Wednesday, June 10, 2026
Google search engine
Homeಬೆಂಗಳೂರುಬೆಂಗಳೂರು ದಕ್ಷಿಣ ಜಿಲ್ಲೆ ಮರುನಾಮಕರಣಕ್ಕೆ ಕುಮಾರಸ್ವಾಮಿ ಅಡ್ಡಗಾಲು: ಡಿಕೆ ಶಿವಕುಮಾರ್

ಬೆಂಗಳೂರು ದಕ್ಷಿಣ ಜಿಲ್ಲೆ ಮರುನಾಮಕರಣಕ್ಕೆ ಕುಮಾರಸ್ವಾಮಿ ಅಡ್ಡಗಾಲು: ಡಿಕೆ ಶಿವಕುಮಾರ್

ಕನಕಪುರ ಪ್ರದೇಶ ಬೆಂಗಳೂರಿನ ಭಾಗ. ಈ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಎಂದು ಮರುನಾಮಕರಣ ಮಾಡಲು ಕೇಂದ್ರ ಸರ್ಕಾರದ ಬಳಿ ಕುಮಾರಸ್ವಾಮಿ ತಕರಾರು ಸಲ್ಲಿಸಿದ್ದಾರೆ. ಯಾರು ಏನೇ ಮಾಡಿದರೂ ಇದನ್ನು ಬೆಂಗಳೂರು ದಕ್ಷಿಣ ಎಂದು ಮಾಡುವುದನ್ನು ತಪ್ಪಿಸಲು ಸಾಧ್ಯವಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ಕನಕಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷರುಗಳ ಪದಗ್ರಹಣ ಕಾರ್ಯಕ್ರಮ ಹಾಗೂ ಕಾರ್ಯಕರ್ತರ ಸಮಾವೇಶದಲ್ಲಿ ಶಿವಕುಮಾರ್ ಅವರು ಶನಿವಾರ ಮಾತನಾಡಿದರು.

ಪಾಪ ಕುಮಾರಸ್ವಾಮಿ ಅವರಿಗೆ ತಡೆದುಕೊಳ್ಳಲು ಆಗುತ್ತಿಲ್ಲ. ನಾನು ಹಾಗೂ ಇಲ್ಲಿರುವ ಕೆಲವರು, ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯ್ತಿ ಸದಸ್ಯರಾಗಿದ್ದೆವು. ಇದು ಕನಕಪುರ ಲೋಕಸಭಾ ಕ್ಷೇತ್ರ ಇತ್ತು. ನಮ್ಮ ಅಸ್ಥಿತ್ವವನ್ನು ಉಳಿಸಿಕೊಳ್ಳಬೇಕು ಎಂಬ ಉದ್ದೇಶದಿಂದ ಇದನ್ನು ಬೆಂಗಳೂರು ಗ್ರಾಮಾಂತರ ಕ್ಷೇತ್ರ ಎಂದು ಮಾಡಿದೆವು. ಈಗ ಈ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆಯಾಗಿ ಮರುನಾಮಕರಣ ಮಾಡಲು ಮುಂದಾಗಿದ್ದು, ಇದನ್ನು ಮಾಡಬಾರದು ಎಂದು ಕೇಂದ್ರ ಸರ್ಕಾರದ ಬಳಿ ಕುಮಾರಸ್ವಾಮಿ ಅರ್ಜಿ ಹಾಕಿದ್ದಾರೆ. ಅವರು ಏನಾದರೂ ಮಾಡಲಿ, ಈ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡಿಯೇ ಮಾಡುತ್ತೇವೆ. ಅದಕ್ಕೆ ಏನು ಮಾಡಬೇಕೋ ಅದನ್ನು ನಾನು ಮಾಡುತ್ತೇನೆ” ಎಂದು ತಿಳಿಸಿದರು.

ಕುಮಾರಸ್ವಾಮಿ ಅಧಿಕಾರದಲ್ಲಿ ಇದ್ದಾಗ ನೀನೇನು ಮಾಡಿದ್ದೆ ಹೇಳಪ್ಪಾ:

ಕಾರ್ಯಕ್ರಮದ ನಂತರ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಅವರು, ಕುಮಾರಸ್ವಾಮಿ ನಿನಗೆ ಅಧಿಕಾರ ಇದ್ದಾಗ ನೀನು ಏನು ಮಾಡಿದೆ ಹೇಳಪ್ಪಾ? ಮಂಡ್ಯದಲ್ಲಿ ಗೆದ್ದು ಕೇಂದ್ರದಲ್ಲಿ ದೊಡ್ಡ ಮಂತ್ರಿಯಾಗಿದ್ದೀಯಲ್ಲಾ ಈಗ ನೀನು ಏನು ಮಾಡುತ್ತೀಯಾ ಎಂದು ಮೊದಲ ಹೇಳು. ನೀವು ಏನು ಮಾಡುತ್ತೀರೋ ಮಾಡಿ, ಅದಕ್ಕೆ ಅಗತ್ಯ ಸಹಕಾರ ನಾವು ನೀಡುತ್ತೇವೆ. ನೀವು ಬರೀ ದ್ವೇಷ ರಾಜಕಾರಣ ಮಾಡುತ್ತಿದ್ದೀರಿ. ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡಬಾರದು ಎಂದು ಆಕ್ಷೇಪ ಮಾಡಿದ್ದೀರಿ. ನಿಮ್ಮಂತೆ ನಾವು ದ್ವೇಷ ರಾಜಕಾರಣ ಮಾಡುವುದಿಲ್ಲ. ನಿಮಗೆ ಎಲ್ಲಾ ರೀತಿಯ ಸಹಕಾರ ನೀಡುತ್ತೇವೆ. ಕೇಂದ್ರ ಸಚಿವ ರಾಜನಾಥ್ ಸಿಂಗ್ ಅವರು ರಾಜ್ಯಕ್ಕೆ ಬಂದು ಏನು ಹೇಳಿದ್ದಾರೆ ಎಂಬುದನ್ನು ತಲೆಯಲ್ಲಿ ಇಟ್ಟುಕೊಳ್ಳಿ ಎಂದು ತಿರುಗೇಟು ನೀಡಿದರು.

ಕುಮಾರಸ್ವಾಮಿಗೆ ಅಭಿವೃದ್ಧಿಗಿಂತ ದ್ವೇಷ ರಾಜಕಾರಣವೇ ಹೆಚ್ಚು

ಅಭಿವೃದ್ಧಿ ವಿಚಾರವಾಗಿ ಯಾರೂ ನನ್ನನ್ನು ಭೇಟಿ ಮಾಡುತ್ತಿಲ್ಲ ಎಂಬ ಕುಮಾರಸ್ವಾಮಿ ಅವರ ಆರೋಪದ ಬಗ್ಗೆ ಕೇಳಿದಾಗ, “ಒಂದೇ ದಿನದಲ್ಲಿ ಮೇಕೆದಾಟು ಯೋಜನೆಗೆ ಮೋದಿ ಅವರಿಂದ ಸಹಿ ಹಾಕಿಸುವುದಾಗಿ ಹೇಳಿದ್ದೆಯಲ್ಲಾ, ಯಾಕೆ ಮಾಡಿಸಿಲ್ಲಾ? ನಮ್ಮ ಸಚಿವ ಎಂ.ಬಿ ಪಾಟೀಲ್ ಅವರ ಬಳಿ ಹೋಗಿ ಬಂಡವಾಳ ಹೂಡಿಕೆದಾರರ ಸಮಾವೇಶದ ಬಗ್ಗೆ ಚರ್ಚೆ ಮಾಡಿಲ್ಲವೇ? ಅವರಿಗೆ ದ್ವೇಷದ ರಾಜಕಾರಣವೇ ಮುಖ್ಯವೇ ಹೊರತು ರಾಜ್ಯದ ಅಭಿವೃದ್ಧಿಯಲ್ಲ. ದ್ವೇಷದಿಂದ ಯಾರೂ ಯಾವುದೇ ಸಾಧನೆ ಮಾಡಿಲ್ಲ. ದೊಡ್ಡ ದೊಡ್ಡ ಚಕ್ರವರ್ತಿಗಳೇ ಕೆಳಗೆ ಬಿದ್ದಿದ್ದಾರೆ. ರಾಜಕಾರಣದಲ್ಲಿ ಯಾರೂ ಶಾಶ್ವತವಲ್ಲ ಎಂದು ಕಿಡಿಕಾರಿದರು

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments