Friday, September 20, 2024
Google search engine
Homeಅಪರಾಧಕರ್ನಾಟಕ ಬಿಜೆಪಿ ಕಚೇರಿ ಸ್ಫೋಟಿಸಲು ಸಂಚು: ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದ ಚಾರ್ಜ್ ಶೀಟ್ ಉಲ್ಲೇಖ

ಕರ್ನಾಟಕ ಬಿಜೆಪಿ ಕಚೇರಿ ಸ್ಫೋಟಿಸಲು ಸಂಚು: ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದ ಚಾರ್ಜ್ ಶೀಟ್ ಉಲ್ಲೇಖ

ಕರ್ನಾಟಕ ಬಿಜೆಪಿ ಕಚೇರಿ ಸ್ಫೋಟಗೊಳಿಸುವ ಸಂಚು ವಿಫಲವಾಗಿದ್ದರಿಂದ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟಿಸಲಾಗಿದೆ.

ಬೆಂಗಳೂರಿನ ಮಲ್ಲೇಶ್ವರದಲ್ಲಿರುವ ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದಲ್ಲಿ ಬಂಧಿಸಲಾಗಿರುವ ಆರೋಪಿಗಳ ಹೇಳಿಕೆ ಆಧರಿಸಿ ಎನ್ ಐಎ ನ್ಯಾಯಾಲಯಕ್ಕೆ ಸಲ್ಲಿಸಿದ ಚಾರ್ಜ್ ಶೀಟ್ ನಲ್ಲಿ ವಿಷಯ ಬಹಿರಂಗಪಡಿಸಿದ್ದಾರೆ.

ಬಿಜೆಪಿ ಕಚೇರಿ ಸ್ಫೋಟಿಸಲು ತೆರಳಿದ್ದೆವು. ಆದರೆ ಅಲ್ಲಿ ತುಂಬಾ ಜನ ಸೇರಿದ್ದರು. ಇದರಿಂದ ಬಾಂಬ್ ಸ್ಫೋಟ ಮಾಡದೇ ವಾಪಸ್ ಬಂದಿದ್ದು, ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಇಟ್ಟು ಹೋಗಿದ್ದಾಗಿ ಆರೋಪಿಗಳು ವಿಚಾರಣೆ ವೇಳೆ ಹೇಳಿದ್ದಾರೆ.

ಬಂಧಿತ ನಾಲ್ವರು ಆರೋಪಿಗಳ ಪೈಕಿ ಇಬ್ಬರು ಶಿವಮೊಗ್ಗ ಜಿಲ್ಲೆಯವರಾಗಿದ್ದು, ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದ ನಂತರ ಪಶ್ಚಿಮ ಬಂಗಾಳದಲ್ಲಿ ಸೆರೆ ಸಿಕ್ಕಿದ್ದು, ಇವರು ದೇಶ ತೊರೆಯಲು ಪ್ರಯತ್ನಿಸುವಾಗ ಸಿಕ್ಕಿ ಬಿದ್ದಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments