Home ಮನರಂಜನೆ ವಿವಾದಗಳಿಂದ ಬೇಸರ: ಚಿತ್ರರಂಗ ತೊರೆಯಲು ಪುಷ್ಪ-2 ನಿರ್ದೇಶಕ ಸುಕುಮಾರ್ ನಿರ್ಧಾರ!

ವಿವಾದಗಳಿಂದ ಬೇಸರ: ಚಿತ್ರರಂಗ ತೊರೆಯಲು ಪುಷ್ಪ-2 ನಿರ್ದೇಶಕ ಸುಕುಮಾರ್ ನಿರ್ಧಾರ!

ಡಲ್ಲಾಸ್ ನಲ್ಲಿ ನಡೆದ ರಾಮ್ ಚರಣ್ ನಟಿಸಿರುವ ಗೇಮ್ ಚೇಂಜರ್ ಚಿತ್ರದ ಪ್ರಮೋಷನ್ ವೇಳೆ ನೀವು ಯಾವುದರಿಂದ ಹೊರಗೆ ಇರಲು ಬಯಸುತ್ತೀರಿ ಎಂಬ ಪ್ರಶ್ನೆಗೆ ‘ಸಿನಿಮಾ’ ಎಂದು ಹೇಳುವ ಮೂಲಕ ನೆರೆದಿದ್ದವರನ್ನ ಆಘಾತಕ್ಕೆ ಒಳಪಡಿಸಿದರು.

by Editor
0 comments
sukumar

ಪುಷ್ಪ-2 ಚಿತ್ರದ ಮೂಲಕ ದೇಶಾದ್ಯಂತ ಭಾರೀ ಬೇಡಿಕೆಯಲ್ಲಿರುವ ನಿರ್ದೇಶಕ ಸುಕುಮಾರ್ ಚಿತ್ರರಂಗ ತೊರೆಯುವ ಬಗ್ಗೆ ಚಿಂತನೆ ನಡೆಸಿದ್ದಾರೆ.

ಪುಷ್ಪ-2 ಚಿತ್ರದ ಬಿಡುಗಡೆ ವೇಳೆ ಸಂಭವಿಸಿದ ಕಾಲ್ತುಳಿತ ಪ್ರಕರಣದಲ್ಲಿ ತಾಯಿ ಮೃತಪಟ್ಟು, ಮಗ ಅಸ್ವಸ್ಥಗೊಂಡ ಘಟನೆಯಿಂದ ಉದ್ಭವವಾಗಿರುವ ವಿವಾದಗಳಿಂದ ತತ್ತರಿಸಿರುವ ನಿರ್ದೇಶಕ ಸುಕುಮಾರ್ ಚಿತ್ರರಂಗವನ್ನೇ ತೊರೆಯಲು ನಿರ್ಧರಿಸಿದ್ದಾರೆ ಎಂದು ಹೇಳಲಾಗಿದೆ.

ಡಲ್ಲಾಸ್ ನಲ್ಲಿ ನಡೆದ ರಾಮ್ ಚರಣ್ ನಟಿಸಿರುವ ಗೇಮ್ ಚೇಂಜರ್ ಚಿತ್ರದ ಪ್ರಮೋಷನ್ ವೇಳೆ ನೀವು ಯಾವುದರಿಂದ ಹೊರಗೆ ಇರಲು ಬಯಸುತ್ತೀರಿ ಎಂಬ ಪ್ರಶ್ನೆಗೆ ‘ಸಿನಿಮಾ’ ಎಂದು ಹೇಳುವ ಮೂಲಕ ನೆರೆದಿದ್ದವರನ್ನ ಆಘಾತಕ್ಕೆ ಒಳಪಡಿಸಿದರು.

ಕೂಡಲೇ ರಾಮ್ ಚರಣ್ ಮೈಕ್ ಕಸಿದುಕೊಂಡು ಪರಿಸ್ಥಿತಿಯನ್ನು ತಿಳಿಗೊಳಿಸಲು ಪ್ರಯತ್ನಿಸಿದರು. ನಂತರ ನಿಮ್ಮ ನಿರ್ಧಾರವನ್ನು ಪರಾಮರ್ಶಿಸಿಕೊಳ್ಳುತ್ತೀರಿ ಎಂಬ ವಿಶ್ವಾಸವಿದೆ ಎಂದ ಹೇಳಿದರು.

banner

ಆದರೆ ಚುಟುಕಾಗಿ ನಡೆದ ಈ ಘಟನೆ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಕಾಲ್ತುಳಿತ ಪ್ರಕರಣದಿಂದ ತೆಲಂಗಾಣ ಸರ್ಕಾರ ತೆಲುಗು ಚಿತ್ರರಂಗದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದರು. ಸಿನಿಮಾದವರು ಈಗ ಸಿನಿಮಾ ಮಾಡುತ್ತಿರುವುದು ಉದ್ಯಮವಾಗಿದೆ. ಇದರಿಂದ ಅಭಿಮಾನಿಗಳನ್ನು ನಿಯಂತ್ರಿಸುತ್ತಿದ್ದಾರೆ ಎಂದು ಆರೋಪಿಸಿದ್ದರು.

ಅಲ್ಲದೇ ಕಾಲ್ತುಳಿತ ಪ್ರಕರಣದಲ್ಲಿ ಅಲ್ಲು ಅರ್ಜುನ್ ಅವರನ್ನು ಬಂಧಿಸಿದ್ದ ಪೊಲೀಸರು ನಂತರ ಎರಡು ಬಾರಿ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದರು.

You may also like

Leave a Comment

Soledad is the Best Newspaper and Magazine WordPress Theme with tons of options and demos ready to import. This theme is perfect for blogs and excellent for online stores, news, magazine or review sites.

Buy Soledad now!

Edtior's Picks

Latest Articles

Latest news
ಷೇರು ಮಾರುಕಟ್ಟೆ: 4 ದಿನದಲ್ಲಿ ಹೂಡಿಕೆದಾರರಿಗೆ 24.69 ಲಕ್ಷ ಕೋಟಿ ರೂ. ನಷ್ಟ! 4 ಮಕ್ಕಳನ್ನು ಹೆತ್ತರೆ 1 ಲಕ್ಷ ರೂ. ಬಹುಮಾನ: ಬ್ರಾಹ್ಮಣ ಮಂಡಳಿ ಘೋಷಣೆ ರಾಜ್ಯ ಸರ್ಕಾರದ ಹೆಚ್ಚುವರಿ ಅಕ್ಕಿ ಖರೀದಿಗೆ ಕೇಂದ್ರ ಸಮ್ಮತಿ! ಗೋವುಗಳ ಕೆಚ್ಚಲು ಕೊಯ್ದು ವಿಕೃತಿ: ಪರಿಸರವಾದಿಗಳಿಂದ ಮೇಣಬತ್ತಿ ಹಚ್ಚಿ ಪ್ರತಿಭಟನೆ Austrelian Open: 19 ವರ್ಷದ ಬಸವರೆಡ್ಡಿ ಮುಂದೆ ಜೊಕೊವಿಕ್ ಗೆ ಪ್ರಯಾಸದ ಜಯ ಜಪಾನ್ ನಲ್ಲಿ ಪ್ರಬಲ ಭೂಕಂಪನ: ಸುನಾಮಿ ಎಚ್ಚರಿಕೆ 3 ಐಎನ್ ಎಸ್ ಯುದ್ಧ ನೌಕೆಗಳನ್ನು ಲೋಕಾರ್ಪಣೆ ಮಾಡಲಿರುವ ಪ್ರಧಾನಿ ಮೋದಿ! ಖಾತಾ ಇಲ್ಲದ ಆಸ್ತಿಗಳಿಗಾಗಿ ಬಿಬಿಎಂಪಿಯಿಂದ ವೆಬ್ ಸೈಟ್ ಬಿಡುಗಡೆ: ಖಾತಾ ಪಡೆಯುವ ವಿಧಾನ ಇಲ್ಲಿದೆ! ನೇಮಕಾತಿಯ ಮೆಸೇಜ್ ಸುಳ್ಳು, ನಂಬಬೇಡಿ: ಸಣ್ಣ ನೀರಾವರಿ ಇಲಾಖೆ ಸ್ಪಷ್ಟನೆ 2024ರಲ್ಲಿ ಹತ್ಯೆಯಾದ ಉಗ್ರರಲ್ಲಿ ಶೇ.60ರಷ್ಟು ಪಾಕಿಸ್ತಾನಿಯರು: ಸೇನಾ ಮುಖ್ಯಸ್ಥ ಉಪೇಂದ್ರ!