ನವದೆಹಲಿ: ಕೇಂದ್ರ ಚುನಾವಣಾಧಿಕಾರಿ ಜ್ಞಾನೇಶ್ ಕುಮಾರ್ ವಿರುದ್ಧ ಪ್ರತಿಪಕ್ಷಗಳು ಸಲ್ಲಿಸಿದ್ದ ವಾಗ್ದಾಂಡನೆ ಪ್ರಸ್ತಾಪವನ್ನು ಲೋಕಸಭಾ ಹಾಗೂ ರಾಜ್ಯಸಭಾ ಅಧ್ಯಕ್ಷರು ತಿರಸ್ಕರಿಸಿದ್ದಾರೆ.
ರಾಜ್ಯಸಭಾಧ್ಯಕ್ಷ ಸಿಪಿ ರಾಧಾಕೃಷ್ಣನ್ ಮತ್ತು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಜ್ಞಾನೇಶ್ ಕುಮಾರ್ ಅವರನ್ನು ಚುನಾವಣಾಧಿಕಾರಿ ಸ್ಥಾನದಿಂದ ವಜಾಗೊಳಿಸಬೇಕು ಎಂದು ಪ್ರತಿಪಕ್ಷಗಳು ನೀಡಿದ್ದ ನೋಟಿಸ್ ತಿರಸ್ಕರಿಸಿದ್ದಾರೆ.
ಜ್ಞಾನೇಶ್ ಕುಮಾರ್ ಅವರನ್ನು ವಜಾಗೊಳಿಸುವ ಕುರಿತು ಕಾಂಗ್ರೆಸ್ ಹಿರಿಯ ಸದಸ್ಯ ಅಭಿಷೇಕ್ ಸಿಂಘ್ವಿ ರಾಜ್ಯಸಭೆಗೆ ಮನವಿ ಮಾಡಿದ್ದರು. ಆದರೆ ಸ್ಪಷ್ಟನೆ ಹಾಗೂ ಸಾಕ್ಷ್ಯಗಳನ್ನು ಕೋರಿ ನೋಟಿಸ್ ನೀಡಿ 19 ದಿನಗಳು ಕಳೆದರೂ ಯಾವುದೇ ಪ್ರತಿಕ್ರಿಯೆ ಬಾರದ ಕಾರಣ ಪ್ರಸ್ತಾಪವನ್ನು ತಿರಸ್ಕರಿಸಿದ್ದಾರೆ.



