Sunday, December 7, 2025
Google search engine
Homeರಾಜ್ಯಸಿಎಂ ಕಾರ್ಯದರ್ಶಿ ಹುದ್ದೆಯಿಂದ ಗೋವಿಂದರಾಜು ವಜಾ, ಹೇಮಂತ್ ನಿಂಬಾಳ್ಕರ್ ವರ್ಗ

ಸಿಎಂ ಕಾರ್ಯದರ್ಶಿ ಹುದ್ದೆಯಿಂದ ಗೋವಿಂದರಾಜು ವಜಾ, ಹೇಮಂತ್ ನಿಂಬಾಳ್ಕರ್ ವರ್ಗ

ಆರ್ ಸಿಬಿ ಸಂಭ್ರಮಾಚರಣೆಯಲ್ಲಿ 11 ಮಂದಿ ಕಾಲ್ತುಳಿತ ಪ್ರಕರಣದ ಬೆನ್ನಲ್ಲೇ ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ಗೋವಿಂದರಾಜು ಅವರನ್ನು ಬಿಡುಗಡೆ ಮಾಡಲಾಗಿದ್ದು, ಗುಪ್ತಚರ ಇಲಾಖೆ ಮುಖ್ಯಸ್ಥ ಸ್ಥಾನದಿಂದ ಹೇಮಂತ್ ನಿಂಬಾಳ್ಕರ್ ಅವರನ್ನು ವರ್ಗಾವಣೆ ಮಾಡಲಾಗಿದೆ.

ತರಾತುರಿಯಲ್ಲಿ ಆರ್ ಸಿಬಿ ಸಂಭ್ರಮಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳುವ ಮೂಲಕ ಸಿಎಂ ಅವರನ್ನು ದಿಕ್ಕು ತಪ್ಪಿಸಲಾಗಿದೆ ಎಂದು ನಿನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಸಚಿವರು ಅಸಮಾಧಾನ ವ್ಯಕ್ತಪಡಿಸಿದ್ದರು.

ರಾಜ್ಯ ಒಲಿಂಪಿಕ್ಸ್ ಸಂಸ್ಥೆ ಅಧ್ಯಕ್ಷರಾಗಿರುವ ಗೋವಿಂದರಾಜು ತರಾತುರಿಯಲ್ಲಿ ಆರ್ ಸಿಬಿ ಸಮಾರಂಭಕ್ಕೆ ಅನುಮತಿ ಪಡೆದು ಆರ್ ಸಿಬಿ ಪರ ಬ್ಯಾಟ್ ಬೀಸಿದ್ದರು. ಅಲ್ಲದೇ ಸಿಎಂಗೆ ಮಾಹಿತಿ ನೀಡದೇ ಏಕಾಏಕಿ ಅವರನ್ನು ಕಾರ್ಯಕ್ರಮಕ್ಕೆ ಕರೆಯಲಾಗಿತ್ತು.

ಈ ಹಿನ್ನೆಲೆಯಲ್ಲಿ ಸಚಿವರ ಅಸಮಾಧಾನದ ಬೆನ್ನಲ್ಲೆ ಸಿಎಂ ಸಿದ್ದರಾಮಯ್ಯ ಗೋವಿದಂರಾಜು ಅವರನ್ನು ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ಅಮಾನತು ಮಾಡಲಾಗಿದೆ.

ಇದೇ ವೇಳೆ ಅಭಿಮಾನಿಗಳು ಏಕಾಏಕಿ ಆಗಮಿಸಿದ್ದ ಕಾಲ್ತುಳಿತ ಘಟನೆಗೆ ಗುಪ್ತಚರ ಇಲಾಖೆ ಮುಖ್ಯಸ್ಥರಾಗಿದ್ದ ಹೇಮಂತ್ ನಿಂಬಾಳ್ಕರ್ ಅವರನ್ನು ಕೂಡ ವರ್ಗಾವಣೆ ಮಾಡಲಾಗಿದ್ದು, ಅವರ ಸ್ಥಾನಕ್ಕೆ ರವಿಕುಮಾರ್ ಅವರನ್ನು ನಿಯೋಜಿಸಲಾಗಿದೆ.

ಗುಪ್ತಚರ ಇಲಾಖೆಯ ಎಡಿಜಿಪಿ ಆಗಿದ್ದ ರವಿಕುಮಾರ್ ಅವರನ್ನು ತತ್ ಕ್ಷಣದಿಂದ ಜಾರಿಗೆ ಬರುವಂತೆ ನೇಮಿಸಲಾಗಿದೆ.

ಇದೇ ವೇಳೆ ನೂತನ ಪೊಲೀಸ್ ಆಯುಕ್ತ ಸೀಮಂತ್ ನಿಂಬಾಳ್ಕರ್ ಕಬ್ಬನ್ ಪಾರ್ಕ್ ಪೊಲೀಸ್ ಇನ್ ಸ್ಪೆಕ್ಟರ್ ಆಗಿ ಓಓಡಿ ಮೂಲಕ ದೇವೇಂದ್ರಪ್ಪ ಅವರನ್ನು ನೇಮಕ ಮಾಡಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments