Home ರಾಜ್ಯ ಎಸ್‌ಸಿಎಸ್‌ಪಿ ಮತ್ತು ಟಿಎಸ್ಪಿ ಅನುದಾನ ಕಡ್ಡಾಯ ಬಳಕೆಗೆ SC/ST ಕಲ್ಯಾಣ ಸಮಿತಿಯ ಮೊದಲ ವರದಿ ಶಿಫಾರಸು

ಎಸ್‌ಸಿಎಸ್‌ಪಿ ಮತ್ತು ಟಿಎಸ್ಪಿ ಅನುದಾನ ಕಡ್ಡಾಯ ಬಳಕೆಗೆ SC/ST ಕಲ್ಯಾಣ ಸಮಿತಿಯ ಮೊದಲ ವರದಿ ಶಿಫಾರಸು

ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಕಲ್ಯಾಣ ಸಮಿತಿಯ 2024-25ನೇ ಸಾಲಿನ ಮೊದಲನೇ ವರದಿಯನ್ನು ಡಿ. 12ರಂದು ವಿಧಾನಸಭೆ ಮತ್ತು ವಿಧಾನ ಪರಿಷತ್ ಎರಡೂ ಸದನಗಳಲ್ಲಿ ಮಂಡಿಸಿ ಸರ್ಕಾರಕ್ಕೆ ಸಲ್ಲಿಸಲಾಗಿದೆ.

by Editor
0 comments
pm narendraswamy

ಕರ್ನಾಟಕ ವಿಧಾನಮಂಡಲದ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಕಲ್ಯಾಣ ಸಮಿತಿಯ 2024-25ನೇ ಸಾಲಿನ ಮೊದಲನೇ ವರದಿಯನ್ನು ಡಿ. 12ರಂದು ವಿಧಾನಸಭೆ ಮತ್ತು ವಿಧಾನ ಪರಿಷತ್ ಎರಡೂ ಸದನಗಳಲ್ಲಿ ಮಂಡಿಸಿ ಸರ್ಕಾರಕ್ಕೆ ಸಲ್ಲಿಸಲಾಗಿದೆ ಎಂದು ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಕಲ್ಯಾಣ ಸಮಿತಿಯ ಅಧ್ಯಕ್ಷ ಹಾಗೂ ಶಾಸಕ ಪಿಎಂ. ನರೇಂದ್ರಸ್ವಾಮಿ ಹೇಳಿದ್ದಾರೆ.

ಬೆಳಗಾವಿಯ ಸುವರ್ಣಸೌಧದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಮಿತಿಯು ಕಲಬುರಗಿ, ಯಾದಗಿರಿ, ಬೀದರ್, ಕೊಪ್ಪಳ, ರಾಯಚೂರು, ಬಳ್ಳಾರಿ, ವಿಜಯನಗರ, ದಾವಣಗೆರೆ, ಚಿತ್ರದುರ್ಗ, ಗದಗ, ಧಾರವಾಡ, ವಿಜಯಪುರ, ಬಾಗಲಕೋಟೆ ಹಾಗೂ ಬೆಳಗಾವಿ ಸೇರಿ ಒಟ್ಟು 14 ಜಿಲ್ಲೆಗಳಲ್ಲಿ ಅಧ್ಯಯನ ಪ್ರವಾಸ ಮಾಡಿ ಅನೇಕ ಲೋಪದೋಷಗಳನ್ನು ಪರಿಶೀಲಿಸಿದೆ ಎಂದರು.

ಎಸ್‌ಸಿಎಸ್‌ಪಿ ಮತ್ತು ಟಿಎಸ್ಪಿ ಅನುದಾನವನ್ನು ಕಡ್ಡಾಯವಾಗಿ ಈ ಸಮುದಾಯವರಿಗೆ ಬಳಸಬೇಕು. ಹೊರಗುತ್ತಿಗೆಯಲ್ಲಿ ಮೀಸಲಾತಿಯನ್ನು ಕಡ್ಡಾಯ ಪಾಲಿಸಬೇಕು., ಎಲ್ಲಾ ಜಿಲ್ಲೆಗಳಲ್ಲಿ ಕಡ್ಡಾಯವಾಗಿ ಎಸ್ಸಿ ಮತ್ತು ಎಸ್ಟಿ ಸಮುದಾಯವರಿಗೆ 100 ದಿನಗಳ ಉದ್ಯೋಗ ಖಾತ್ರಿ ನೀಡಬೇಕು. ಸ್ಮಶಾನಭೂಮಿ ಇಲ್ಲದಿರುವ ಕಡೆಗಳಲ್ಲಿ ಕೂಡಲೇ ಒದಗಿಸಬೇಕು. ಭೂ ಒಡೆತನ ಯೋಜನೆಯಡಿ ಜಮೀನು ನೀಡಬೇಕು. ನಿವೇಶನ ವಸತಿ ರಹಿತರಿಗೆ ಕೂಡಲೇ ಸೌಕರ್ಯ ಒದಗಿಸಬೇಕು. ಪ್ರಾಧಿಕಾರಗಳಿಂದ ಬರುವ ಆದಾಯದಲ್ಲಿ ಎಸ್ಸಿ ಎಸ್ಟಿ ಹಾಸ್ಟೇಲಗಳಿಗೆ ಬೆಡ್, ಕಾಟ, ದಿಂಬು ಒದಗಿಸಬೇಕು., ಹೌಸಿಂಗ್ ಸೊಸೈಟಿಗಳ ಬಡಾವಣೆಗಳಲ್ಲಿ ಸೈಟಗಳ ಮೀಸಲಾತಿ ನೀಡಬೇಕು ಎಂಬುದು ಸೇರಿದಂತೆ ನಾನಾ ವಿಷಯಗಳ ಬಗ್ಗೆ ಸಮಿತಿಯು ಪರಿಶೀಲಿಸಿ ವರದಿ ನೀಡಿದೆ ಎಂದು ಅವರು ತಿಳಿಸಿದರು.

ಸಮಿತಿ ಅಧ್ಯಕ್ಷರಾದ ತಾವು ಮತ್ತು ಸಮಿತಿಯ ಎಲ್ಲ ಸದಸ್ಯರು ಸೇರಿ ಹಲವಾರು ತನಿಖೆಗಳನ್ನು ನಡೆಸಿ, ಹಲವಾರು ಜಿಲ್ಲೆಗಳ ಪ್ರವಾಸ ನಡೆಸಿ ಹಲವಾರು ಇಲಾಖೆಗಳನ್ನು ವಿಮರ್ಶೆ ಮಾಡಿ ಅಲ್ಲಿರುವ ಕಾರ್ಯಕ್ರಮಗಳ ಅನುಷ್ಠಾನದಲ್ಲಿ ಆಗಿರುವ ಲೋಪ ಮತ್ತು ಎಸ್ಸಿ ಎಸ್ಟಿ ಕಾಯ್ದೆಯನ್ನು ಸದ್ಬಳಕೆ ಮಾಡುವ ಜವಾಬ್ದಾರಿಯನ್ನು ನಿರ್ವಹಿಸುವಲ್ಲಿ ಆಗಿರುವ ಲೋಪಗಳನ್ನು ಹಾಗೂ ವಿಶೇಷವಾಗಿ ಹಾಸ್ಟೇಲ್ ಮತ್ತು ವಸತಿ ಶಿಕ್ಷಣ ಸಂಸ್ಥೆಗಳಲ್ಲಿ ವಿದ್ಯಾರ್ಥಿಗಳಿಗೆ ದೊರಕಬೇಕಾದ ಸೌಲಭ್ಯಗಳಲ್ಲಿ ಆಗಿರುವಂತಹ ಕೊರತೆ ಬಗ್ಗೆ ಸಮಿತಿಯು ವಿಶೇಷವಾಗಿ ಈ ವರದಿಯನ್ನು ತಯಾರಿ ಮಾಡಿ ಹಲವಾರು ಮಾರ್ಪಾಟುಗಳನ್ನು ಸೂಚಿಸಿದೆ.

banner

ಎಸ್ಸಿಪಿ ಟಿಎಸ್ಪಿ ಕಾಯ್ದೆಯಡಿ ಬರುವ ರೀತಿಯಲ್ಲಿ ಹೊರಗುತ್ತಿಗೆ ಮೀಸಲಾತಿ ಇರಬೇಕು, ಹೊರಗುತ್ತಿಗೆ ಸಿಬ್ಬಂದಿಗೆ ನೀಡುವ ವೇತನದ ಬಗ್ಗೆ ಜೊತೆಗೆ ಹಾಸ್ಟೇಲ್ ಮತ್ತು ವಸತಿ ಶಿಕ್ಷಣ ಸಂಸ್ಥೆಗಳಲ್ಲಿ ಮೂಲಭೂತ ಸೌಕರ್ಯಗಳ ಕೊರತೆ ಇರುವುದನ್ನು ಸಮಿತಿಯು ತೀಕ್ಷ್ಣವಾಗಿ ಪರಿಶೀಲನೆ ನಡೆಸಿ ಮಾರ್ಗೋಪಾಯ ಕಂಡು ಹಿಡಿದು ವರದಿಯಲ್ಲಿ ನೀಡಿದೆ ಎಂದು ಅವರು ತಿಳಿಸಿದರು.

ವಿಶೇಷವಾಗಿ ಉತ್ತರ ಕರ್ನಾಟಕ ಏಳೆಂಟು ಜಿಲ್ಲೆಗಳಲ್ಲಿ ಪ್ರವಾಸ ಮಾಡಿದಾಗ ಶೋಚನೀಯ ಅಂಶವೊAದು ಸಮಿತಿಯ ಗಮನಕ್ಕೆ ಬಂದಿತು. ಮಾಜಿ ದೇವದಾಸಿಯರಿಗೆ ಪೂರ್ಣ ಪ್ರಮಾಣದಲ್ಲಿ ಪುನರ್ವಸತಿಯನ್ನು ಕಲ್ಪಿಸದೇ ಇರುವುದನ್ನು ಗಮನಿಸಿ ಈ ಬಗ್ಗೆ ತೀಕ್ಷ್ಣವಾಗಿ ಪ್ರತಿಕ್ರಿಯೆ ನೀಡಿ ಜಿಲ್ಲಾಡಳಿತ ಮತ್ತು ಸರ್ಕಾರಕ್ಕೆ ಸೂಕ್ತವಾದ ಮಾರ್ಗದರ್ಶನವನ್ನು ಮಾಡಿದ್ದೇವೆ. ಸಾವಿರಾರು ಜನ ಮಾಜಿ ದೇವದಾಸಿಯರು ವಸತಿ ಇಲ್ಲದೇ ನಿವೇಶನ ಇಲ್ಲದೇ ಹಳೆಯ ಪದ್ಧತಿಯಂತೆಯೇ ಬದುಕುತ್ತಿರುವುದರ ಬಗ್ಗೆ ನಾವು ವರದಿಯಲ್ಲಿ ಬೆಳಕು ಚೆಲ್ಲಿದ್ದೇವೆ. ಈ ಬಗ್ಗೆ ಸ್ಪಷ್ಟವಾದ ವಿಚಾರಗಳನ್ನು ಮತ್ತು ದತ್ತಾಂಶಗಳನ್ನು ಕ್ರೋಢೀಕರಿಸಿ ವರದಿಯಲ್ಲಿ ನೀಡಿದ್ದೇವೆ ಎಂದರು.

ವಸತಿ ಶಿಕ್ಷಣ ಸಂಸ್ಥೆಗಳಲ್ಲಿ ಉತ್ತಮ ಗುಣಮಟ್ಟವನ್ನು ಇನ್ನಷ್ಟು ಉನ್ನತೀಕರಿಸುವುದಕ್ಕೆ ಸಮಿತಿಯು ಸಲಹೆ ಮಾಡಿದೆ. ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿನ ವ್ಯವಸ್ಥೆಗೂ ಮತ್ತು ಸರ್ಕಾರಿ ಶಿಕ್ಷಣ ಸಂಸ್ಥೆಗಳಲ್ಲಿನ ವ್ಯವಸ್ಥೆಗೂ ಅಂತರ ಇರಬಾರದು. ಈ ನಿಟ್ಟಿನಲ್ಲಿ ಇನ್ಮುಂದೆ ಕಂಪ್ಯೂಟರ್ ಶಿಕ್ಷಣ ಮತ್ತು ಪ್ರಾಥಮಿಕ ಶಿಕ್ಷಣದಲ್ಲಿ ಎಸ್‌ಡಿಎಂಸಿಗಳ ಭಾಗವಹಿಸುವಿಕೆಯ ಜೊತೆಗೆ ಸ್ಥಳೀಯ ಅನುದಾನವನ್ನು ಕ್ರೋಢೀಕರಿಸಿ ಟ್ಯಾಬ್ ಗಳನ್ನು ನೀಡುವುದು ಮತ್ತು ಸಿಎಸ್‌ಆರ್ ಅನುದಾನ ಲಭ್ಯತೆವಿರುವ ಕಡೆಗಳಲ್ಲಿ ಅದನ್ನು ಬಳಸಿಕೊಂಡು ಗ್ರಾಮೀಣ ಶಿಕ್ಷಣವನ್ನು ಮೇಲೆತ್ತಬೇಕು ಎಂದು ಸಮಿತಿಯು ಸಲಹೆ ಮಾಡಿದೆ ಎಂದರು.

ಸಮಿತಿಯ ಸದಸ್ಯರು ಜಿಲ್ಲೆಗಳಿಗೆ ಭೇಟಿ ನೀಡಿದಂತಹ ಸಂದರ್ಭದಲ್ಲಿ ಪ್ರಾಥಮಿಕ ಶಿಕ್ಷಣದ ಬಗ್ಗೆ ಮಾಹಿತಿ ಪಡೆದಾಗ ಅಲ್ಲಿ ವಿದ್ಯಾಭ್ಯಾಸ ಮಾಡುವ ಒಟ್ಟು ಮಕ್ಕಳ ಪೈಕಿ ಶೇ.50ಕ್ಕಿಂತ ಹೆಚ್ಚು ಮಕ್ಕಳು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದವರಿದ್ದಾರೆಂಬ ಅಂಶ ತಿಳಿದು ಬಂದಿರುವುದರಿAದ ಸೌಲಭ್ಯ ಕಲ್ಪಿಸುವುದರ ಬಗ್ಗೆ ಸಮಿತಿಯು ಕೆಲವು ಮಾರ್ಪಾಟುಗಳಿಗೆ ವರದಿಯಲ್ಲಿ ಅವಕಾಶ ಮಾಡಿದೆ ಎಂದು ತಿಳಿಸಿದರು.

ಹೊರಗುತ್ತಿಗೆ ಆಧಾರದ ಮೇಲೆ ನೌಕರರನ್ನು ಪಡೆದುಕೊಳ್ಳುವ ವ್ಯವಸ್ಥೆಯ ಬಗ್ಗೆ ಸಮಿತಿಯು ಪರಿಶೀಲಿಸಿದೆ. ಸಿಬ್ಬಂದಿಗೆ ಸಿಗಬೇಕಾದ ಮೊತ್ತಕ್ಕಿಂತ ಹೆಚ್ಚಿನ ಹಣವನ್ನು ಏಜೆನ್ಸಿಯವರು ಉಳಿಸಿಕೊಳ್ಳುವುದು ತಪ್ಪಬೇಕು. ಹೊರಗುತ್ತಿಗೆ ನೌಕರರಿಗೆ ಏಜೆನ್ಸಿ ಮೂಲಕ ಹಣ ನೀಡುವ ಬದಲು ನೇರವಾಗಿ ಇಲಾಖೆಗಳೇ ಸಿಬ್ಬಂದಿಯನ್ನು ನೇಮಿಸಿಕೊಂಡು ವೇತನ ಪಾವತಿಸುವುದರಿಂದ ನೌಕರರಿಗೆ ಹೆಚ್ಚುವರಿ ಹಣ ಸಿಗುತ್ತದೆ ಎಂಬುದಾಗಿ ಸಮಿತಿಯು ವರದಿಯಲ್ಲಿ ತಿಳಿಸಿದೆ ಎಂದರು.

ನಾನು ಅಧ್ಯಕ್ಷರಾದಂತಹ ಪ್ರತಿಯೊಂದು ಸಂದರ್ಭದಲ್ಲಿ ನೀಡಿದ ವರದಿಗಳು ಪರಿಣಾಮಕಾರಿಯಾಗಿ ಜಾರಿಯಾಗಿವೆ. ಬಜೆಟ್‌ನಲ್ಲಿ ಮತ್ತು ಕಾರ್ಯಕ್ರಮ ಅನುಷ್ಠಾನದಲ್ಲಿ ಸರ್ಕಾರವು ಜವಾಬ್ದಾರಿಯುತವಾಗಿ ನಡೆದುಕೊಂಡಿದೆ. 2013ರ ಎಸ್ಸಿಪಿ ಟಿಎಸ್ಪಿ ಕಾಯ್ದೆಯಡಿ ಅನುದಾನವನ್ನು ಬಜೆಟ್‌ನಲ್ಲಿ ಮೀಸಲಿಡುವಂತಹ ಶಿಫಾರಸ್ಸನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಯಥಾವತ್ತಾಗಿ ಜಾರಿಗೊಳಿಸಿದ್ದೇ ಇದಕ್ಕೆ ಸಾಕ್ಷಿಯಾಗಿದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಸಮಿತಿಯ ಸದಸ್ಯರು ಮತ್ತು ಶಾಸಕರಾದ ದುರ್ಯೋದನ ಎಂ ಐಹೊಳೆ, ಕೃಷ್ಣ ನಾಯ್ಕ ಸೇರಿದಂತೆ ಇನ್ನೀತರ ಸದಸ್ಯರು ಇದ್ದರು.

You may also like

Leave a Comment

Soledad is the Best Newspaper and Magazine WordPress Theme with tons of options and demos ready to import. This theme is perfect for blogs and excellent for online stores, news, magazine or review sites.

Buy Soledad now!

Edtior's Picks

Latest Articles

Latest news
ರಷ್ಯಾ ಸೇನೆಯಲ್ಲಿದ್ದ 12 ಭಾರತೀಯರು ಸಾವು, 16 ಮಂದಿ ಕಣ್ಮರೆ: ಕೇಂದ್ರ ಕೊಟ್ಟ ಕೆಲಸ ಬಾಯಿ ಮುಚ್ಚಿಕೊಂಡು ಮಾಡಿ: ಕೈ ನಾಯಕರಿಗೆ ಮಲ್ಲಿಕಾರ್ಜುನ ಖರ್ಗೆ ಖಡಕ್ ಎಚ್ಚರಿಕೆ 5 ನಿಮಿಷದಲ್ಲಿ 12 ಕೋಟಿ ಚಿನ್ನಾಭರಣ ಲೂಟಿ: ದರೋಡೆಕೋರರ ಮಾಸ್ಟರ್ ಪ್ಲಾನ್! ಗರ್ಭಿಣಿಯರಿಗೆ 21,000, ಬಡ ಮಹಿಳೆಯರಿಗೆ 2500 ರೂ.: ಬಿಜೆಪಿ ಚುನಾವಣಾ ಪ್ರಣಾಳಿಕೆ ಘೋಷಣೆ ಬೀದರ್ ನಂತರ ಮಂಗಳೂರಿನಲ್ಲಿ ಹಾಡುಹಗಲೇ ಮುಸುಕುಧಾರಿಗಳಿಂದ ಬ್ಯಾಂಕ್ ದರೋಡೆ! ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿವಿಯ ಪ್ರಾದೇಶಿಕ ಕಚೇರಿಗೆ ಶಂಕುಸ್ಥಾಪನೆ ನೆರವೇರಿಸಿ ನುಡಿದಂತೆ ನಡೆದ ಸಿಎಂ 5 ಗಂಟೆ ಶಸ್ತ್ರಚಿಕಿತ್ಸೆ ನಂತರ ಸೈಫ್ ದೇಹದಿಂದ 2.5 ಇಂಚು ಉದ್ದದ ಚಾಕು ಹೊರತೆಗೆದ ವೈದ್ಯರು! ಫೆ.1ರಿಂದ ಏರ್ ಶೋ: ಯಲಹಂಕದ ನಿರ್ಮಾಣ ಹಂತದ ಕಟ್ಟಡಗಳ ಕ್ರೇನ್ ಚಟುವಟಿಕೆ ಸ್ಥಗಿತಕ್ಕೆ ಸೂಚನೆ ಅಬಕಾರಿ ಇಲಾಖೆಯಲ್ಲಿ ವರ್ಗಾವಣೆಗೆ ಹೊಸ ನಿಯಮ: ಸಚಿವ ಆರ್ ಬಿ ತಿಮ್ಮಾಪೂರ ನನ್ನ ಖಾಸಗಿ ವೀಡಿಯೊಗಳನ್ನು ಮರಳಿಸಿ: ಪ್ರಜ್ವಲ್ ರೇವಣ್ಣ ಮನವಿಗೆ ಹೈಕೋರ್ಟ್ ಚಾಟಿ!