Wednesday, December 24, 2025
Google search engine
Homeಕಾನೂನು2017ರ ಖ್ಯಾತ ನಟಿ ಮೇಲೆ ಲೈಂಗಿಕ ದೌರ್ಜನ್ಯ: ಮಲಯಾಳಂ ಖ್ಯಾತ ನಟ ದಿಲೀಪ್ ದೋಷಮುಕ್ತ, 6...

2017ರ ಖ್ಯಾತ ನಟಿ ಮೇಲೆ ಲೈಂಗಿಕ ದೌರ್ಜನ್ಯ: ಮಲಯಾಳಂ ಖ್ಯಾತ ನಟ ದಿಲೀಪ್ ದೋಷಮುಕ್ತ, 6 ಮಂದಿ ದೋಷಿಗಳು!

2017ರ ಖ್ಯಾತ ಬಹುಭಾಷಾ ನಟಿ ಮೇಲೆ ಲೈಂಗಿಕ ದೌರ್ಜನ್ಯ ಹಾಗೂ ಹಲ್ಲೆ ಪ್ರಕರಣದಲ್ಲಿ ಮಲಯಾಳಂ ಖ್ಯಾತ ನಟ ದಿಲೀಪ್ ಸೇರಿದಂತೆ ಮೂವರನ್ನು ಕೇರಳ ನ್ಯಾಯಾಲಯ ದೋಷಮುಕ್ತಗೊಳಿಸಿ ತೀರ್ಪು ನೀಡಿದೆ.

ಸರ್ಕಾರದ ಪರ ವಕೀಲರು ಸೂಕ್ತ ಸಾಕ್ಷ್ಯಗಳನ್ನು ಒದಗಿಸಲು ವಿಫಲರಾದ ಹಿನ್ನೆಲೆಯಲ್ಲಿ ದಿಲೀಪ್ ಹಾಗೂ ಮೂವರು ಆರೋಪಿಗಳನ್ನು ದೋಷಮುಕ್ತ ಎಂದು ನ್ಯಾಯಾಲಯ ಘೋಷಿಸಿ ಸೋಮವಾರ ತೀರ್ಪು ನೀಡಿತು.

ಇದೇ ವೇಳೆ ಪ್ರಕರಣದ ಇತರೆ 6 ಆರೋಪಿಗಳು ದೋಷಿಗಳು ಎಂದು ಘೋಷಿಸಿದೆ. ಕ್ರಿಮಿನಲ್ ಪಿತೂರಿ, ಅಕ್ರಮ ಬಂಧನ, ದೌರ್ಜನ್ಯಕ್ಕೆ ಒಳಗಾದ ಹಲ್ಲೆ, ಅಪಹರಣ, ವಿವಸ್ತ್ರಗೊಳಿಸಲು ಯತ್ನ ಮತ್ತು ಸಾಮೂಹಿಕ ಅತ್ಯಾಚಾರ ಆರೋಪಗಳು ಸಾಬೀತಾಗಿದೆ ಎಂದು ಹೇಳಿದೆ.

ಎರ್ನಾಕುಲಂ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶ ಹನಿ ಎಂ ವರ್ಗೀಸ್ ಸೋಮವಾರ ಮಧ್ಯಾಹ್ನ 11 ಗಂಟೆಗೆ ತೀರ್ಪು ಪ್ರಕಟಿಸಿದರು.

ತೀರ್ಪು ಪ್ರಕಟವಾಗುತ್ತಿದ್ದಂತೆ ದಿಲೀಪ್ ಪ್ರಕರಣದಲ್ಲಿ ಸಹಕರಿಸಿದ ಎಲ್ಲರಿಗೂ ಧನ್ಯವಾದ ಅರ್ಪಿಸಿದರು. 9 ವರ್ಷಗಳಿಂದ ಎದುರಿಸುತ್ತಿದ್ದ ಆರೋಪದಿಂದ ಮುಕ್ತನಾಗಿದ್ದೇನೆ. ನನ್ನ ವಿರುದ್ಧ ಪೊಲೀಸರು ಸುಳ್ಳು ಪ್ರಕರಣ ದಾಖಲಿಸಿದ್ದರು ಎಂದು ಆರೋಪಿಸಿದರು.

ಪ್ರಕರಣದ ಹಿನ್ನೆಲೆ

ಫೆಬ್ರವರಿ 17, 2017 ರಂದು ಕೊಚ್ಚಿಯಲ್ಲಿ ಮಲಯಾಳಂನ ಖ್ಯಾತ ನಟಿಯನ್ನು ಅಪಹರಿಸಿ ಕಾರಿನೊಳಗೆ ಸುಮಾರು ಎರಡು ಗಂಟೆಗಳ ಕಾಲ ವಿವಸ್ತ್ರಗೊಳಿಸಿ ಲೈಂಗಿಕ ದೌರ್ಜನ್ಯ ಹಾಗೂ ಹಲ್ಲೆ ನಡೆಸಿದ ಪ್ರಕರಣ ಇದಾಗಿತ್ತು.

ಪಲ್ಸರ್ ಸುನಿ, ಮಾರ್ಟಿನ್ ಆಂಟೋನಿ, ಮಣಿಕಂದನ್ ಬಿ, ವಿಜೇಶ್ ವಿಪಿ, ಸಲೀಂ ಎಚ್, ಪ್ರದೀಪ್, ಚಾರ್ಲಿ ಥಾಮಸ್, ಸನಿಲ್ ಕುಮಾರ್ ಅಲಿಯಾಸ್ ಮೇಸ್ತ್ರಿ ಸನಿಲ್ ಮತ್ತು ಶರತ್ ಸೇರಿದಂತೆ ಹತ್ತು ಆರೋಪಿಗಳು ಪ್ರಕರಣದಲ್ಲಿ ವಿಚಾರಣೆಯನ್ನು ಎದುರಿಸಿದ್ದರು.

ಆರೋಪಿಗಳ ವಿರುದ್ಧ ಕ್ರಿಮಿನಲ್ ಪಿತೂರಿ, ಅಪಹರಣ, ಲೈಂಗಿಕ ದೌರ್ಜನ್ಯ, ಸಾಮೂಹಿಕ ಅತ್ಯಾಚಾರ, ಸಾಕ್ಷ್ಯ ನಾಶ ಮತ್ತು ಸಾಮಾನ್ಯ ಉದ್ದೇಶ ಸೇರಿದಂತೆ ಮಾಹಿತಿ ತಂತ್ರಜ್ಞಾನ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ ಭಾರತೀಯ ದಂಡ ಸಂಹಿತೆಯ ಬಹು ವಿಭಾಗಗಳ ಅಡಿಯಲ್ಲಿ ಆರೋಪ ಹೊರಿಸಲಾಯಿತು.

ಪ್ರಕರಣದ 8ನೇ ಆರೋಪಿಯಾಗಿದ್ದ ದಿಲೀಪ್, ಸಾಕ್ಷ್ಯ ನಾಶಪಡಿಸಿದ ಹೆಚ್ಚುವರಿ ಆರೋಪವನ್ನೂ ಎದುರಿಸಿದರು.

ಪೊಲೀಸರು ಏಪ್ರಿಲ್ 2017 ರಲ್ಲಿ ಮೊದಲ ಆರೋಪಪಟ್ಟಿ ಸಲ್ಲಿಸಿದ್ದು, ಪ್ರಮುಖ ಆರೋಪಿ ಪಲ್ಸರ್ ಸುನಿ ಜೈಲಿನಿಂದ ತನಗೆ ಪತ್ರ ಕಳುಹಿಸಿದ್ದಾನೆ ಎಂದು ತನಿಖಾಧಿಕಾರಿಗಳು ಆರೋಪಿಸಿದ ನಂತರ ಆ ವರ್ಷದ ಜುಲೈನಲ್ಲಿ ದಿಲೀಪ್ ಅವರನ್ನು ಬಂಧಿಸಲಾಯಿತು. ನಂತರ ಅವರಿಗೆ ಅಕ್ಟೋಬರ್ 2017 ರಲ್ಲಿ ಜಾಮೀನು ನೀಡಲಾಯಿತು.

2017 ರ ನಂತರ ಪೂರಕ ಆರೋಪಪಟ್ಟಿ ಸಲ್ಲಿಸಲಾಯಿತು, ಆದರೆ ಹಲವಾರು ಆರೋಪಿಗಳನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಲಾಯಿತು. 2018ರಲ್ಲಿ, ಕೇರಳ ಪೊಲೀಸರು ಪಕ್ಷಪಾತ ತೋರಿದ್ದಾರೆ ಎಂದು ಆರೋಪಿಸಿ ದಿಲೀಪ್ ಕೇಂದ್ರ ತನಿಖಾ ದಳದ ತನಿಖೆ ವಿರುದ್ಧ ಸಲ್ಲಿಸಿದ್ದ ಅರ್ಜಿ  ವಜಾಗೊಳಿಸಲಾಯಿತು.

ವಿಚಾರಣೆ ಪೂರ್ಣಗೊಳ್ಳುವ ಹಂತದಲ್ಲಿದೆ ಎಂದು ಗಮನಿಸಿ, ಈ ವರ್ಷದ ಆರಂಭದಲ್ಲಿ ವಿಭಾಗೀಯ ಪೀಠವು ಅವರ ಮೇಲ್ಮನವಿಯನ್ನು ತಿರಸ್ಕರಿಸಿತು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments