Home ತಾಜಾ ಸುದ್ದಿ 2004ರ ಲೋಕಸಭಾ ಚುನಾವಣೆ ಫಲಿತಾಂಶ ಪುನರಾವರ್ತನೆ: ಷೇರು ಮಾರುಕಟ್ಟೆ ವಿಶ್ಲೇಷಣೆ

2004ರ ಲೋಕಸಭಾ ಚುನಾವಣೆ ಫಲಿತಾಂಶ ಪುನರಾವರ್ತನೆ: ಷೇರು ಮಾರುಕಟ್ಟೆ ವಿಶ್ಲೇಷಣೆ

by Editor
0 comments
share market

ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ 400 ಸ್ಥಾನ ಗೆಲ್ಲುತ್ತಾ ಅಥವಾ ಕಾಂಗ್ರೆಸ್ ನೇತೃತ್ವದ ಇಂಡಿಯಾ ಮೈತ್ರಿಕೂಟ ಅಧಿಕಾರಕ್ಕೆ ಬರುತ್ತಾ ಎಂಬ ಲೆಕ್ಕಾಚಾರಗಳು ನಡೆಯುತ್ತಿದ್ದು, ಒಬ್ಬೊಬ್ಬರು ಒಂದೊಂದು ರೀತಿಯ ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ. ಚುನಾವಣೆ ಬಗ್ಗೆ ನಿಖರ ಅಭಿಪ್ರಾಯ ನೀಡುತ್ತಾ ಬಂದಿರುವ ಮಾರುಕಟ್ಟೆ ತಜ್ಞರು ಹೇಳುವುದೇ ಬೇರೆ.

ಹೌದು, ಮಾರುಕಟ್ಟೆ ತಜ್ಞರು ಅಥವಾ ಷೇರು ಮಾರುಕಟ್ಟೆ ವಿಶ್ಲೇಷಕರ ಪ್ರಕಾರ ಬಿಜೆಪಿ ನೇತೃತ್ವದ ಎನ್ ಡಿಎ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ 400 ಸ್ಥಾನ ಪಡೆಯುವುದಿಲ್ಲ. ಬಿಜೆಪಿ ಹೇಳಿಕೊಂಡಂತೆ 400 ಸ್ಥಾನ ದೊರೆಯುವ ಅವಕಾಶ ಶೇ.20ರಷ್ಟು ಮಾತ್ರ ಇದೆ ಎಂದು ಹೇಳಿದೆ.

ಬಿಜೆಪಿ ಅಧಿಕಾರ ಉಳಿಸಿಕೊಳ್ಳುವ ಸಾಧ್ಯತೆ ಶೇ.70ರಷ್ಟು ಇದೆ. ಅಧಿಕಾರ ಕಳೆದುಕೊಳ್ಳುವ ಸಾಧ್ಯತೆ ಶೇ.10ರಷ್ಟು ಮಾತ್ರ ಇದೆ. ಆದರೆ ಎನ್ ಡಿಎ ಹೇಳಿಕೊಂಡಂತೆ 370ಕ್ಕಿಂತ ಹೆಚ್ಚು ಸ್ಥಾನ ಗೆಲ್ಲುವ ಸಾಧ್ಯತೆ ತುಂಬಾ ಕಡಿಮೆ ಇದೆ ಎಂದು ಹೇಳಲಾಗಿದೆ.

ಬಿಜೆಪಿ ನೇತೃತ್ವದ ಎನ್ ಡಿಎ ಮತ್ತೊಮ್ಮೆ ಅಧಿಕಾರ ಹಿಡಿಯಲಿದೆ. ಆದರೆ 400 ಸ್ಥಾನ ಸಿಗುವುದಿಲ್ಲ. ಬದಲಿಗೆ 300ರಿಂದ 320 ಸ್ಥಾನ ಗೆಲ್ಲಬಹುದು. 2004ರ ಲೋಕಸಭಾ ಚುನಾವಣೆಯ ಫಲಿತಾಂಶ ಪುನರಾವರ್ತನೆ ಆಗಬಹುದು ಎಂದು ಮಾರುಕಟ್ಟೆ ತಜ್ಞರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

banner

ಮಾರುಕಟ್ಟೆ ತಜ್ಞರು ಅನಿರೀಕ್ಷಿತ ಫಲಿತಾಂಶದ ಬಗ್ಗೆ ಆತಂಕ ವ್ಯಕ್ತಪಡಿಸಿದ್ದಾರೆ. ನಿರೀಕ್ಷೆಯಂತೆ ಎನ್ ಡಿಎ ಮತ್ತೊಮ್ಮೆ ಅಧಿಕಾರಕ್ಕೆ ಬರಲಿ ಎಂಬುದು ಮಾರುಕಟ್ಟೆ ವಿಶ್ಲೇಷಕರು ಬಯಸುತ್ತಿದ್ದಾರೆ. 2004ರ ಚುನಾವಣೆ ಫಲಿತಾಂಶ ದಿನ ಷೇರು ಮಾರುಕಟ್ಟೆ 15.5 ಅಂಕಗಳಷ್ಟು ಕುಸಿದಿತ್ತು. ಈ ಬಾರಿಯೂ ಅದೇ ಆಗಬಹುದು ಎಂದು ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ.

You may also like

Leave a Comment

Soledad is the Best Newspaper and Magazine WordPress Theme with tons of options and demos ready to import. This theme is perfect for blogs and excellent for online stores, news, magazine or review sites.

Buy Soledad now!

Edtior's Picks

Latest Articles

Latest news
ಹುಚ್ಚು ಹುಚ್ಚಾಗಿ ಮಾತನಾಡೋ ಯತ್ನಾಳ್, ರಮೇಶ್ ಜಾರಕಿಹೊಳಿ ವಿರುದ್ಧ ಹೈಕಮಾಂಡ್ ಗೆ ದೂರು: ರೇಣುಕಾಚಾರ್ಯ ಫಿನಾಲೆ ಹೊಸ್ತಿಲಲ್ಲಿ ಬಿಗ್ ಬಾಸ್ ಮನೆಯಿಂದ ಹೊರಬಿದ್ದ ಧನರಾಜ್! ಚಂದ್ರಬಾಬು ನಾಯ್ಡು ಪುತ್ರ ಲೋಕೇಶ್ ಆಂಧ್ರ ಡಿಸಿಎಂ? ಡೊನಾಲ್ಡ್ ಟ್ರಂಪ್ ಪದಗ್ರಹಣಕ್ಕೆ ಪ್ರತಿಭಟನೆ ಬಿಸಿ: ಬೀದಿಗಿಳಿದ ಸಾವಿರಾರು ಅಮೆರಿಕನ್ನರು ಫೆ.14ರಂದು ರೈತರ ಬೇಡಿಕೆ ಚರ್ಚೆಗೆ ಕೇಂದ್ರ ಒಪ್ಪಿಗೆ: ವೈದ್ಯ ನೆರವು ಪಡೆಯಲು ಜಗಜೀತ್ ಒಪ್ಪಿಗೆ ಸದ್ದಿಲ್ಲದೇ ದಾಂಪತ್ಯಕ್ಕೆ ಕಾಲಿರಿಸಿದ ಒಲಿಂಪಿಕ್ ಪದಕ ವಿಜೇತ ನೀರಜ್ ಚೋಪ್ರಾ: ಮೊದಲ ಫೋಟೊ ಬಿಡುಗಡೆ ಕೇಂದ್ರ ಆದಿವಾಸಿ ಜನಜಾತಿ ನ್ಯಾಯ ಅಭಿಯಾನಕ್ಕೆ ಮಂಡ್ಯದ ಪೂವನಹಳ್ಳಿ ಆಯ್ಕೆ: ಎಚ್.ಡಿ. ಕುಮಾರಸ್ವಾಮಿ ಘೋಷಣೆ ಒಲಿಂಪಿಕ್ಸ್ ಪದಕ ವಿಜೇತೆ ಮನು ಭಾಕರ್ ಅಜ್ಜಿ, ಚಿಕ್ಕಪ್ಪ ಅಪಘಾತದಲ್ಲಿ ದುರ್ಮರಣ ಮಹಾಕುಂಭ ಮೇಳದಲ್ಲಿ ಸಿಲಿಂಡರ್ ಸ್ಫೋಟ: ಹಲವು ಶಿಬಿರಗಳಿಗೆ ವ್ಯಾಪಿ ಬಿಜೆಪಿ ಬಣ ಕಿತ್ತಾಟಕ್ಕೆ ಟ್ವಿಸ್ಟ್: ಪ್ರಧಾನ ಕಾರ್ಯದರ್ಶಿ ಸ್ಥಾನ ಒಲ್ಲೆ ಅಂದ ಶಾಸಕ ಸುನೀಲ್ ಕುಮಾರ್!