ಚಿಕ್ಕಬಳ್ಳಾಪುರ: ಅನೈತಿಕ ಸಂಬಂಧ ಹೊಂದಿದ್ದ 38 ವರ್ಷದ ಮಹಿಳೆಯ ಕಾಟ ತಾಳಲಾರದೇ 19 ವರ್ಷದ ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಮೂಡಚಿಂತಲಹಳ್ಳಿ ಗ್ರಾಮದ ನಿವಾಸಿ ನಿಖಿಲ್ ಕುಮಾರ್ (19) ಆತ್ಮಹತ್ಯೆ ಮಾಡಿಕೊಂಡ ಯುವಕ. ನಿಖಿಲ್ 38 ವರ್ಷದ ಮಹಿಳೆ ಶಾರದಾ ಎಂಬಾಕೆಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಆರೋಪ ಕೇಳಿಬಂದಿದೆ.
ಚಿಂತಾಮಣಿಯ ಕಾಚಹಳ್ಳಿ ಕೆರೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಶವ ಪತ್ತೆಯಾಗಿದ್ದು, ಪೋಷಕರು ಶಾರದಾ ವಿರುದ್ಧ ದೂರು ನೀಡಿದ್ದಾರೆ.
ಹಲವು ವರ್ಷಗಳ ಹಿಂದೆಯೇ ಗಂಡನಿಂದ ವಿಚ್ಛೇದನ ಪಡೆದಿದ್ದ ಶಾರದಾ ಇಬ್ಬರು ಮಕ್ಕಳೊಂದಿಗೆ ಮೂಡಚಿಂತಹಳ್ಳಿ ಗ್ರಾಮದಲ್ಲಿ ವಾಸವಿದ್ದು, ನಿಖಿಲ್ ಜೊತೆ ಅಕ್ರಮ ಸಂಬಂಧ ಬೆಳೆಸಿದ್ದರು.
ನಿಖಿಲ್ ಪೋಷಕರ ವಿರೋಧದ ನಡುವೆಯೂ ಶಾರದಾ ಆಗಾಗ್ಗೆ ಯುವಕನ ಜೊತೆ ಸಂಬಂಧ ಮುಂದುವರಿಸಿದ್ದು, ನಿಖಿಲ್ ಜೊತೆಗೆ ಈಕೆ ಆಡಿರುವ ರಾಸಲೀಲೆಯ ಫೋಟೋಗಳು ಬೆಳಕಿಗೆ ಬಂದಿವೆ. ಪೋಕಷರು ನೀಡಿದ ದೂರಿನ ಅನ್ವಯ ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


