ನವದೆಹಲಿ/ತಿರುವನಂತಪುರಂ: ಕೇರಳದ ಮುಂದಿನ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಗುರುವಾರ ಅಧಿಕೃತವಾಗಿ ಘೋಷಣೆ ಆಗಲಿದೆ.
ಸಿಎಂ ಆಯ್ಕೆ ಕುರಿತಾಗಿ ಪೈಪೋಟಿ ತೀವ್ರಗೊಂಡಿದ್ದು, ಕಾಂಗ್ರೆಸ್ ಪಕ್ಷದಲ್ಲಿ ತಡವಾಗಿದೆ ಎಂಬ ಕೂಗು ಕೇಳಿ ಬಂದ ಹಿನ್ನೆಲೆಯಲ್ಲಿ ಕೇರಳಂನಲ್ಲಿ ಸಿಎಂ ಅಭ್ಯರ್ಥಿಯನ್ನು ಘೋಷಿಸಲಾಗುವುದು ಎಂದು ಕಾಂಗ್ರೆಸ್ ಪ್ರಕಟಣೆಯಲ್ಲಿ ತಿಳಿಸಿದೆ.
ಎಐಸಿಸಿ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಕೆ ಸಿ ವೇಣುಗೋಪಾಲ್ ಹೊಸದಾಗಿ ಆಯ್ಕೆಯಾದ ಬಹುಪಾಲು ಶಾಸಕರ ಬೆಂಬಲದೊಂದಿಗೆ ಮುಖ್ಯಮಂತ್ರಿ ಹುದ್ದೆಯ ಸ್ಪರ್ಧೆಯಲ್ಲಿ ಮುನ್ನಡೆ ಸಾಧಿಸಿರುವಂತೆ ಕಾಣುತ್ತಿದ್ದು, ಪಕ್ಷ ಇಂದು ತನ್ನ ಅಂತಿಮ ಆಯ್ಕೆಯನ್ನು ಘೋಷಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.
ಕೆಲ ನಾಯಕರ ಒತ್ತಡ ತಂತ್ರವಾಗಿ ರೂಪಿಸಿದ್ದವು. ಈ ಬೆಳವಣಿಗೆಗಳು ಪಕ್ಷದ ನಾಯಕತ್ವವನ್ನು ಅಸಮಾಧಾನಗೊಳಿಸಿದ್ದು, ಇದರಿಂದ ವೇಣುಗೋಪಾಲ್ ಅವರಿಗೆ ಅವಕಾಶಗಳು ಇನ್ನಷ್ಟು ಹೆಚ್ಚಾಗಬಹುದು ಎಂದು ಹೇಳಲಾಗಿದೆ.
ರಾಹುಲ್ ಗಾಂಧಿ ಮುಂದಿನ ಮುಖ್ಯಮಂತ್ರಿ ಕುರಿತು ನಾಯಕರ ಅಭಿಪ್ರಾಯ ಕೇಳುತ್ತಾರೆ ಎಂಬ ನಿರೀಕ್ಷೆ ಇದ್ದರೂ, “ಆ ವಿಷಯವೇ ಚರ್ಚೆಗೆ ಬಂದಿಲ್ಲ ಎಂದು ಹಿರಿಯ ನಾಯಕರೊಬ್ಬರು ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಪತ್ರಿಕೆಗೆ ತಿಳಿಸಿದ್ದಾರೆ. ಬಹುತೇಕ ನಾಯಕರು ಈಗಾಗಲೇ ತಮ್ಮ ಅಭಿಪ್ರಾಯಗಳನ್ನು ಪಕ್ಷದ ವೀಕ್ಷಕರಿಗೆ ತಿಳಿಸಿದ್ದರು ಎಂದು ಅವರು ಹೇಳಿದರು.
ಒಂದು ಹಂತದಲ್ಲಿ, ಪಕ್ಷದ ಅಧಿಕೃತ ಪ್ರಚಾರಕ್ಕಾಗಿ ರಚಿಸಲಾದ ಸಾಮಾಜಿಕ ಜಾಲತಾಣ ವೇದಿಕೆಗಳನ್ನು ಹೇಗೆ ದುರುಪಯೋಗ ಮಾಡಲಾಗುತ್ತಿದೆ ಎಂಬುದರ ಬಗ್ಗೆ ರಾಹುಲ್ ಗಾಂಧಿ ಅಸಮಾಧಾನ ವ್ಯಕ್ತಪಡಿಸಿದರು ಎಂದು ತಿಳಿದುಬಂದಿದೆ.



