ಒಬ್ಬಳ ಜೊತೆ ಇಬ್ಬರು ಅಕ್ರಮ ಸಂಬಂಧ ಒಬ್ಬನ ಕೊಲೆಯಲ್ಲಿ ಅಂತ್ಯವಾದ ಘಟನೆ ಹಾಸನದ ಕೆ.ಆರ್.ಪುರಂನಲ್ಲಿ ನಡೆದಿದೆ.
ಅಡುಗೆ ಕಂಟ್ರ್ಯಾಕ್ಟರ್ ಆನಂದ್ (48) ಕೊಲೆಯಾಗಿದ್ದು, ಕೊಲೆ ಆರೋಪಿಯನ್ನು ಧರಣೇಂದ್ರಪ್ರಕಾಶ್ ಎಂದು ಗುರುತಿಸಲಾಗಿದೆ.
ಇಬ್ಬರೂ ಒಬ್ಬ ಮಹಿಳೆ ಜೊತೆ ಅಕ್ರಮ ಸಂಬಂಧ ಹೊಂದಿದ್ದರು. ಇದೇ ವಿಚಾರಕ್ಕೆ, ಮದ್ಯ ಸೇವಿಸುವ ವೇಳೆ ಇಬ್ಬರ ನಡುವೆ ಗಲಾಟೆಯಾಗಿತ್ತು. ಗಲಾಟೆಯ ಬಳಿಕ ಇಬ್ಬರೂ ಮನೆಗೆ ತೆರಳಿದ್ದರು.
ಮನೆಗೆ ತೆರಳಿದ ಬಳಿಕ ಆರೋಪಿ ಧರಣೇಂದ್ರ ಪ್ರಕಾಶ್, ಆನಂದ್ಗೆ ಕರೆ ಮಾಡಿ ಮಹಿಳೆ ಮನೆ ಬಳಿ ಬರುವಂತೆ ಆವಾಜ್ ಹಾಕಿದ್ದ. ಗಾಡಿಯಲ್ಲಿ ಆನಂದ್ ಬರುತ್ತಿದ್ದಂತೆ ಆರೋಪಿ ಐದಾರು ಬಾರಿ ಚಾಕು ಇರಿದು ಹತ್ಯೆ ಮಾಡಿದ್ದಾನೆ.
ಸ್ಥಳಕ್ಕೆ ಬಡಾವಣೆ ಠಾಣೆ ಪೊಲೀಸರು (Police) ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮಹಿಳೆಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ತಲೆಮರೆಸಿಕೊಂಡಿರುವ ಆರೋಪಿ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.



