Sunday, December 7, 2025
Google search engine
Homeಕಾನೂನುಪವಿತ್ರಾ ಗೌಡಗೆ ಹಿನ್ನಡೆ: ಜಾಮೀನು ಅರ್ಜಿ ವಜಾಗೊಳಿಸಿದ ಸುಪ್ರೀಂ

ಪವಿತ್ರಾ ಗೌಡಗೆ ಹಿನ್ನಡೆ: ಜಾಮೀನು ಅರ್ಜಿ ವಜಾಗೊಳಿಸಿದ ಸುಪ್ರೀಂ

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಅರ್ಜಿ ಆದೇಶವನ್ನು ಪುನರ್ ಪರಿಶೀಲಿಸುವಂತೆ ಎ1 ಆರೋಪಿ ಪವಿತ್ರಾ ಗೌಡ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ವಜಾಗೊಳಿಸಿದೆ.

ನ್ಯಾಯಮೂರ್ತಿ ಜೆ.ಬಿ ಪರ್ದಿವಾಲಾ ಹಾಗೂ ಆರ್. ಮಹಾದೇವನ್ ಅವರಿದ್ದ ದ್ವಿಸದಸ್ಯ ಪೀಠ ಶನಿವಾರ ಅರ್ಜಿಯನ್ನು ವಜಾಗೊಳಿಸಿದೆ.

ಅರ್ಜಿ ವಿಚಾರಣೆ ವೇಳೆ ನಾವು ಆದೇಶ ಮತ್ತು ದಾಖಲೆಗಳನ್ನು ಸೂಕ್ಷ್ಮವಾಗಿ ಪರಿಶೀಲಿಸಿದ್ದೇವೆ. ಮತ್ತೊಮ್ಮೆ ಪರಿಶೀಲನೆ ನಡೆಸಿ ಆದೇಶ ಮಾಡುವ ಅಗತ್ಯವಿಲ್ಲ ಎಂದು ಕೋರ್ಟ್‌ ಸ್ಪಷ್ಟಪಡಿಸಿದೆ.

ಈ ಹಿಂದೆ ಹೈಕೋರ್ಟ್ ನೀಡಿದ್ದ ಜಾಮೀನು ರದ್ದುಗೊಳಿಸಿ ಸುಪ್ರೀಂ ಕೋರ್ಟ್ ಆದೇಶ ಹೊರಡಿಸಿತ್ತು. ಆದೇಶ ಪರಿಶೀಲನೆ ಕೋರಿ ಸುಪ್ರೀಂಗೆ ಕೊಲೆ ಆರೋಪಿ ಪವಿತ್ರಾ ಗೌಡ ಅರ್ಜಿ ಸಲ್ಲಿಕೆ ಮಾಡಿದ್ದರು.

ಮಗಳು ಮತ್ತು ಪೋಷಕರ ಪೋಷಣೆಗಾಗಿ ಜಾಮೀನು ಕೋರಿದ್ದ ಪವಿತ್ರಾ ಗೌಡ, ಏಕಾಂಗಿಯಾಗಿ ಕಾನೂನು ಹೋರಾಟಕ್ಕೆ ಇಳಿದಿದ್ದರು.

ನಟ ದರ್ಶನ್ ಹಾಗೂ ಪವಿತ್ರಾ ಗೌಡ ಸೇರಿದಂತೆ ಎಲ್ಲಾ ಆರೋಪಿಗಳ ವಿರುದ್ಧ ಬೆಂಗಳೂರು ಸ್ಥಳೀಯ ನ್ಯಾಯಾಲಯದಲ್ಲಿ ದೋಷಾರೋಪ ಪ್ರಕ್ರಿಯೆ ಪೂರ್ಣಗೊಂಡಿದ್ದು, ನವೆಂಬರ್ 10ರಿಂದ ವಿಚಾರಣೆ ಆರಂಭವಾಗಲಿದೆ. ಪೊಲೀಸರು ಸಲ್ಲಿಸಿದ ದೋಷಾರೋಪಗಳನ್ನು ಎಲ್ಲಾ ಆರೋಪಿಗಳು ನಿರಾಕರಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments