ಸಾಮಾಜಿಕ ಜಾಲತಾಣ ನಿಷೇಧ ವಾಪಸ್ ಪಡೆದರೂ ಪ್ರತಿಭಟನೆ ಮುಂದುವರಿದ ಹಿನ್ನೆಲೆಯಲ್ಲಿ ನೇಪಾಳ ಪ್ರಧಾನಿ ಸ್ಥಾನಕ್ಕೆ ಕೆಪಿ ಶರ್ಮಾ ಓಲಿ ರಾಜೀನಾಮೆ ನೀಡಿದ್ದಾರೆ.
ನೇಪಾಳದಲ್ಲಿ ನಡೆದ ಪ್ರತಿಭಟನೆ ಹಿಂಸಾರೂಪ ಪಡೆದಿದ್ದು, ಕನಿಷ್ಠ 20 ಮಂದಿ ಮೃತಪಟ್ಟು ಸಾವಿರಾರು ಮಂದಿ ಗಾಯಗೊಂಡಿದ್ದರು. ಪ್ರತಿಭಟನೆ ತೀವ್ರ ಸ್ವರೂಪ ಪಡೆದ ಹಿನ್ನೆಲೆಯಲ್ಲಿ 26 ಸಾಮಾಜಿಕ ಜಾಲತಾಣಗಳ ಮೇಲೆ ವಿಧಿಸಿದ್ದ ನಿಷೇಧ ತೆರವುಗೊಳಿಸಲಾಗಿತ್ತು.
ಪ್ರತಿಭಟನೆ ಹಿನ್ನೆಲೆಯಲ್ಲಿ ಹಲವು ಸಚಿವರು ರಾಜೀನಾಮೆ ಘೋಷಿಸಿದ್ದಾರೆ. ಅಲ್ಲದೇ ಸಚಿವ ಸಂಪುಟದಲ್ಲಿ ಪ್ರಕರಣದ ಕುರಿತು ತನಿಖೆಗೆ ಆದೇಶಿಸಲಾಗಿದೆ.
ಹಿಂಸಾತ್ಮಕ ಪ್ರತಿಭಟನೆಗಳ ನಡುವೆ ಅವರ ಮೇಲೆ ರಾಜೀನಾಮೆ ನೀಡುವಂತೆ ಒತ್ತಡವಿತ್ತು. ಸೇನಾ ಮುಖ್ಯಸ್ಥರು ಪ್ರಧಾನಿ ಬಳಿ ರಾಜೀನಾಮೆ ನೀಡುವಂತೆ ಕೇಳಿದ್ದರು. ಪ್ರತಿಭಟನಾಕಾರರು ಪ್ರಧಾನಿಯವರ ರಾಜೀನಾಮೆಗೂ ಒತ್ತಾಯಿಸುತ್ತಿದ್ದರು.
ಪ್ರಧಾನಿ ಕೆ.ಪಿ. ಶರ್ಮಾ ಓಲಿ ದೇಶ ಬಿಟ್ಟು ಪಲಾಯನ ಮಾಡಲು ಪ್ರಯತ್ನಿಸುತ್ತಿದ್ದಾರೆ ಮತ್ತು ವಿಮಾನ ನಿಲ್ದಾಣವನ್ನು ಮುಚ್ಚಲಾಗಿದೆ ಎಂಬ ಸುದ್ದಿ ಈ ಹಿಂದೆ ಬಂದಿತ್ತು. ಅವರು ಹಲವಾರು ಸಚಿವರೊಂದಿಗೆ ದೇಶ ಬಿಟ್ಟು ಪಲಾಯನ ಮಾಡಲಿದ್ದಾರೆ ಎಂದು ಹೇಳಲಾಗಿತ್ತು. ವಿಮಾನ ನಿಲ್ದಾಣದಲ್ಲಿ ಹಲವಾರು ಹೆಲಿಕಾಪ್ಟರ್ಗಳು ಮತ್ತು ವಿಮಾನಗಳನ್ನು ನಿಯೋಜಿಸಲಾಗಿತ್ತು ಎಂದು ಹೇಳಲಾಗಿತ್ತು.


