Thursday, September 19, 2024
Google search engine
Homeತಾಜಾ ಸುದ್ದಿರಾಜ್ಯ ಸರ್ಕಾರ ದುರ್ಬಲಗೊಳಿಸಲು ಕೇಂದ್ರ ಸರ್ಕಾರದ ಸಂಘಟಿತ ಯತ್ನ: ಪ್ರಿಯಾಂಕ್ ಖರ್ಗೆ ಆರೋಪ

ರಾಜ್ಯ ಸರ್ಕಾರ ದುರ್ಬಲಗೊಳಿಸಲು ಕೇಂದ್ರ ಸರ್ಕಾರದ ಸಂಘಟಿತ ಯತ್ನ: ಪ್ರಿಯಾಂಕ್ ಖರ್ಗೆ ಆರೋಪ

ಪ್ರಜಾಸತ್ತಾತ್ಮಕವಾಗಿ ಚುನಾಯಿತವಾಗಿರುವ ಸರ್ಕಾರವನ್ನು ದುರ್ಬಲಗೊಳಿಸಲು ಬಿಜೆಪಿ ರಾಜಭವನವನ್ನು ಸಾಧನವಾಗಿ ದುರುಪಯೋಗಪಡಿಸಿಕೊಳ್ಳತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ತಮ್ಮ ಎಕ್ಸ್ ಖಾತೆಯಲ್ಲಿ ರಾಜ್ಯಪಾಲರ ಕ್ರಮವನ್ನು ಟೀಕಿಸಿರುವ ಸಚಿವರು ರಾಜ್ಯದ ಸಾಂವಿಧಾನಿಕ ಮುಖ್ಯಸ್ಥರು ತಮ್ಮ ರಾಜಕೀಯ ಯಜಮಾನರನ್ನು ಸಮಾಧಾನಪಡಿಸಲು ಸಾಂವಿಧಾನಿಕ ಬಿಕ್ಕಟ್ಟನ್ನು ಹುಟ್ಟುಹಾಕುತ್ತಿದ್ದಾರೆಎಂದಿದ್ದಾರೆ.

ಕೇಂದ್ರ ಸರ್ಕಾರ ತನ್ನ ಎಷ್ಟೇ ಶಕ್ತಿಯನ್ನು ಪ್ರಯೋಗಿಸಿದರೂ, ನಾವು ನಮ್ಮ ಪರವಾಗಿ ಸಂವಿಧಾನದೊಂದಿಗೆ ದೃಢವಾಗಿ ನಿಲ್ಲುತ್ತೇವೆ ಎಂದೂ ಪ್ರಿಯಾಂಕ್ ಖರ್ಗೆ ಎಕ್ಸ್ ಖಾತೆಯಲ್ಲಿ ಹೇಳಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments