Home ಜಿಲ್ಲಾ ಸುದ್ದಿ ಅರಣ್ಯ ಒತ್ತುವರಿ ತೆರವಿಗೆ ತಾತ್ಕಾಲಿಕ ತಡೆ: ಬಿಕೆ ಹರಿಪ್ರಸಾದ್ ಮನವಿ

ಅರಣ್ಯ ಒತ್ತುವರಿ ತೆರವಿಗೆ ತಾತ್ಕಾಲಿಕ ತಡೆ: ಬಿಕೆ ಹರಿಪ್ರಸಾದ್ ಮನವಿ

by Editor
0 comments
bk hariprasad

ಅರಣ್ಯ ಇಲಾಖೆಯು ಒತ್ತುವರಿ ತೆರವುಗೊಳಿಸುವುದನ್ನು ತಾತ್ಕಾಲಿಕವಾಗಿ ನಿಲ್ಲಿಸಬೇಕೆಂದು ವಿಧಾನಪರಿಷತ್ ಸದಸ್ಯರಾದ ಬಿ ಕೆ ಹರಿಪ್ರಸಾದ್ ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರನ್ನು ಒತ್ತಾಯಿಸಿದ್ದಾರೆ.

ಅರಣ್ಯ ಸಚಿವರಾದ ಈಶ್ವರ್ ಖಂಡ್ರೆ ಅವರ ಜೊತೆ ಫೋನ್ ನಲ್ಲಿ ಮಾತನಾಡಿದ ಬಿಕೆ ಹರಿಪ್ರಸಾದ್, ಮಲೆನಾಡು ಮತ್ತು ಕರಾವಳಿ ಭಾಗಗಳಲ್ಲಿ ವಿವಿಧ ಯೋಜನೆಗಳಿಗಾಗಿ ತಮ್ಮ ಭೂಮಿ ಕಳೆದುಕೊಂಡು ನಿರಾಶ್ರಿತರಾಗಿರುವ ಕುಟುಂಬಗಳು ಹೆಚ್ಚಿವೆ. ಅರಣ್ಯ ಒತ್ತುವರಿ ತೆರವಿನಿಂದ ಈ ಕುಟುಂಬಗಳು ಬೀದಿ ಪಾಲಾಗಲಿವೆ ಎಂದು ಮನವರಿಕೆ ಮಾಡಿಕೊಟ್ಟಿದ್ದಾರೆ.

ಶಿವಮೊಗ್ಗ, ಉತ್ತರ ಕನ್ನಡ, ಕೊಡಗು ಸೇರಿದಂತೆ ಮಲೆನಾಡು ಭಾಗದಲ್ಲಿ ಹಲವಾರು ಜಿಲ್ಲೆಗಳಲ್ಲಿ ಆದಿವಾಸಿ ಹಾಗೂ ಬಡ ಕುಟುಂಬಗಳು ದಶಕಗಳಿಂದ ಕಾಡಿನಲ್ಲಿ ವಾಸವಾಗಿವೆ. ಈ ಕುಟುಂಬಗಳಿಗೆ ಇನ್ನೂ ಹಕ್ಕುಪತ್ರ ನೀಡಿಲ್ಲ. ಹೀಗಿರುವಾಗ ಅರಣ್ಯ ಒತ್ತುವರಿ ಮಾಡಿದರೆ ಈ ಕುಟುಂಬಗಳು ಬೀದಿಗೆ ಬೀಳಲಿವೆ ಎಂದು ಹೇಳಿದ್ದಾರೆ.

ಅಲ್ಲದೇ ಒಂದು ಎಕರೆಗಿಂತ ಕಡಿಮೆ ಹಾಗೂ ದಶಕಗಳಿಂದ ಅರಣ್ಯವಾದಲ್ಲಿ ವಾಸವಾಗಿರುವ ಕುಟುಂಬ ಹಾಗೂ ಸಣ್ಣಪುಟ್ಟ ಅಂಗಡಿಗಳನ್ನು ತೆರವು ಮಾಡದೇ, ಪರಿಸರಕ್ಕೆ ಹಾನಿಯಾಗುವ ಬೃಹತ್ ರೆಸಾರ್ಟ್ ಹಾಗೂ ಉದ್ದಿಮೆಗಳನ್ನು ತೆರವುಗೊಳಿಸಿ ಎಂದು ಅವರು ಮನವಿ ಮಾಡಿದ್ದಾರೆ.

banner

You may also like

Leave a Comment

Soledad is the Best Newspaper and Magazine WordPress Theme with tons of options and demos ready to import. This theme is perfect for blogs and excellent for online stores, news, magazine or review sites.

Buy Soledad now!

Edtior's Picks

Latest Articles

Latest news
ಬಿಆರ್‌ಎಸ್ ನಾಯಕ ರಾಮರಾವ್, ಹರೀಶ್‌ಗೆ ಗೃಹಬಂಧನ ಇಸ್ರೇಲ್-ಹಮಾಸ್ ಕದನ ವಿರಾಮ ಸಾಧ್ಯತೆ: ಮಧ್ಯಪ್ರಾಚ್ಯದಲ್ಲಿ ಶಾಂತಿ ವಾಪಸ್ 3ನೇ ತಲೆಮಾರಿನ ನಾಗ್ ಕ್ಷಿಪಣಿ ಮೊದಲ ಪ್ರಯೋಗ ಯಶಸ್ವಿ! ಖೋಖೋ ವಿಶ್ವಕಪ್: ಬ್ರೆಜಿಲ್ ಮಣಿಸಿದ ಭಾರತ ಪುರುಷರ ತಂಡ ನಾಕೌಟ್ ಸನಿಹ ಖೋ-ಖೋ ವಿಶ್ವಕಪ್‌ 2025: ದಕ್ಷಿಣ ಕೊರಿಯಾ ವಿರುದ್ಧ ಗೆದ್ದು ಇತಿಹಾಸ ಬರೆದ ಭಾರತ ಮಹಿಳಾ ತಂಡ ರಣಜಿ ಟ್ರೋಫಿ ದೆಹಲಿ ಸಂಭಾವ್ಯ ತಂಡದಲ್ಲಿ ವಿರಾಟ್ ಕೊಹ್ಲಿ, ರಿಷಭ್ ಪಂತ್ ! ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ ವಾರ್ಷಿಕ ಪ್ರಶಸ್ತಿ ಪ್ರಕಟ! ಶಬರಿಮಲೆಯಲ್ಲಿ ಮಕರಜ್ಯೋತಿ ದರ್ಶನ, ಕಣ್ತುಂಬಿಕೊಂಡ ಅಯ್ಯಪ್ಪ ಭಕ್ತರು ದಲಿತ ಅಥ್ಲೀಟ್ ಮೇಲೆ 65 ಜನರಿಂದ ಅತ್ಯಾಚಾರ: 44 ಮಂದಿ ಬಂಧನ ವಿಕಲಚೇತನ ಉದ್ಯೋಗಿಗಳ ಜತೆ ಸಂಕ್ರಾಂತಿ ಆಚರಿಸಿದ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