Thursday, December 25, 2025
Google search engine
Homeರಾಜ್ಯಬೆಂಗಳೂರು- ಮುಂಬೈ ಸೂಪರ್ ಫಾಸ್ಟ್ ರೈಲು ಘೋಷಣೆ: ಈಡೇರಿದ 30 ವರ್ಷಗಳ ಬೇಡಿಕೆ!

ಬೆಂಗಳೂರು- ಮುಂಬೈ ಸೂಪರ್ ಫಾಸ್ಟ್ ರೈಲು ಘೋಷಣೆ: ಈಡೇರಿದ 30 ವರ್ಷಗಳ ಬೇಡಿಕೆ!

ಬೆಂಗಳೂರು ಮತ್ತು ಮುಂಬೈ ನಡುವೆ ಸೂಪರ್ ಫಾಸ್ಟ್ ರೈಲು ಆರಂಭಿಸುವುದಾಗಿ ಕೇಂದ್ರ ರೈಲ್ವೆ ಸಚಿವ ಅಶ್ವಿನ್ ವೈಷ್ಣವ್ ಘೋಷಿಸಿದ್ದಾರೆ. ಈ ಮೂಲಕ ಕನ್ನಡಿಗರಿಗೆ ದಸರಾ ವೇಳೆ ಸಿಹಿಸುದ್ದಿ ನೀಡಿದ್ದಾರೆ.

ಬೆಂಗಳೂರು ಮತ್ತು ಮುಂಬೈ ನಡುವೆ ಸೂಪರ್‌ ಫಾಸ್ಟ್ ರೈಲು ಸಂಚಾರವನ್ನು ಶೀಘ್ರದಲ್ಲೇ ಆರಂಭಿಸುವುದಾಗಿ ಕೇಂದ್ರ ಸರ್ಕಾರ ಘೋಷಣೆ ಮಾಡಿದ್ದಾರೆ. ಆ ಮೂಲಕ 30 ವರ್ಷಗಳ ಬೇಡಿಕೆ ಈಡೇರಿದೆ.

ಶೀಘ್ರದಲ್ಲೇ ನಾವು ಬೆಂಗಳೂರು ಟು ಮುಂಬೈ ನಡುವೆ ಸೂಪರ್‌ಫಾಸ್ಟ್ ರೈಲು ಪ್ರಾರಂಭಿಸುತ್ತೇವೆ. ಎರಡೂ ನಗರಗಳು ಪ್ರಮುಖ ಆರ್ಥಿಕ ಕೇಂದ್ರಗಳಾಗಿವೆ. ಹಾಗಾಗಿ ಇದು ಪ್ರಮುಖ ಯೋಜನೆ ಆಗಿದೆ ಎಂದು ಸಚಿವ ಅಶ್ವಿನಿ ವೈಷ್ಣವ್​ ಹೇಳಿದ್ದಾರೆ.

ಬೆಂಗಳೂರು ಮತ್ತು ಮುಂಬೈ ನಡುವಿನ ಸೂಪರ್‌ಫಾಸ್ಟ್ ರೈಲಿಗಾಗಿ ತೇಜಸ್ವಿ ಅವರು ನಿರಂತರ ಪ್ರಯತ್ನಿಸಿದ್ದು ನನಗೆ ತುಂಬಾ ಸಂತೋಷವಾಗಿದೆ. ನೀವು ಯಾವಾಗಲೂ ಬೆಂಗಳೂರಿನ ಜನರಿಗಾಗಿ ಕೆಲಸ ಮಾಡುತ್ತಿದ್ದೀರಿ ಎಂದು ಸಂಸದ ತೇಜಸ್ವಿ ಸೂರ್ಯ ಅವರನ್ನು ಸಚಿವರು ಪ್ರಶಂಸಿಸಿದ್ದಾರೆ.

30 ವರ್ಷಗಳ ಬೇಡಿಕೆ ಈಡೇರಿದೆ ಎಂದ ತೇಜಸ್ವಿ ಸೂರ್ಯ

ಸಂಸದ ತೇಜಸ್ವಿ ಸೂರ್ಯ ಮಾತನಾಡಿ  ಬೆಂಗಳೂರು ಮತ್ತು ಮುಂಬೈ ನಡುವೆ ಹೊಸ ಸೂಪರ್‌ಫಾಸ್ಟ್ ರೈಲಿಗೆ ಕೇಂದ್ರ ರೈಲ್ವೆ ಸಚಿವಾಲಯ ಅನುಮೋದನೆ ನೀಡಿದೆ. ಆ ಮೂಲಕ ಎರಡೂ ನಗರಗಳ ಜನರ 30 ವರ್ಷಗಳ ಬೇಡಿಕೆ ಈಡೇರಿದೆ ಎಂದಿದ್ದಾರೆ.

ಬೆಂಗಳೂರು ಮತ್ತು ಮುಂಬೈ ಮಧ್ಯೆ ಉದ್ಯಾನ್ ಎಕ್ಸ್‌ಪ್ರೆಸ್ ಒಂದೇ ಸಂಚಾರ ನಡೆಸಿದ್ದು, ಇದು 24 ಗಂಟೆಗಳಿಗಿಂತ ಹೆಚ್ಚು ಸಮಯವನ್ನು ತೆಗೆದುಕೊಳ್ಳುತ್ತದೆ. ಕಳೆದ ವರ್ಷ 26 ಲಕ್ಷಕ್ಕೂ ಹೆಚ್ಚು ಜನರು ಈ ಎರಡೂ ನಗರಗಳಿಗೆ ವಿಮಾನದಲ್ಲಿ ಪ್ರಯಾಣಿಸಿದ್ದಾರೆ. ಹೀಗಾಗಿ 30 ವರ್ಷಗಳಿಂದ ಬೇಡಿಕೆ ಇಡಲಾಗಿತ್ತು. ಸದ್ಯ ಈ  ಹೊಸ ಸೂಪರ್‌ಫಾಸ್ಟ್ ರೈಲಿ ಸೇವೆಯು ಲಕ್ಷಾಂತರ ಪ್ರಯಾಣಿಕರಿಗೆ ಕೈಗೆಟುಕವ ದರದೊಂದಿಗೆ ಅನುಕೂಲಕರವಾಗಲಿದೆ ಎಂದು ಅವರು ಹೇಳಿದ್ದಾರೆ.

ಬಹುದಿನದ ಕನಸನ್ನು ನನಸಾಗಿಸಿದ ಪ್ರಧಾನಿ ನರೇಂದ್ರ ಮೋದಿ ಮತ್ತು ರೈಲ್ವೆ ಸಚಿವೆ ಅಶ್ವಿನಿ ವೈಷ್ಣವ್ ಅವರಿಗೆ ಕರ್ನಾಟಕ ಮತ್ತು ಕನ್ನಡಿಗರ ಪರವಾಗಿ ಸಂಸದ ತೇಜಸ್ವಿ ಸೂರ್ಯ ಕೃತಜ್ಞತೆ ಸಲ್ಲಿಸಿದರು. ಜೊತೆಗೆ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣಗೆ ಧನ್ಯವಾದ ತಿಳಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments