Sunday, September 8, 2024
Google search engine
Homeಜಿಲ್ಲಾ ಸುದ್ದಿಮಂಡ್ಯದಲ್ಲಿ ಬಿಜೆಪಿಯಿಂದ ಸ್ಪರ್ಧೆ: ಸಂಸದೆ ಸುಮಲತಾ ಘೋಷಣೆ

ಮಂಡ್ಯದಲ್ಲಿ ಬಿಜೆಪಿಯಿಂದ ಸ್ಪರ್ಧೆ: ಸಂಸದೆ ಸುಮಲತಾ ಘೋಷಣೆ

ಮಂಡ್ಯ ಲೋಕಸಭಾ ಕ್ಷೇತ್ರದಿಂದ ಈ ಬಾರಿ ಬಿಜೆಪಿಯಿಂದ ಟಿಕೆಟ್ ದೊರೆಯಲಿದ್ದು, ಬಿಜೆಪಿಯಿಂದ ಈ ಬಾರಿ ಸ್ಪರ್ಧೆ ಮಾಡುವುದು ಖಚಿತ ಎಂದು ಸಂಸದೆ ಸುಮಲತಾ ಅಂಬರೀಷ್ ಘೋಷಿಸಿದ್ದಾರೆ.

ಮಂಡ್ಯದಲ್ಲಿ ಭಾನುವಾರ ನಡೆದ ಸಮಾನ ಮನಸ್ಕರ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಬಾರಿ ನಾನು ಸ್ವತಂತ್ರ ಅಭ್ಯರ್ಥಿಯಾಗಿ ಮತ್ತೆ ಕಣಕ್ಕಿಳಿಯುವ ಬಗ್ಗೆ ಯೋಚಿಸಿಯೇ ಇಲ್ಲ. ಪ್ರಧಾನಿ ಮೋದಿ ಅವರು ನನ್ನ ಪರವಾಗಿ ಸಾಕಷ್ಟು ಕೆಲಸ ಮಾಡಿದ್ದಾರೆ. ಈ ಬಾರಿ ಬಿಜೆಪಿಯಿಂದಲೂ ಟಿಕೆಟ್ ದೊರೆಯುವ ವಿಶ್ವಾಸವಿದೆ ಎಂದರು.

ಸಮಾನ ಮನಸ್ಕರ ಸಭೆಯಲ್ಲಿ ಕೂಡ ಎಲ್ಲರೂ ಬಿಜೆಪಿಯಿಂದ ಸ್ಪರ್ಧೆಸುವಂತೆ ಅಭಿಪ್ರಾಯ ವ್ಯಕ್ತಪಡಿಸಿದ್ದು, ಎಲ್ಲರೂ ಬೆಂಬಲ ನೀಡುವುದಾಗಿ ಭರವಸೆ ನೀಡಿದ್ದಾರೆ ಎಂದು ಅವರು ಹೇಳಿದರು.

ಕಳೆದ ಬಾರಿ ದರ್ಶನ್ ನನ್ನ ಪರ ಇದ್ದರು. ಹಾಗಾಗಿ ಗೆದ್ದಿದ್ದೆ. ಈ ಬಾರಿಯ ಚುನಾವಣೆಯಲ್ಲೂ ನನ್ನ ಜೊತೆ ನಿಲ್ಲುವುದಾಗಿ ತಿಳಿಸಿದ್ದಾರೆ. ಯಶ್ ಲಂಡನ್ ನಲ್ಲಿ ಇದ್ದಾರೆ. ಅವರ ಜೊತೆ ಇನ್ನೂ ಮಾತನಾಡಿಲ್ಲ. ದರ್ಶನ್ ಸಿಕ್ಕಿದ್ದಿರಿಂದ ಅವರ ಜೊತೆ ಮಾತನಾಡಿದ್ದೇನೆ ಎಂದು ಸುಮಲತಾ ಹೇಳಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments