Home ತಾಜಾ ಸುದ್ದಿ ಉರಿಬಿಸಿಲಿಗೆ ಉತ್ತರ ಭಾರತ ತತ್ತರ: 54 ಸಾವು, ಧೂಳಿನ ಬಿರುಗಾಳಿ ಭೀತಿ!

ಉರಿಬಿಸಿಲಿಗೆ ಉತ್ತರ ಭಾರತ ತತ್ತರ: 54 ಸಾವು, ಧೂಳಿನ ಬಿರುಗಾಳಿ ಭೀತಿ!

by Editor
0 comments

ಬಿಸಿಗಾಳಿ ಅಬ್ಬರಕ್ಕೆ ಉತ್ತರ ಭಾರತ ತತ್ತರಿಸಿದ್ದು, ಕಳೆದ 24 ಗಂಟೆಯಲ್ಲಿ ಮೃತಪಟ್ಟವರ ಸಂಖ್ಯೆ 54ಕ್ಕೆ ಏರಿಕೆಯಾಗಿದೆ.

ಉತ್ತರ ಭಾರತದಲ್ಲಿ ಬಿಸಿಗಾಳಿಯಿಂದ ಉತ್ತರ, ಕೇಂದ್ರ ಹಾಗೂ ಈಶಾನ್ಯ ಭಾರತದ ರಾಜ್ಯಗಳು ತತ್ತರಿಸುತ್ತಿದ್ದು, ರಾಜಧಾನಿ ದೆಹಲಿಯಲ್ಲಿ ಗರಿಷ್ಠ 45 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ.

ಬಿಸಿಗಾಳಿಗೆ ಜನರು ತತ್ತರಿಸುವ ಬೆನ್ನಲ್ಲೇ ಮೇ 31ರಿಂದ ಜೂನ್ 1ರ ನಡುವೆ ದೆಹಲಿ ಹಾಗೂ ಉತ್ತರ ಪ್ರದೇಶದಲ್ಲಿ ಧೂಳಿನ ಬಿರುಗಾಳಿ ಬೀಸುವ ಭೀತಿ ಶುರುವಾಗಿದೆ. ಹರಿಯಾಣ ಮತ್ತು ಚಂಡೀಗಢದಲ್ಲಿ ಮೇ 31ರಂದು ಬಿಸಿಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.

ಮೇ 31ರಿಂದ ಜೂನ್ 2ರ ನಡುವೆ ವಾಯುವ್ಯ ಭಾರತದ ರಾಜ್ಯಗಳಲ್ಲಿ ಗುಡುಗು ಮತ್ತು ಸಿಡಿಲಿನಿಂದ ಕೂಡಿದ ಸಣ್ಣ ಪ್ರಮಾಣದಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಇದರಿಂದ ಬಿಸಿಗಾಳಿ ಪ್ರಮಾಣ ಕುಸಿಯಬಹುದು. ಆದರೆ ಉಳಿದೆಡೆ ಇನ್ನೂ ಕೆಲವು ದಿನ ಬಿಸಿಗಾಳಿ ಆತಂಕ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.

banner

ದೆಹಲಿಯಲ್ಲಿ 45.6 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದ್ದು, ಸಾಮಾನ್ಯಕ್ಕಿಂತ 5 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗಿದೆ. ಇದರಿಂದ ಜನರು ಮನೆಯಿಂದ ಹೊರಗೆ ಬರಲು ಹಿಂದೇಟು ಹಾಕುತ್ತಿದ್ದಾರೆ.

ಬಿಹಾರದಲ್ಲಿ ಬಿಸಿಗಾಳಿಗೆ ಮೃತಪಟ್ಟವರ ಸಂಖ್ಯೆ 32ಕ್ಕೆ ಏರಿಕೆಯಾಗಿದೆ. ಗುರುವಾರ 2 ಗಂಟೆ ಅವಧಿಯಲ್ಲಿ ಔರಂಗಾಬಾದ್ ಆಸ್ಪತ್ರೆಯಲ್ಲಿ 17 ಮಂದಿ ಅಸುನೀಗಿದ್ದರು. ಅರಾಹ್ ನಲ್ಲಿ 6, ಗಯಾ ಮತ್ತು ರೊಹ್ಟಕ್ ನಲ್ಲಿ ತಲಾ 3, ಬುಕ್ಸರ್ ನಲ್ಲಿ 2 ಮತ್ತು ಪಾಟ್ನಾದಲ್ಲಿ 1 ಸಾವು ದಾಖಲಾಗಿದೆ.

You may also like

Leave a Comment

Soledad is the Best Newspaper and Magazine WordPress Theme with tons of options and demos ready to import. This theme is perfect for blogs and excellent for online stores, news, magazine or review sites.

Buy Soledad now!

Edtior's Picks

Latest Articles

Latest news
ರಷ್ಯಾ ಸೇನೆಯಲ್ಲಿದ್ದ 12 ಭಾರತೀಯರು ಸಾವು, 16 ಮಂದಿ ಕಣ್ಮರೆ: ಕೇಂದ್ರ ಕೊಟ್ಟ ಕೆಲಸ ಬಾಯಿ ಮುಚ್ಚಿಕೊಂಡು ಮಾಡಿ: ಕೈ ನಾಯಕರಿಗೆ ಮಲ್ಲಿಕಾರ್ಜುನ ಖರ್ಗೆ ಖಡಕ್ ಎಚ್ಚರಿಕೆ 5 ನಿಮಿಷದಲ್ಲಿ 12 ಕೋಟಿ ಚಿನ್ನಾಭರಣ ಲೂಟಿ: ದರೋಡೆಕೋರರ ಮಾಸ್ಟರ್ ಪ್ಲಾನ್! ಗರ್ಭಿಣಿಯರಿಗೆ 21,000, ಬಡ ಮಹಿಳೆಯರಿಗೆ 2500 ರೂ.: ಬಿಜೆಪಿ ಚುನಾವಣಾ ಪ್ರಣಾಳಿಕೆ ಘೋಷಣೆ ಬೀದರ್ ನಂತರ ಮಂಗಳೂರಿನಲ್ಲಿ ಹಾಡುಹಗಲೇ ಮುಸುಕುಧಾರಿಗಳಿಂದ ಬ್ಯಾಂಕ್ ದರೋಡೆ! ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿವಿಯ ಪ್ರಾದೇಶಿಕ ಕಚೇರಿಗೆ ಶಂಕುಸ್ಥಾಪನೆ ನೆರವೇರಿಸಿ ನುಡಿದಂತೆ ನಡೆದ ಸಿಎಂ 5 ಗಂಟೆ ಶಸ್ತ್ರಚಿಕಿತ್ಸೆ ನಂತರ ಸೈಫ್ ದೇಹದಿಂದ 2.5 ಇಂಚು ಉದ್ದದ ಚಾಕು ಹೊರತೆಗೆದ ವೈದ್ಯರು! ಫೆ.1ರಿಂದ ಏರ್ ಶೋ: ಯಲಹಂಕದ ನಿರ್ಮಾಣ ಹಂತದ ಕಟ್ಟಡಗಳ ಕ್ರೇನ್ ಚಟುವಟಿಕೆ ಸ್ಥಗಿತಕ್ಕೆ ಸೂಚನೆ ಅಬಕಾರಿ ಇಲಾಖೆಯಲ್ಲಿ ವರ್ಗಾವಣೆಗೆ ಹೊಸ ನಿಯಮ: ಸಚಿವ ಆರ್ ಬಿ ತಿಮ್ಮಾಪೂರ ನನ್ನ ಖಾಸಗಿ ವೀಡಿಯೊಗಳನ್ನು ಮರಳಿಸಿ: ಪ್ರಜ್ವಲ್ ರೇವಣ್ಣ ಮನವಿಗೆ ಹೈಕೋರ್ಟ್ ಚಾಟಿ!