Sunday, December 7, 2025
Google search engine
Homeಅಪರಾಧಗಂಡ ಮಾತು ಕೇಳಲಿಲ್ಲ ಅಂತ ಇಬ್ಬರು ಮಕ್ಕಳ ಜೊತೆ ತಾಯಿ ಕೆರೆಗೆ ಹಾರಿ ಆತ್ಮಹತ್ಯೆ

ಗಂಡ ಮಾತು ಕೇಳಲಿಲ್ಲ ಅಂತ ಇಬ್ಬರು ಮಕ್ಕಳ ಜೊತೆ ತಾಯಿ ಕೆರೆಗೆ ಹಾರಿ ಆತ್ಮಹತ್ಯೆ

ವಿಮಾನ ನಿಲ್ದಾಣದಲ್ಲಿ ಡ್ರೈವರ್ ಕೆಲಸಕ್ಕೆ ಹೋಗಲು ಗಂಡ ಒಪ್ಪದ ಕಾರಣಕ್ಕೆ ಇಬ್ಬರು ಹೆಣ್ಣು ಮಕ್ಕಳ ಜೊತೆ ತಾಯಿ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ.

ಚಿಕ್ಕಬಳ್ಳಾಪುರದ ರಂಗಸ್ಥಳ ಗ್ರಾಮದ ರಂಗಧಾಮ ಕೆರೆಗೆ ಹಾರಿ ಬಾಧಗಾನಹಳ್ಳಿ ಗ್ರಾಮದ ಲಾವಣ್ಯ (30) ಮಕ್ಕಳಾದ ನಿಹಾರಿಕಾ (10) ನೇಹಾ (6) ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಪತಿ ಜಯಣ್ಣ ಜೊತೆ ನಿನ್ನೆ ಲಾವಣ್ಯ ವಾಗ್ವಾದ ನಡೆಸಿದ್ದು, ಇಬ್ಬರು ಹೆಣ್ಣು ಮಕ್ಕಳು ಇರುವುದರಿಂದ ಶಾಲೆಗೆ ಹಾಕಲು ಚೆನ್ನಾಗಿ ದುಡಿಯಬೇಕು. ಇದಕ್ಕಾಗಿ ದೇವನಹಳ್ಳಿ ವಿಮಾನ ನಿಲ್ದಾಣದಲ್ಲಿ ಡ್ರೈವರ್‌ ಕೆಲಸಕ್ಕೆ ಹೋಗುವಂತೆ ಒತ್ತಾಯಕ್ಕೆ ಪತಿ ಮಣಿಯದ ಕಾರಣ ನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ.

ಗುರುವಾರ ಸಂಜೆ ಮನೆಯಿಂದ ನಾಪತ್ತೆಯಾಗಿದ್ದ ತಾಯಿ ಹಾಗೂ ಮಕ್ಕಳ ಮೃತದೇಹ ಶುಕ್ರವಾರ ಕೆರೆಯಲ್ಲಿ ಕಂಡು ಸ್ಥಳೀಯರು ನೋಡಿ ಪೊಲೀಸರಿಗೆ ಮಾಹಿತಿ ನೀಡಿದ್ದರು.

ಮೂರು ಮೃತದೇಹಗಳನ್ನ ಹೊರತೆಗೆದು ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಯ ಶವಾಗಾರಕ್ಕೆ ರವಾನೆ ಮಾಡಲಾಗಿದೆ. ಹೆಂಡತಿ ಮಕ್ಕಳನ್ನ ಕಳೆದುಕೊಂಡ ಗಂಡ ಜಯಣ್ಣ ರೋಧಿಸುವಂತಾಗಿದೆ. ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments