Home ತಾಜಾ ಸುದ್ದಿ ದೇವಸ್ಥಾನಕ್ಕೆ 23 ಕೋಟಿ ಕ್ಯಾಷ್, 1 ಕೆಜಿ ಚಿನ್ನದ ಬಿಸ್ಕತ್ತು, ಬೆಳ್ಳಿ ಪಿಸ್ತೂಲು ದಾನ!

ದೇವಸ್ಥಾನಕ್ಕೆ 23 ಕೋಟಿ ಕ್ಯಾಷ್, 1 ಕೆಜಿ ಚಿನ್ನದ ಬಿಸ್ಕತ್ತು, ಬೆಳ್ಳಿ ಪಿಸ್ತೂಲು ದಾನ!

by Editor
0 comments
gold

23 ಕೋಟಿ ಕ್ಯಾಷ್, 1 ಕೆಜಿ ಚಿನ್ನದ ಬಿಸ್ಕತ್ತು, ಬೆಳ್ಳಿ ಪಿಸ್ತೂಲು, ಬೆಳ್ಳಿಯ ಕೈಕೊಳ.. ಇದು ಯಾವುದೋ ಅಧಿಕಾರಿ ಅಥವಾ ರಾಜಕಾರಣಿ ಮನೆಗೆ ಲೋಕಾಯುಕ್ತ, ಸಿಬಿಐ ದಾಳಿ ಮಾಡಿದಾಗ ಸಿಕ್ಕ ಸಂಪತ್ತು ಅಲ್ಲ. ಬದಲಿಗೆ ದೇವಸ್ಥಾನಕ್ಕೆ ಹರಿದು ಬಂದ ದಾನ!

ಹೌದು ರಾಜಸ್ಥಾನದ ಚಿತ್ತಘಡ್ ನಲ್ಲಿರುವ ಶ್ರೀ ಕೃಷ್ಣನ ಸನ್ವಾಲಿಯಾ ಸೇಥ್ ದೇವಸ್ಥಾನದ ಖಜಾನೆ ತೆರೆದು ಎಣಿಕೆ ಮಾಡಲಾಗಿದ್ದು, ಈ ವೇಳೆ ಭಕ್ತಾದಿಗಳು ದೇವಸ್ಥಾನಕ್ಕೆ ಮಾಡಿದ ದಾನ ನೋಡಿ ಅಧಿಕಾರಿಗಳು ಶಾಕ್ ಆಗಿದ್ದಾರೆ.

ಹುಂಡಿಯಲ್ಲಿ ಬಿದ್ದ ದಾನವನ್ನು ತೆರೆದು ಅಧಿಕಾರಿಗಳು ಎಣಿಕೆ ಮಾಡಿದಾಗ 23 ಕೋಟಿ ರೂ. ನಗದು, 1 ಕೆಜಿ ತೂಕದ ಚಿನ್ನದ ಬಿಸ್ಕತ್ತುಗಳು, ಭಾರೀ ಪ್ರಮಾಣದಲ್ಲಿ ಬೆಳ್ಳಿ ಸಾಮಾನುಗಳು ಪತ್ತೆಯಾಗಿವೆ. ಬೆಳ್ಳಿ ಸಾಮಾನುಗಳಲ್ಲಿ ಬೆಳ್ಳಿಯ ಪಿಸ್ತೂಲು, ಬೆಳ್ಳಿಯ ಬೇಡಿ, ಬೆಳ್ಳಿಯ ಬೀಗ-ಕೀಲಿ ಸೇರಿದಂತೆ ಹಲವು ಅಪರೂಪದ ವಸ್ತುಗಳು ಲಭಿಸಿವೆ.

ಈ ದೇವಸ್ಥಾನದಲ್ಲಿ ಇದೇ ಮೊದಲ ಬಾರಿ ಇಷ್ಟು ದೊಡ್ಡ ಮಟ್ಟದ ವಸ್ತು ಮತ್ತು ನಗದು ಪತ್ತೆಯಾಗಿದೆ. ಎರಡು ತಿಂಗಳ ಬಿಡುವಿನ ನಂತರ ಹುಂಡಿ ತೆರೆಯಲಾಗಿತ್ತು ಎಂದು ದೇವಸ್ಥಾನದ ಸಿಬ್ಬಂದಿ ತಿಳಿಸಿದ್ದಾರೆ.

banner

ಮೊದಲ ಹಂತದ ಎಣಿಕೆ ವೇಳೆ 11.34 ಕೋಟಿ ರೂ., ಎರಡನೇ ಹಂತದಲ್ಲಿ 3.70 ಕೋಟಿ ರೂ. ಹಾಗೂ ಮೂರನೇ ಹಂತದಲ್ಲಿ 4.27 ಕೋಟಿ ರೂ. ನಗದು ಎಣಿಕೆ ಮಾಡಲಾಗಿದೆ. ಇದುವರೆಗೆ 19.22 ಕೋಟಿ ರೂ. ಎಣಿಸಲಾಗಿತ್ತು.

ಪ್ರತಿ ಅಮಾವಸ್ಯೆಯಂದು ದೇವಸ್ಥಾನಕ್ಕೆ ಬಂದ ದಾನವನ್ನು ಎಣಿಕೆ ಮಾಡಲಾಗುತ್ತಿದೆ. 7ರಿಂದ 8 ಸುತ್ತುಗಳಲ್ಲಿ ಎಣಿಕೆ ಮಾಡಲಾಗುವುದು. ಇನ್ನು ಚಿನ್ನ ಹಾಗೂ ಬೆಳ್ಳಿ ಸಾಮಾನುಗಳ ಲೆಕ್ಕ ನಡೆಯುತ್ತಿದ್ದು, ಇದರ ತೂಕ ಮಾಡಬೇಕಿದೆ.

You may also like

Leave a Comment

Soledad is the Best Newspaper and Magazine WordPress Theme with tons of options and demos ready to import. This theme is perfect for blogs and excellent for online stores, news, magazine or review sites.

Buy Soledad now!

Edtior's Picks

Latest Articles

Latest news
ಹುಚ್ಚು ಹುಚ್ಚಾಗಿ ಮಾತನಾಡೋ ಯತ್ನಾಳ್, ರಮೇಶ್ ಜಾರಕಿಹೊಳಿ ವಿರುದ್ಧ ಹೈಕಮಾಂಡ್ ಗೆ ದೂರು: ರೇಣುಕಾಚಾರ್ಯ ಫಿನಾಲೆ ಹೊಸ್ತಿಲಲ್ಲಿ ಬಿಗ್ ಬಾಸ್ ಮನೆಯಿಂದ ಹೊರಬಿದ್ದ ಧನರಾಜ್! ಚಂದ್ರಬಾಬು ನಾಯ್ಡು ಪುತ್ರ ಲೋಕೇಶ್ ಆಂಧ್ರ ಡಿಸಿಎಂ? ಡೊನಾಲ್ಡ್ ಟ್ರಂಪ್ ಪದಗ್ರಹಣಕ್ಕೆ ಪ್ರತಿಭಟನೆ ಬಿಸಿ: ಬೀದಿಗಿಳಿದ ಸಾವಿರಾರು ಅಮೆರಿಕನ್ನರು ಫೆ.14ರಂದು ರೈತರ ಬೇಡಿಕೆ ಚರ್ಚೆಗೆ ಕೇಂದ್ರ ಒಪ್ಪಿಗೆ: ವೈದ್ಯ ನೆರವು ಪಡೆಯಲು ಜಗಜೀತ್ ಒಪ್ಪಿಗೆ ಸದ್ದಿಲ್ಲದೇ ದಾಂಪತ್ಯಕ್ಕೆ ಕಾಲಿರಿಸಿದ ಒಲಿಂಪಿಕ್ ಪದಕ ವಿಜೇತ ನೀರಜ್ ಚೋಪ್ರಾ: ಮೊದಲ ಫೋಟೊ ಬಿಡುಗಡೆ ಕೇಂದ್ರ ಆದಿವಾಸಿ ಜನಜಾತಿ ನ್ಯಾಯ ಅಭಿಯಾನಕ್ಕೆ ಮಂಡ್ಯದ ಪೂವನಹಳ್ಳಿ ಆಯ್ಕೆ: ಎಚ್.ಡಿ. ಕುಮಾರಸ್ವಾಮಿ ಘೋಷಣೆ ಒಲಿಂಪಿಕ್ಸ್ ಪದಕ ವಿಜೇತೆ ಮನು ಭಾಕರ್ ಅಜ್ಜಿ, ಚಿಕ್ಕಪ್ಪ ಅಪಘಾತದಲ್ಲಿ ದುರ್ಮರಣ ಮಹಾಕುಂಭ ಮೇಳದಲ್ಲಿ ಸಿಲಿಂಡರ್ ಸ್ಫೋಟ: ಹಲವು ಶಿಬಿರಗಳಿಗೆ ವ್ಯಾಪಿ ಬಿಜೆಪಿ ಬಣ ಕಿತ್ತಾಟಕ್ಕೆ ಟ್ವಿಸ್ಟ್: ಪ್ರಧಾನ ಕಾರ್ಯದರ್ಶಿ ಸ್ಥಾನ ಒಲ್ಲೆ ಅಂದ ಶಾಸಕ ಸುನೀಲ್ ಕುಮಾರ್!