಡವನ್ನು ಪ್ರಶಸ್ತಿಯತ್ತ ಮುನ್ನಡೆಸಿದ್ದರು.

ಗೌತಮ್ ಗಂಭೀರ್ ಶ್ರೀಲಂಕಾ ಸರಣಿಯ ವೇಳೆ ಭಾರತ ತಂಡದ ಕೋಚ್ ಸ್ಥಾನವನ್ನು ಅಲಂಕರಿಸಲಿದ್ದಾರೆ ಎನ್ನಲಾಗಿದೆ. ಟಿ-20 ವಿಶ್ವಕಪ್ ಗೆದ್ದ ನಂತರ ರಾಹುಲ್ ದ್ರಾವಿಡ್ ಕೋಚ್ ಸ್ಥಾನದಿಂದ ನಿರ್ಗಮಿಸಿದ್ದಾರೆ. ದ್ರಾವಿಡ್ ಅವರಿಂದ ತೆರವಾದ ಸ್ಥಾನವನ್ನು ಗಂಭೀರ್ ಭರ್ತಿ ಮಾಡಲಿದ್ದು, ಈ ಬಗ್ಗೆ ಅಧಿಕೃತ ಘೋಷಣೆ ಇನ್ನಷ್ಟೇ ಆಗಬೇಕಿದೆ.

ಗಂಭೀರ್ ಭಾರತ ತಂಡದ ಕೋಚ್ ಆಗಿ ಅಧಿಕೃತ ಘೋಷಣೆ ಆಗುವ ಮುನ್ನ ಕೋಲ್ಕತಾ ನೈಟ್ ರೈಡರ್ಸ್ ತಂಡದಿಂದ ಬೀಳ್ಕೊಡುಗೆ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದು, ಶುಕ್ರವಾರ ಕೋಲ್ಕತಾದಲ್ಲಿ ಬೀಳ್ಕೊಡುಗೆ ಸಮಾರಂಭ ನಡೆಯಲಿದೆ ಎಂದು ಹೇಳಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments