Thursday, September 19, 2024
Google search engine
Homeಕ್ರೀಡೆಕಪಿಲ್ ದೇವ್ ಮನವಿಗೆ ಸ್ಪಂದಿಸಿದ ಬಿಸಿಸಿಐ: ಮಾಜಿ ಕ್ರಿಕೆಟಿಗನ ಚಿಕಿತ್ಸೆಗೆ 1 ಕೋಟಿ ರೂ. ಘೋಷಣೆ

ಕಪಿಲ್ ದೇವ್ ಮನವಿಗೆ ಸ್ಪಂದಿಸಿದ ಬಿಸಿಸಿಐ: ಮಾಜಿ ಕ್ರಿಕೆಟಿಗನ ಚಿಕಿತ್ಸೆಗೆ 1 ಕೋಟಿ ರೂ. ಘೋಷಣೆ

ಬ್ಲಡ್ ಕ್ಯಾನ್ಸರ್ ನಿಂದ ಬಳಲುತ್ತಿರುವ ಮಾಜಿ ಕ್ರಿಕೆಟಿಗ ಅಂಶುಮಾನ್ ಗಾಯಕ್ವಾಡ್ ಚಿಕಿತ್ಸೆಗೆ ಸ್ಪಂದಿಸುವಂತೆ ಕಪಿಲ್ ದೇವ್ ಮಾಡಿದ ಮನವಿಗೆ ಸ್ಪಂದಿಸಿರುವ ಬಿಸಿಸಿಐ 1 ಕೋಟಿ ರೂ. ಘೋಷಿಸಿದೆ.

ಭಾರತ ತಂಡದ ಮಾಜಿ ಆಟಗಾರ ಹಾಗೂ ಕೋಚ್ ಆಗಿ ಸೇವೆ ಸಲ್ಲಿಸಿದ್ದ ಅಂಶುಮಾನ್ ಗಾಯಕ್ವಾಡ್ ಕ್ಯಾನ್ಸರ್ ಗೆ ಲಂಡನ್ ನ ಕಿಂಗ್ಸ್ ಕಾಲೇಜು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಚಿಕಿತ್ಸೆಗೆ ದೊಡ್ಡ ಮೊತ್ತದ ಹಣ ಬೇಕಿರುವುದರಿಂದ ಕಪಿಲ್ ದೇವ್ ಸೇರಿದಂತೆ ಹಲವು ಆಟಗಾರರು ಹಣಕಾಸಿನ ನೆರವು ನೀಡುತ್ತಿದ್ದರು. ಆದರೆ ಸಾಕಾಗದ ಕಾರಣ ಒತ್ತಡದಲ್ಲಿದ್ದರು. ಕ್ರಿಕೆಟ್ ದಂತಕತೆ ಕಪಿಲ್ ದೇವ್ ಈ ವಿಷಯದಲ್ಲಿ ಭಾವುಕರಾಗಿ ಮಾತನಾಡಿ ಬಿಸಿಸಿಐ ಮಾಜಿ ಕ್ರಿಕೆಟಿಗನ ನೆರವಿಗೆ ಬರಬೇಕು ಎಂದು ಮನವಿ ಮಾಡಿದ್ದರು.

ಕಪಿಲ್ ದೇವ್ ಮನವಿಗೆ ಸ್ಪಂದಿಸಿದ ಬಿಸಿಸಿಐ ಕೂಡಲೇ 1 ಕೋಟಿ ರೂ. ನೆರವಿನ ಹಸ್ತ ಚಾಚಿದೆ. ಬಿಸಿಸಿಐ ಕಾರ್ಯದರ್ಶಿ ಜೈ ಶಾ ಗಾಯಕ್ವಾಡ್ ಚಿಕಿತ್ಸೆಗೆ ಕೂಡಲೇ 1 ಕೋಟಿ ರೂ. ಬಿಡುಗಡೆ ಮಾಡಿ ಹಣಕಾಸಿನ ನೆರವು ನೀಡುವಂತೆ ಸೂಚಿಸಿದ್ದಾರೆ ಎಂದು ತಿಳಿಸಿದೆ.

ಗಾಯಕ್ವಾಡ್ ಅವರ ಚಿಕಿತ್ಸಾ ವೆಚ್ಚದ ಮೇಲೆ ಗಮನ ಹರಿಸುವಂತೆ ಬಿಸಿಸಿಐಗೆ ಸೂಚಿಸಲಾಗಿದ್ದು, ಒಂದು ವೇಳೆ ಅಗತ್ಯಬಿದ್ದರೆ ಹೆಚ್ಚುವರಿ ನೆರವು ನೀಡಲು ಸಿದ್ಧ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments