Home ಕ್ರೀಡೆ ಕೆಕೆಆರ್ ಗೆ 1 ರನ್ ರೋಚಕ ಜಯ, ಆರ್ ಸಿಬಿಗೆ ಸತತ 6ನೇ ಸೋಲು

ಕೆಕೆಆರ್ ಗೆ 1 ರನ್ ರೋಚಕ ಜಯ, ಆರ್ ಸಿಬಿಗೆ ಸತತ 6ನೇ ಸೋಲು

by Editor
0 comments

ಜಿದ್ದಾಜಿದ್ದಿನ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 1 ರನ್ ನಿಂದ ಕೋಲ್ಕತಾ ನೈಟ್ ರೈಡರ್ಸ್ ವಿರುದ್ಧ ವೀರೋಚಿತ ಸೋಲುಂಡಿದೆ. ಈ ಮೂಲಕ ಐಪಿಎಲ್ ಟಿ-20 ಟೂರ್ನಿಯಲ್ಲಿ ಸತತ 6ನೇ ಸೋಲುಂಡಿದೆ.

ಕೋಲ್ಕತಾದ ಈಡನ್ ಗಾರ್ಡನ್ ಮೈದಾನದಲ್ಲಿ ಭಾನುವಾರ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಕೋಲ್ಕತಾ ನೈಟ್ ರೈಡರ್ಸ್ ತಂಡ 20 ಓವರ್ ಗಳಲ್ಲಿ 6 ವಿಕೆಟ್ ಕಳೆದುಕೊಂಡು 222 ರನ್ ಸಂಪಾದಿಸಿತು. ಬೃಹತ್ ಮೊತ್ತ ಬೆಂಬತ್ತಿದ ಆರ್ ಸಿಬಿ 20 ಓವರ್ ಗಳಲ್ಲಿ 221 ರನ್ ಗೆ ಆಲೌಟಾಯಿತು.

ಪಂದ್ಯದ ಕೊನೆಯ ಓವರ್ ನಲ್ಲಿ 15 ರನ್ ಗಳಿಸಬೇಕಾದ ಒತ್ತಡವಿತ್ತು. ಈ ಹಂತದಲ್ಲಿ 8 ವಿಕೆಟ್ ಕಳೆದುಕೊಂಡಿದ್ದ ಆರ್ ಸಿಬಿ ಪರ ಕರ್ಣ್ ಶರ್ಮ, ಮಿಚೆಲ್ ಸ್ಟಾರ್ಕ್ ಓವರ್ ನಲ್ಲಿ 3 ಸಿಕ್ಸರ್ ಸಿಡಿಸಿ ಗೆಲುವಿನ ಭರವಸೆ ಮೂಡಿಸಿದ್ದರು.

ಕೊನೆಯ 2 ಎಸೆತದಲ್ಲಿ 3 ರನ್ ಗಳಿಸಬೇಕಿತ್ತು.  ಆದರೆ 4ನೇ ಎಸೆತದಲ್ಲಿ ಕರ್ಣ್ ಶರ್ಮ ಔಟಾಗಿದ್ದರಿಂದ ತಂಡ ಒತ್ತಡಕ್ಕೆ ಸಿಲುಕಿತ್ತು. ಕೊನೆಯ ಎರಡು ಎಸೆತಗಳಲ್ಲಿ ಸತತ 2 ವಿಕೆಟ್ ಕಳೆದುಕೊಂಡ ಆರ್ ಸಿಬಿ 1 ರನ್ ನಿಂದ ಸೋಲುಂಡಿತು.

banner

ಆರ್ ಸಿಬಿ ಪರ ವಿಲ್ ಜ್ಯಾಕ್ 32 ಎಸೆತದಲ್ಲಿ 4 ಬೌಂಡರಿ ಮತ್ತು 5 ಸಿಕ್ಸರ್ ಸೇರಿದ 55 ರನ್ ಮತ್ತು ರಜತ್ ಪಟಿದರ್ 23 ಎಸೆತಗಳಲ್ಲಿ 3 ಬೌಂಡರಿ ಮತ್ತು 5 ಸಿಕ್ಸರ್ ಸಹಾಯದಿಂದ 52 ರನ್ ಸಿಡಿಸಿದರು. ಇವರಿಬ್ಬರು ಮೂರನೇ ವಿಕೆಟ್ ಗೆ 102 ರನ್ ಜೊತೆಯಾಟ ನಿಭಾಯಿಸಿ ಗೆಲುವಿನ ಭರವಸೆ ಮೂಡಿಸಿದರು.

