Saturday, October 5, 2024
Google search engine
Homeಕ್ರೀಡೆಜಿಂಬಾಬ್ವೆಗೆ ಪ್ರಕಟಿಸಿದ ಭಾರತ ತಂಡದಲ್ಲಿ 3 ಬದಲಾವಣೆ

ಜಿಂಬಾಬ್ವೆಗೆ ಪ್ರಕಟಿಸಿದ ಭಾರತ ತಂಡದಲ್ಲಿ 3 ಬದಲಾವಣೆ

ಟಿ-20 ವಿಶ್ವಕಪ್ ಗೆದ್ದ ಭಾರತ ತಂಡದ ಆಟಗಾರರು ಚಂಡಮಾರುತದ ಪರಿಣಾಮ ವೆಸ್ಟ್ ಇಂಡೀಸ್ ನಿಂದ ಸ್ವದೇಶಕ್ಕೆ ಬರಲು ತಡವಾದ ಹಿನ್ನೆಲೆಯಲ್ಲಿ ಬಿಸಿಸಿಐ ಜಿಂಬಾಬ್ವೆಗೆ ಪ್ರಕಟಿಸಿದ ತಂಡದಲ್ಲಿ ಮೂರು ಬದಲಾವಣೆ ಮಾಡಿದೆ.

ವೆಸ್ಟ್ ಇಂಡೀಸ್ ನಿಂದ ಸ್ವದೇಶಕ್ಕೆ ತಡವಾಗಿ ಯಶಸ್ವಿ ಜೈಸ್ವಾಲ್, ಸಂಜು ಸ್ಯಾಮ್ಸನ್ ಮತ್ತು ಶಿವಂ ದುಬೆ ಬರುತ್ತಿರುವುದರಿಂದ ಅವರ ಬದಲು ಸಾಯಿ ಸುದರ್ಶನ್, ಜಿತೇಶ್ ಶರ್ಮ ಮತ್ತು ಹರ್ಷತ್ ರಾಣಾ ಅವರನ್ನು ಆಯ್ಕೆ ಮಾಡಲಾಗಿದೆ.

ಜುಲೈ 6ರಿಂದ ಟಿ-20 ಹಾಗೂ ಏಕದಿನ ಸರಣಿಗೆ ಪಾಲ್ಗೊಳ್ಳಲು ಭಾರತ ತಂಡ ಶನಿವಾರ ಪ್ರಯಾಣ ಬೆಳೆಸಬೇಕಿತ್ತು. ಆದರೆ ತಂಡ ಸ್ವದೇಶಕ್ಕೆ ಮರಳಲು ತಡವಾದ ಕಾರಣ ಮಂಗಳವಾರ ಪ್ರಯಾಣ ಬೆಳೆಸಿದೆ.

ಟಿ-20 ವಿಶ್ವಕಪ್ ತಂಡದಲ್ಲಿ ಮೀಸಲು ಆಟಗಾರರಾಗಿದ್ದ ರಿಂಕು ಸಿಂಗ್, ಖಲೀಲ್ ಅಹ್ಮದ್ ಕೂಡ ಬಾರ್ಬ ಡಾಸ್ ನಲ್ಲೇ ಉಳಿದುಕೊಂಡಿದ್ದಾರೆ. ಇದರಿಂದ ಇವರಿಗೂ ಜಿಂಬಾಬ್ವೆ ಸರಣಿಗೆ ಪರಿಗಣಿಸಲು ಸಾಧ್ಯವಾಗಿಲ್ಲ. ಹೀಗಾಗಿ ಅನಿವಾರ್ಯವಾಗಿ ಬಿಸಿಸಿಐ ಮೂವರು ಪರ್ಯಾಯ ಆಟಗಾರರನ್ನು ಆಯ್ಕೆ ಮಾಡಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments