Kannadavahini

ಬಾರಿಸು ಕನ್ನಡ ಡಿಂಡಿಮವ

darshan
ತಾಜಾ ಸುದ್ದಿ ರಾಜ್ಯ

ದರ್ಶನ್ ಸೇರಿ 13 ಮಂದಿಗೆ ಜೂ.20ರವರೆಗೆ ಪೊಲೀಸ್ ಕಸ್ಟಡಿ ಮುಂದುವರಿಕೆ

ನಟ ದರ್ಶನ್ ಮತ್ತು ಪವಿತ್ರಾ ಗೌಡ ಸೇರಿದಂತೆ 13 ಮಂದಿಗೆ ಕೊಲೆ ಪ್ರಕರಣದಲ್ಲಿ ಪೊಲೀಸ್ ಕಸ್ಟಡಿ ಅವಧಿ ಮತ್ತೆ 5 ದಿನಗಳ ಕಾಲ ನೀಡಲಾಗಿದೆ.

ವಿಶೇಷ ಆರ್ಥಿಕ ನ್ಯಾಯಾಲಯ ಸುದೀರ್ಘ ವಿಚಾರಣೆ ನಂತರ ಶನಿವಾರ ಜೂನ್ 20ರವರೆಗೆ ಆರೋಪಿಗಳಿಗೆ ಪೊಲೀಸ್ ಕಸ್ಟಡಿ ವಿಸ್ತರಿಸಲಾಗಿದೆ.

ದರ್ಶನ್ ಮತ್ತು ಪವಿತ್ರಾ ಗೌಡ ಅವರಿಗೆ ಈ ಹಿಂದೆ ಮ್ಯಾಜಿಸ್ಟ್ರೇಟ್ ನ್ಯಾಯಾಲಯ 6 ದಿನಗಳ ಕಾಲ ಪೊಲೀಸ್ ಕಸ್ಟಡಿ ವಿಧಿಸಿತ್ತು. ಇದೀಗ ಮತ್ತೆ 5 ದಿನಗಳ ಕಾಲ ಕಸ್ಟಡಿ ಗೆ ನೀಡಿದ್ದರಿಂದ ಒಟ್ಟಾರೆ 11 ದಿನಗಳ ಕಾಲ ಪೊಲೀಸ್ ಕಸ್ಟಡಿಯಲ್ಲಿ ಕಳೆಯಬೇಕಾಗಿದೆ.

ವಿಚಾರಣೆ ವೇಳೆ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆಯಲ್ಲಿ ದರ್ಶನ್ ಪಾತ್ರವಿಲ್ಲ. ಪವಿತ್ರಾ ಗೌಡ ಪತ್ನಿ ಅಲ್ಲ. ಗೆಳತಿ ಮಾತ್ರ. ಕೊಲೆಯಲ್ಲಿ ಅವರ ಪಾತ್ರವೂ ಇಲ್ಲ. ಗ್ಯಾಂಗ್ ನಲ್ಲಿದ್ದ ಇಬ್ಬರು ಮಾಡಿರುವ ಕೊಲೆಯನ್ನು ದರ್ಶನ್ ಮೇಲೆ ಹೊರಿಸಲಾಗುತ್ತಿದೆ ಎಂದು ದರ್ಶನ್ ಪರ ವಕೀಲರು ವಾದ ಮಂಡಿಸಿದರು.

ಈ ವೇಳೆ ಪ್ರಕರಣಕ್ಕೆ ಸಂಬಂಧಿಸಿ ಹಲವು ಮಹತ್ವದ ಸಾಕ್ಷ್ಯಗಳನ್ನು ಸಂಗ್ರಹಿಸಲಾಗಿದೆ. ಅಲ್ಲದೇ ಪ್ರಕರಣ ಮುಚ್ಚಿಹಾಕಲು ನೀಡಲಾಗಿದ್ದ 30 ಲಕ್ಷ ರೂ. ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರ ಪರ ವಕೀಲರು ವಾದಿಸಿದರು.

LEAVE A RESPONSE

Your email address will not be published. Required fields are marked *