ನಂತರ ಸುಯೆಶ್ ಪ್ರಭುದೇಸಾಯಿ (24), ದಿನೇಶ್ ಕಾರ್ತಿಕ್ (25), ಕರ್ಣ್ ಶರ್ಮ (20 ರನ್ , 7 ಎಸೆತ, 3 ಸಿಕ್ಸರ್) , ವಿರಾಟ್ ಕೊಹ್ಲಿ (18 ರನ್, 1 ಬೌಂಡರಿ, 2 ಸಿಕ್ಸರ್) ತಕ್ಕಮಟ್ಟಿಗೆ ಹೋರಾಟ ನಡೆಸಿದರು.

You may also like

Leave a Comment

Soledad is the Best Newspaper and Magazine WordPress Theme with tons of options and demos ready to import. This theme is perfect for blogs and excellent for online stores, news, magazine or review sites.

Buy Soledad now!

Edtior's Picks

Latest Articles

Latest news
ವಾಹನ ಸವಾರರಿಗೆ ಬಿಗ್ ಶಾಕ್: ವಾಹನ ಮಾರಿದ 14 ದಿನದಲ್ಲಿ ದಾಖಲೆ ವರ್ಗಾವಣೆ ಕಡ್ಡಾಯ! ಹುಚ್ಚು ಹುಚ್ಚಾಗಿ ಮಾತನಾಡೋ ಯತ್ನಾಳ್, ರಮೇಶ್ ಜಾರಕಿಹೊಳಿ ವಿರುದ್ಧ ಹೈಕಮಾಂಡ್ ಗೆ ದೂರು: ರೇಣುಕಾಚಾರ್ಯ ಫಿನಾಲೆ ಹೊಸ್ತಿಲಲ್ಲಿ ಬಿಗ್ ಬಾಸ್ ಮನೆಯಿಂದ ಹೊರಬಿದ್ದ ಧನರಾಜ್! ಚಂದ್ರಬಾಬು ನಾಯ್ಡು ಪುತ್ರ ಲೋಕೇಶ್ ಆಂಧ್ರ ಡಿಸಿಎಂ? ಡೊನಾಲ್ಡ್ ಟ್ರಂಪ್ ಪದಗ್ರಹಣಕ್ಕೆ ಪ್ರತಿಭಟನೆ ಬಿಸಿ: ಬೀದಿಗಿಳಿದ ಸಾವಿರಾರು ಅಮೆರಿಕನ್ನರು ಫೆ.14ರಂದು ರೈತರ ಬೇಡಿಕೆ ಚರ್ಚೆಗೆ ಕೇಂದ್ರ ಒಪ್ಪಿಗೆ: ವೈದ್ಯ ನೆರವು ಪಡೆಯಲು ಜಗಜೀತ್ ಒಪ್ಪಿಗೆ ಸದ್ದಿಲ್ಲದೇ ದಾಂಪತ್ಯಕ್ಕೆ ಕಾಲಿರಿಸಿದ ಒಲಿಂಪಿಕ್ ಪದಕ ವಿಜೇತ ನೀರಜ್ ಚೋಪ್ರಾ: ಮೊದಲ ಫೋಟೊ ಬಿಡುಗಡೆ ಕೇಂದ್ರ ಆದಿವಾಸಿ ಜನಜಾತಿ ನ್ಯಾಯ ಅಭಿಯಾನಕ್ಕೆ ಮಂಡ್ಯದ ಪೂವನಹಳ್ಳಿ ಆಯ್ಕೆ: ಎಚ್.ಡಿ. ಕುಮಾರಸ್ವಾಮಿ ಘೋಷಣೆ ಒಲಿಂಪಿಕ್ಸ್ ಪದಕ ವಿಜೇತೆ ಮನು ಭಾಕರ್ ಅಜ್ಜಿ, ಚಿಕ್ಕಪ್ಪ ಅಪಘಾತದಲ್ಲಿ ದುರ್ಮರಣ ಮಹಾಕುಂಭ ಮೇಳದಲ್ಲಿ ಸಿಲಿಂಡರ್ ಸ್ಫೋಟ: ಹಲವು ಶಿಬಿರಗಳಿಗೆ ವ್ಯಾಪಿ