ಪ್ರಿಯಕರನ ಜೊತೆ ಸೇರಿ ಪತಿಯನ್ನು ತುಂಡು ತುಂಡಾಗಿ ಕತ್ತರಿಸಿ ಕೊಂದು ಶವವನ್ನು ಡ್ರಮ್ನಲ್ಲಿ ತುಂಬಿ ಸಿಮೆಂಟ್ ಹಾಕಿ ಮುಚ್ಚಿದ ಆಘಾತಕಾರಿ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ.
ಬ್ರಹ್ಮಪುರಿಯ ಇಂದಿರಾ ನಗರದಲ್ಲಿ ಖಾಸಗಿ ಹಡಗು ಕಂಪನಿಯ ಉದ್ಯೋಗಿ ಸೌರಭ್ ರಜಪೂತ್ (29) ಕೊಲೆಯಾದ ದುರ್ದೈವಿ ಪತಿ. ಪತ್ನಿ ಮುಸ್ಕಾನ್ (27) ಮತ್ತು ಪ್ರಿಯಕರ ಸಾಹಿಲ್ (25) ನನ್ನು ಪೊಲೀಸರು ಬಂಧಿಸಿದ್ದಾರೆ.
ಮೃತ ಸೌರಭ್ ಮಾ. 4ರಂದು ನಾಪತ್ತೆಯಾಗಿದ್ದರು. ಈ ಬಗ್ಗೆ ಮಾಹಿತಿ ಪಡೆದ ಪೊಲೀಸರು ತನಿಖೆ ಆರಂಭಿಸಿದ್ದರು. ಈ ವೇಳೆ ಪೊಲೀಸರು ಅನುಮಾನದಿಂದ ಪತ್ನಿ ಮುಸ್ಕಾನ್ ವಿಚಾರಣೆಗೊಳಪಡಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ.
ಪ್ರಿಯಕರ ಸಾಹಿಲ್ ಜೊತೆ ಸೇರಿ ಸೌರಭ್ನನ್ನು ಕೊಲೆ ಮಾಡಿರುವುದಾಗಿ ವಿಚಾರಣೆ ವೇಳೆ ಮುಸ್ಕಾನ್ ಒಪ್ಪಿಕೊಂಡಿದ್ದಾಳೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಆಯುಷ್ ವಿಕ್ರಮ್ ಸಿಂಗ್ ತಿಳಿಸಿದ್ದಾರೆ.
ಮಾ. 4ರಂದು ಸೌರಭ್ನನ್ನ ಮುಸ್ಕಾನ್ ಹಾಗೂ ಸಾಹಿಲ್ ಚಾಕುವಿನಿಂದ ಇರಿದು ಕೊಲೆ ಮಾಡಿದ್ದರು. ನಂತರ ಆತನ ದೇಹವನ್ನು ಪೀಸ್ ಪೀಸ್ ಆಗಿ ಕತ್ತರಿಸಿ, ಡ್ರಮ್ನೊಳಗೆ ಹಾಕಿ ಸಿಮೆಂಟ್ನಿಂದ ಮುಚ್ಚಿದ್ದರು ಎಂದು ತನಿಖೆ ವೇಳೆ ತಿಳಿದುಬಂದಿದೆ.
ಕೊಲೆ ಮಾಡಿದ ಬಳಿಕ ಮುಸ್ಕಾನ್, ಸೌರಭ್ನ ಫೋನ್ನಿಂದ ಕುಟುಂಬಸ್ಥರಿಗೆ ಮೆಸೇಜ್ ಕಳುಹಿಸುವ ಮೂಲಕ ಪ್ರಕರಣದ ದಾರಿ ತಪ್ಪಿಸಲು ಪ್ರಯತ್ನಿದ್ದಳು. ಬಳಿಕ ಆಕೆ ಪ್ರಿಯಕರ ಸಾಹಿಲ್ ಜೊತೆ ಸುತ್ತಾಡಲು ತೆರಳಿದ್ದಳು. ಸದ್ಯ ಆರೋಪಿಗಳಾದ ಮುಸ್ಕಾನ್ ಹಾಗೂ ಸಾಹಿಲ್ನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.