Thursday, December 25, 2025
Google search engine
Homeಅಪರಾಧಬೆಂಗಳೂರಿನಲ್ಲಿ ಕುಡುಕ ಪ್ರಿಯಕರ ಆತ್ಮಹತ್ಯೆಗೆ ನೊಂದು ಪ್ರೇಯಸಿಯೂ ಆತ್ಮಹತ್ಯೆ

ಬೆಂಗಳೂರಿನಲ್ಲಿ ಕುಡುಕ ಪ್ರಿಯಕರ ಆತ್ಮಹತ್ಯೆಗೆ ನೊಂದು ಪ್ರೇಯಸಿಯೂ ಆತ್ಮಹತ್ಯೆ

ಕುಡಿಯಲು ಪ್ರೇಯಸಿ ಹಣ ನೀಡಲಿಲ್ಲ ಎಂದು ಪ್ರಿಯಕರ ಆತ್ಮಹತ್ಯೆ ಮಾಡಿಕೊಂಡರೆ, ಪ್ರಿಯಕರ ಅತ್ಮಹತ್ಯೆಯಿಂದ ನೊಂದ ಪ್ರೇಯಸಿ ಕೂಡ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಬೆಂಗಳೂರು ಹೊರವಲಯ ಆನೇಕಲ್ ತಾಲ್ಲೂಕಿನ ಕಲ್ಲುಬಾಳುವಿನಲ್ಲಿ ಲೀವ್ ಇನ್ ರಿಲೇಷನ್ ಶಿಪ್ ನಲ್ಲಿದ್ದ ಒಡಿಶಾ ಮೂಲದ ಸೀಮಾ ನಾಯಕ್ (25) ಹಾಗೂ ರಾಕೇಶ್ ಪಾತ್ರ (23) ಮೃತಪಟ್ಟ ಪ್ರೇಮಿಗಳು.

ಎರಡು ದಿನಗಳಿಂದ ಮನೆ ಬಾಗಿಲು ತೆರೆಯದ ಹಿನ್ನೆಲೆ ಸ್ಥಳೀಯರು ಅನುಮಾನಗೊಂಡು ಕಿಟಕಿ, ಗಾಜು ಒಡೆದು ಪರಿಶೀಲನೆ ಮಾಡಿದಾಗ ಯುವ ಜೋಡಿ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.

ಕೂಡಲೇ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಬೆಂಗಳೂರು ಗ್ರಾಮಾಂತರ ಅಡಿಷನಲ್ ಎಸ್ಪಿ ವೆಂಕಟೇಶ್ ಪ್ರಸನ್ನ, ಆನೇಕಲ್ ಉಪವಿಭಾಗದ ಡಿವೈಎಸ್ಪಿ ಮೋಹನ್ ಕುಮಾರ್, ಜಿಗಣಿ ಠಾಣೆ ಇನ್ಸ್‌ಪೆಕ್ಟರ್‌ ಮಂಜುನಾಥ್ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ಪೊಲೀಸರ ಮಾಹಿತಿ ಪ್ರಕಾರ, ಮೃತ ರಾಕೇಶ್ ಹಣಕ್ಕಾಗಿ ಪದೇ ಪದೇ ಕುಡಿದು ಜಗಳ ಮಾಡುತ್ತಿದ್ದ. ಭಾನುವಾರ ಸಹ ಹಣಕ್ಕಾಗಿ ಸೀಮಾ ಜೊತೆ ಜಗಳ ಮಾಡಿದ್ದ. ಹಣ ನೀಡುವುದಿಲ್ಲ ಎಂದು ಸೀಮಾ ಮಲಗಿದ್ದಳು. ಬೆಳಿಗ್ಗೆ ಎದ್ದು ನೋಡಿದಾಗ ರಾಕೇಶ್ ನೇಣು ಬಿಗಿದುಕೊಂಡಿದ್ದ.

ಹಗ್ಗ ತುಂಡರಿಸಿ ಬದುಕಿಸಲು ಪ್ರಯತ್ನ ಮಾಡಿದಾಗ ಮೃತಪಟ್ಟಿರುವುದು ಖಾತ್ರಿಯಾಗಿದೆ. ಬಳಿಕ ಸೀಮಾ ಕೂಡ ನೇಣಿಗೆ ಶರಣಾಗಿದ್ದಾಳೆ ಎಂದು ಪೊಲೀಸರು ತಿಳಿಸಿದ್ದು ಜಿಗಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments