ದೇವರ ಕಾರ್ಯಕ್ಕೆ ಹೊರಟ್ಟಿದ್ದ ಪಿಕಪ್ ವಾಹನಕ್ಕೆ ಸರಕಾರಿ ಬಸ್ ಡಿಕ್ಕಿ ಹೊಡೆದಿದ್ದರಿಂದ ನಾಲ್ವರು ಮತಪಟ್ಟ ದಾರುಣ ಘಟನೆ ಯಾದಗಿರಿಯಲ್ಲಿ ಸಂಭವಿಸಿದೆ.
ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಮದ್ದರಕಿ ಗ್ರಾಮದಲ್ಲಿ ಗುರವಾರ ಈ ಘಟನೆ ಸಂಭವಿಸಿದ್ದು, ನಾಲ್ವರು ಮೃತಪಟ್ಟು, ಹಲವು ಮಂದಿ ಗಾಯಗೊಂಡಿದ್ದಾರೆ. ಮೃತರು ಯಾದಗಿರಿಯ ವರ್ಕನಹಳ್ಳಿ ಗ್ರಾಮದ ನಿವಾಸಿಗಳು ಎಂದು ತಿಳಿದು ಬಂದಿದೆ.
ಭೀಮರಾಯನಗುಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭಸಿದ್ದು, ಕಲಬುರಗಿಯ ಫತ್ತರಗಿಯಲ್ಲಿ ನಡೆದ ದೇವರ ಕಾರ್ಯದಲ್ಲಿ ಪಾಲ್ಗೊಂಡು ತವರಿಗೆ ಮರಳುವಾಗ ಈ ಅಪಘಾತ ಸಂಭವಿಸಿದೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.