Friday, October 18, 2024
Google search engine
HomeಅಪರಾಧMysore ಕ್ಷುಲಕ ಕಾರಣಕ್ಕೆ ಮನಸ್ತಾಪ, ಮೈಸೂರಿನಲ್ಲಿ ಪ್ರೇಮಿಗಳಿಬ್ಬರ ಆತ್ಮಹತ್ಯೆ!

Mysore ಕ್ಷುಲಕ ಕಾರಣಕ್ಕೆ ಮನಸ್ತಾಪ, ಮೈಸೂರಿನಲ್ಲಿ ಪ್ರೇಮಿಗಳಿಬ್ಬರ ಆತ್ಮಹತ್ಯೆ!

ಕ್ಷುಲಕ ಕಾರಣಕ್ಕೆ ಉಂಟಾದ ಮನಸ್ತಾಪದಿಂದ ಬೇಸತ್ತು ಪ್ರೇಮಿಗಳಿಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಡೆದಿದೆ.

ಮೈಸೂರಿನ ಮಂಡಕಳ್ಳಿಯಲ್ಲಿ ಮೋನಿಕಾ ಮತ್ತು ಜ್ಯೋತಿನಗರದ ನಿವಾಸಿ ಮನು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕಳೆದ ಎರಡು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದ ಮೋನಿಕಾ ಮತ್ತು ಮನು ನಡುವೆ ಇತ್ತೀಚೆಗೆ ಕ್ಷುಲಕ ಕಾರಣಕ್ಕೆ ಮನಸ್ತಾಪ ಉಂಟಾಗಿ ಮಾತು ಬಿಟ್ಟಿದ್ದರು.

ಮನಸ್ತಾಪದಿಂದ ಬೇಸತ್ತ ಮನು ಜ್ಯೋತಿನಗರದ ತಮ್ಮ ನಿವಾಸದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮನು ಆತ್ಮಹತ್ಯೆ ಮಾಡಿಕೊಂಡ ಸುದ್ದಿ ತಿಳಿದ ಮೋನಿಕಾ ಮಂಗಳವಾರ ತನ್ನ ಮನೆಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಇಬ್ಬರ ಶವಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments